‘ತಿಮ್ಮಮ್ಮನಹಳ್ಳಿ ಗ್ರಾಮದ ರಾಜಶೇಖರ್ ವರ್ಷದ ಹಿಂದೆ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಅವರ ದುರ್ವರ್ತನೆಯ ಕಾರಣ ಸದಸ್ಯರು, ಅಧ್ಯಕ್ಷರು ಅವರನ್ನು ಕೆಲಸದಿಂದ ತೆಗೆದು ಹಾಕುವಂತೆ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡಿದ್ದರು. ಅದರಂತೆ ನೋಟಿಸ್ ಜಾರಿ ಮಾಡಲಾಯಿತು. ಬೇರೊಬ್ಬರನ್ನು ಕೆಲಸಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ ಆರಂಭಿಸಲಾಗಿತ್ತು. ಇದರಿಂದ ಆಕ್ರೋಶಗೊಂಡ ರಾಜಶೇಖರ್ ಏಕಾಏಕಿ ಅವರ ತಂದೆಯೊಡನೆ ಹಲ್ಲೆ ನಡೆಸಿದ್ದಾರೆ’ ಎಂದು ಸಂತೋಷ್ ಪೊಲೀಸರಿಗೆ ದೂರು ನೀಡಿದ್ದಾರೆ.