ತುಮಕೂರು: ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ನಗರದ ಟೌನ್ಹಾಲ್ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಪ್ರತಿಭಟಿಸಿದರು.
ಮುಖಂಡ ಲಕ್ಕಪ್ಪ ಮಾತನಾಡಿ, ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಸಿದ್ದರಾಮಯ್ಯ ಅವರನ್ನು ಹೊಣೆ ಮಾಡುವುದು ಸರಿಯಲ್ಲ. ಅವರನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಪಕ್ಷ ಉಳಿಸಬೇಕು ಎಂದರೆ ಸಿದ್ದರಾಮಯ್ಯ ಅವರನ್ನು ಮುಂದುವರಿಸುವ ನಿಟ್ಟಿನಲ್ಲಿ ಹೈಕಮಾಂಡ್ ತೀರ್ಮಾನ ಕೈಗೊಳ್ಳಬೇಕು. ಏಕಾಂಗಿಯಾಗಿ ಅವರು ಪಕ್ಷದ ಪರ ಪ್ರಚಾರ ಮಾಡಿದರು. ಸೋಲಿಗೆ ಮುಖಂಡರ ಅಸಹಕಾರವೇ ಕಾರಣ ಎಂದರು.
ಪ್ರಚಾರದಲ್ಲಿ ಭಾಗವಹಿಸದ ಮುಖಂಡರ ಮೇಲೆ ಪಕ್ಷ ಶಿಸ್ತುಕ್ರಮ ಜರುಗಿಸಬೇಕೆ ಹೊರತು, ಪಕ್ಷದ ಗೆಲುವಿಗಾಗಿ ಹೋರಾಡಿದವರ ಮೇಲೆ ಅಲ್ಲ ಎಂದು ಹೇಳಿದರು.
ನಗರಸಭೆ ಮಾಜಿ ಅಧ್ಯಕ್ಷ ಟಿ.ಪಿ.ಮಂಜುನಾಥ್, ಸುರೇಶ್, ಲಕ್ಷ್ಮಿನಾರಾಯಣ್, ಮೋಹನ್, ಅನಿಲ್, ತು.ಬಿ.ಮಲ್ಲೇಶ್, ಸುನೀತಾ ನಟರಾಜ್, ಜ್ವಾಲಾಮಾಲಾ ರಾಜಣ್ಣ, ರಾಕೇಶ್, ರಾಜೇಶ್ ದೊಡ್ಮನೆ, ಮಹೇಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.