<p><strong>ಹಾಗಲವಾಡಿ: </strong>ಗುಬ್ಬಿ ತಾಲ್ಲೂಕಿನ ಹಾಗಲವಾಡಿ ಹೋಬಳಿಯ ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಣೇಶಪುರ ಗ್ರಾಮದಲ್ಲಿ ಸುಮಾರು ಎರಡೂವರೆ ದಶಕಗಳ ಹಿಂದೆ ನಿವೇಶನ ಹಂಚಿಕೆ ಮಾಡಲಾಗಿದ್ದು, ಇನ್ನೂ ಅಗತ್ಯ ಮೂಲಸೌಕರ್ಯ ಕಲ್ಪಿಸಿಲ್ಲ. ಇದರಿಂದ ಜನರು ತೊಂದರೆ ಅನುಭವಿಸುವಂತಾಗಿದೆ.</p>.<p>ಈ ಪ್ರದೇಶದಲ್ಲಿ ಸುಮಾರು 30ಕ್ಕೂ ಹೆಚ್ಚು ಮನೆಗಳನ್ನು ಜನರು ನಿರ್ಮಿಸಿಕೊಂಡಿದ್ದಾರೆ. ಇನ್ನೂ ವಸತಿ ನಿರ್ಮಿಸಲು ಖಾಲಿ ನಿವೇಶನಗಳು ಇವೆ. ನಿವೇಶನಗಳಲ್ಲಿ ಮನೆ ನಿರ್ಮಾಣ ಮಾಡುವ ಆಸೆ ಇದ್ದರೂ ಸರಿಯಾದ ರಸ್ತೆ ಇಲ್ಲದ ಕಾರಣ ನಿವೇಶನದಾರರು ಹಿಂದೇಟು ಹಾಕುತ್ತಿದ್ದಾರೆ.ಇಲ್ಲಿ ವಾಸಿಸುವವರಲ್ಲಿ ಹಿಂದುಳಿದ ಜನಾಂಗದವರೇ ಹೆಚ್ಚಿದ್ದಾರೆ.</p>.<p>ಮನೆಯ ಮುಂದಿನ ರಸ್ತೆ ದುರಸ್ತಿಯಾಗಬೇಕಿದೆ. ನಿವೇಶನ ಹಂಚಿಕೆ ವೇಳೆ ಮಣ್ಣಿನ ರಸ್ತೆ ಹಾಗೂ ಚರಂಡಿ ನಿರ್ಮಿಸಿದ್ದು ಬಿಟ್ಟರೆ ಇಂದಿಗೂ ರಸ್ತೆ ದುರಸ್ತಿ ಕಂಡಿಲ್ಲ. ಮುಳ್ಳಿನ ಗಿಡಗಳು ಬೆಳೆದು ನಿಂತಿದ್ದು ಭಯಪಡುವಂತಾಗಿದೆ.</p>.<p>ಚುನಾವಣೆ ಸಂದರ್ಭದಲ್ಲಿ ಜನಪ್ರತಿನಿಧಿಗಳಲ್ಲಿ ಮನವಿ ಮಾಡಿದರೂ ಯಾರೊಬ್ಬರು ಗಮನಹರಿಸುತ್ತಿಲ್ಲ. ರಾತ್ರಿವೇಳೆ ಮನೆಯಿಂದ ಹೊರಬರಲು ಭಯಪಡುವಂತಾಗಿದೆ. ಈಗಲಾದರೂ ಸಂಬಂಧಪಟ್ಟವರು ಗಮನಹರಿಸಿ ಸಂಚಾರಕ್ಕೆ ಯೋಗ್ಯ ರಸ್ತೆ ನಿರ್ಮಾಣ ಮಾಡಿಕೊಡಬೇಕು ಎಂಬುದು ಜನರ ಆಗ್ರಹ.</p>.<p>‘ಇಲ್ಲಿಸುಮಾರು 15 ವರ್ಷಗಳಿಂದ ವಾಸವಾಗಿದ್ದೇವೆ. ಇದೇ ರಸ್ತೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಚುನಾವಣಾ ಸಂದರ್ಭದಲ್ಲಿ ರಸ್ತೆ, ಚರಂಡಿ ನಿರ್ಮಿಸುವುದಾಗಿ ಹೋಗುವ ರಾಜಕಾರಣಿಗಳು ಮತ್ತೆ ಚುನಾವಣೆ ಬಂದಾಗ ಮಾತ್ರ ನಮ್ಮನ್ನು ನೆನಪು ಮಾಡಿಕೊಳ್ಳುತ್ತಾರೆ’ ಎಂದು ಗ್ರಾಮಸ್ಥೆ ನಾಗರತ್ನಮ್ಮ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಗಲವಾಡಿ: </strong>ಗುಬ್ಬಿ ತಾಲ್ಲೂಕಿನ ಹಾಗಲವಾಡಿ ಹೋಬಳಿಯ ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಣೇಶಪುರ ಗ್ರಾಮದಲ್ಲಿ ಸುಮಾರು ಎರಡೂವರೆ ದಶಕಗಳ ಹಿಂದೆ ನಿವೇಶನ ಹಂಚಿಕೆ ಮಾಡಲಾಗಿದ್ದು, ಇನ್ನೂ ಅಗತ್ಯ ಮೂಲಸೌಕರ್ಯ ಕಲ್ಪಿಸಿಲ್ಲ. ಇದರಿಂದ ಜನರು ತೊಂದರೆ ಅನುಭವಿಸುವಂತಾಗಿದೆ.</p>.<p>ಈ ಪ್ರದೇಶದಲ್ಲಿ ಸುಮಾರು 30ಕ್ಕೂ ಹೆಚ್ಚು ಮನೆಗಳನ್ನು ಜನರು ನಿರ್ಮಿಸಿಕೊಂಡಿದ್ದಾರೆ. ಇನ್ನೂ ವಸತಿ ನಿರ್ಮಿಸಲು ಖಾಲಿ ನಿವೇಶನಗಳು ಇವೆ. ನಿವೇಶನಗಳಲ್ಲಿ ಮನೆ ನಿರ್ಮಾಣ ಮಾಡುವ ಆಸೆ ಇದ್ದರೂ ಸರಿಯಾದ ರಸ್ತೆ ಇಲ್ಲದ ಕಾರಣ ನಿವೇಶನದಾರರು ಹಿಂದೇಟು ಹಾಕುತ್ತಿದ್ದಾರೆ.ಇಲ್ಲಿ ವಾಸಿಸುವವರಲ್ಲಿ ಹಿಂದುಳಿದ ಜನಾಂಗದವರೇ ಹೆಚ್ಚಿದ್ದಾರೆ.</p>.<p>ಮನೆಯ ಮುಂದಿನ ರಸ್ತೆ ದುರಸ್ತಿಯಾಗಬೇಕಿದೆ. ನಿವೇಶನ ಹಂಚಿಕೆ ವೇಳೆ ಮಣ್ಣಿನ ರಸ್ತೆ ಹಾಗೂ ಚರಂಡಿ ನಿರ್ಮಿಸಿದ್ದು ಬಿಟ್ಟರೆ ಇಂದಿಗೂ ರಸ್ತೆ ದುರಸ್ತಿ ಕಂಡಿಲ್ಲ. ಮುಳ್ಳಿನ ಗಿಡಗಳು ಬೆಳೆದು ನಿಂತಿದ್ದು ಭಯಪಡುವಂತಾಗಿದೆ.</p>.<p>ಚುನಾವಣೆ ಸಂದರ್ಭದಲ್ಲಿ ಜನಪ್ರತಿನಿಧಿಗಳಲ್ಲಿ ಮನವಿ ಮಾಡಿದರೂ ಯಾರೊಬ್ಬರು ಗಮನಹರಿಸುತ್ತಿಲ್ಲ. ರಾತ್ರಿವೇಳೆ ಮನೆಯಿಂದ ಹೊರಬರಲು ಭಯಪಡುವಂತಾಗಿದೆ. ಈಗಲಾದರೂ ಸಂಬಂಧಪಟ್ಟವರು ಗಮನಹರಿಸಿ ಸಂಚಾರಕ್ಕೆ ಯೋಗ್ಯ ರಸ್ತೆ ನಿರ್ಮಾಣ ಮಾಡಿಕೊಡಬೇಕು ಎಂಬುದು ಜನರ ಆಗ್ರಹ.</p>.<p>‘ಇಲ್ಲಿಸುಮಾರು 15 ವರ್ಷಗಳಿಂದ ವಾಸವಾಗಿದ್ದೇವೆ. ಇದೇ ರಸ್ತೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಚುನಾವಣಾ ಸಂದರ್ಭದಲ್ಲಿ ರಸ್ತೆ, ಚರಂಡಿ ನಿರ್ಮಿಸುವುದಾಗಿ ಹೋಗುವ ರಾಜಕಾರಣಿಗಳು ಮತ್ತೆ ಚುನಾವಣೆ ಬಂದಾಗ ಮಾತ್ರ ನಮ್ಮನ್ನು ನೆನಪು ಮಾಡಿಕೊಳ್ಳುತ್ತಾರೆ’ ಎಂದು ಗ್ರಾಮಸ್ಥೆ ನಾಗರತ್ನಮ್ಮ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>