ಕೆಂಚಮ್ಮನಹಳ್ಳಿ-ಪೋಲೇನಹಳ್ಳಿ,-ಸಾಸಲಕುಂಟೆ ರಸ್ತೆ ಕಿತ್ತುಹೋಗಿ ಗುಂಡಿಗಳು ಬಿದ್ದಿವೆ. ಮೊಣಕಾಲುದ್ದದ ಗುಂಡಿಗಳನ್ನು ತಪ್ಪಿಸಲು ಹೋಗಿ ನಿತ್ಯ ವಾಹನ ಸವಾರರು ಅಪಘಾತಕ್ಕೆ ಈಡಾಗುತ್ತಿದ್ದಾರೆ. ಲಿಂಗದಹಳ್ಳಿ, ವೈ.ಎನ್.ಹೊಸಕೋಟೆ ಸೇರಿದಂತೆ ವಿವಿದ ಪ್ರದೇಶಗಳಿಗೆ ಇದೇ ರಸ್ತೆ ಮೂಲಕ ಹೋಗಬೇಕು. ರಸ್ತೆ ಹಾಳಾಗಿರುವುದರಿಂದ ಶಾಲಾ, ಕಾಲೇಜು, ಆಸ್ಪತ್ರೆಗೆ ಹೋಗಲೂ ತಡವಾಗುತ್ತಿದೆ. ಸಕಾಲಕ್ಕೆ ಆಸ್ಪತ್ರೆಗೆ ಹೋಗಲಾಗದೆ ಜೀವ ಕಳೆದುಕೊಂಡಿರುವ ನಿದರ್ಶನ ಇದೆ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ.