<p>ಪ್ರಜಾವಾಣಿ ವಾರ್ತೆ</p>.<p><strong>ತುಮಕೂರು</strong>: ಭಾರತೀಯ ಮಕ್ಕಳ ಚಿಕಿತ್ಸಾ ಅಕಾಡೆಮಿ (ಐಎಪಿ), ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ, ಸಿದ್ಧಾರ್ಥ ವೈದ್ಯಕೀಯ ಕಾಲೇಜು, ಸಿದ್ಧಗಂಗಾ ವೈದ್ಯಕೀಯ ಕಾಲೇಜು ಆಶ್ರಯದಲ್ಲಿ ‘ತೀವ್ರ ನಿಗಾ ಘಟಕದಲ್ಲಿ ಮಕ್ಕಳ ಚಿಕಿತ್ಸೆ’ ಕುರಿತ ವೈದ್ಯಕೀಯ ಸಮ್ಮೇಳನ ಸೆ. 12ರಿಂದ 14ರ ವರೆಗೆ ನಡೆಯಲಿದೆ.</p>.<p>ರಾಜ್ಯ ಮಟ್ಟದ 16ನೇ ಸಮ್ಮೇಳನ ಮೂರು ದಿನಗಳು ಶ್ರೀದೇವಿ ಕಾಲೇಜಿನಲ್ಲಿ ನಡೆಯಲಿದ್ದು, 500ಕ್ಕೂ ತಜ್ಞರು ಭಾಗವಹಿಸಲಿದ್ದಾರೆ ಎಂದು ಐಎಪಿ ತುಮಕೂರು ಘಟಕದ ಅಧ್ಯಕ್ಷ ಡಾ.ಸಿ.ಅಶೋಕ್ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.</p>.<p>ಹೈದರಾಬಾದ್, ಮುಂಬೈ, ತಮಿಳುನಾಡು, ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ ವಿವಿಧೆಗಳಿಂದ ತಜ್ಞರು ಪಾಲ್ಗೊಳ್ಳಲಿದ್ದು, ವಿಚಾರ ಮಂಡನೆಯಾಗಲಿದೆ ಎಂದರು.</p>.<p>ಐಎಪಿ ಕಾರ್ಯದರ್ಶಿ ಡಾ.ಸಿ.ಕೆ.ಚಂದನ್, ‘ವಿದೇಶಗಳಲ್ಲಿ ಮಕ್ಕಳ ತೀವ್ರ ನಿಗಾ ಘಟಕಗಳಲ್ಲಿ ಚಿಕಿತ್ಸೆ ನೀಡುತ್ತಿರುವ ನವೀನ ವಿಧಾನಗಳ ಬಗ್ಗೆ ಚರ್ಚೆ ನಡೆಯಲಿದೆ’ ಎಂದು ಹೇಳಿದರು.</p>.<p>ಶ್ರೀದೇವಿ ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ.ಎಂ.ಎಲ್.ಹರೇಂದ್ರಕುಮಾರ್, ‘ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಇಂತಹ ಸಮ್ಮೇಳನ ನಡೆಯುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಹಿರಿಯ ತಜ್ಞ ವೈದ್ಯರು ಭಾಗವಹಿಸುತ್ತಿದ್ದಾರೆ’ ಎಂದು ತಿಳಿಸಿದರು.</p>.<p>ಮಕ್ಕಳ ಚಿಕಿತ್ಸಾ ವಿಭಾಗದ ಮುಖ್ಯಸ್ಥೆ ಡಾ.ಎಚ್.ಪಲ್ಲವಿ, ವ್ಯೆದ್ಯಕೀಯ ಅಧೀಕ್ಷಕ ಡಾ.ಮೋಹನ್ ಕುಮಾರ್, ಡಾ.ಮೌನೇಶ್ ಪತ್ತಾರ್, ಡಾ.ಸುಮಂತ್ ಪಾಟೀಲ್, ಡಾ.ಈಶ್ವರ್ ಮಕ್ಕಂ, ಡಾ.ಮಧುಚಂದನ್ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ತುಮಕೂರು</strong>: ಭಾರತೀಯ ಮಕ್ಕಳ ಚಿಕಿತ್ಸಾ ಅಕಾಡೆಮಿ (ಐಎಪಿ), ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ, ಸಿದ್ಧಾರ್ಥ ವೈದ್ಯಕೀಯ ಕಾಲೇಜು, ಸಿದ್ಧಗಂಗಾ ವೈದ್ಯಕೀಯ ಕಾಲೇಜು ಆಶ್ರಯದಲ್ಲಿ ‘ತೀವ್ರ ನಿಗಾ ಘಟಕದಲ್ಲಿ ಮಕ್ಕಳ ಚಿಕಿತ್ಸೆ’ ಕುರಿತ ವೈದ್ಯಕೀಯ ಸಮ್ಮೇಳನ ಸೆ. 12ರಿಂದ 14ರ ವರೆಗೆ ನಡೆಯಲಿದೆ.</p>.<p>ರಾಜ್ಯ ಮಟ್ಟದ 16ನೇ ಸಮ್ಮೇಳನ ಮೂರು ದಿನಗಳು ಶ್ರೀದೇವಿ ಕಾಲೇಜಿನಲ್ಲಿ ನಡೆಯಲಿದ್ದು, 500ಕ್ಕೂ ತಜ್ಞರು ಭಾಗವಹಿಸಲಿದ್ದಾರೆ ಎಂದು ಐಎಪಿ ತುಮಕೂರು ಘಟಕದ ಅಧ್ಯಕ್ಷ ಡಾ.ಸಿ.ಅಶೋಕ್ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.</p>.<p>ಹೈದರಾಬಾದ್, ಮುಂಬೈ, ತಮಿಳುನಾಡು, ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ ವಿವಿಧೆಗಳಿಂದ ತಜ್ಞರು ಪಾಲ್ಗೊಳ್ಳಲಿದ್ದು, ವಿಚಾರ ಮಂಡನೆಯಾಗಲಿದೆ ಎಂದರು.</p>.<p>ಐಎಪಿ ಕಾರ್ಯದರ್ಶಿ ಡಾ.ಸಿ.ಕೆ.ಚಂದನ್, ‘ವಿದೇಶಗಳಲ್ಲಿ ಮಕ್ಕಳ ತೀವ್ರ ನಿಗಾ ಘಟಕಗಳಲ್ಲಿ ಚಿಕಿತ್ಸೆ ನೀಡುತ್ತಿರುವ ನವೀನ ವಿಧಾನಗಳ ಬಗ್ಗೆ ಚರ್ಚೆ ನಡೆಯಲಿದೆ’ ಎಂದು ಹೇಳಿದರು.</p>.<p>ಶ್ರೀದೇವಿ ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ.ಎಂ.ಎಲ್.ಹರೇಂದ್ರಕುಮಾರ್, ‘ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಇಂತಹ ಸಮ್ಮೇಳನ ನಡೆಯುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಹಿರಿಯ ತಜ್ಞ ವೈದ್ಯರು ಭಾಗವಹಿಸುತ್ತಿದ್ದಾರೆ’ ಎಂದು ತಿಳಿಸಿದರು.</p>.<p>ಮಕ್ಕಳ ಚಿಕಿತ್ಸಾ ವಿಭಾಗದ ಮುಖ್ಯಸ್ಥೆ ಡಾ.ಎಚ್.ಪಲ್ಲವಿ, ವ್ಯೆದ್ಯಕೀಯ ಅಧೀಕ್ಷಕ ಡಾ.ಮೋಹನ್ ಕುಮಾರ್, ಡಾ.ಮೌನೇಶ್ ಪತ್ತಾರ್, ಡಾ.ಸುಮಂತ್ ಪಾಟೀಲ್, ಡಾ.ಈಶ್ವರ್ ಮಕ್ಕಂ, ಡಾ.ಮಧುಚಂದನ್ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>