<p><strong>ತುಮಕೂರು:</strong> ಇತರರ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಪ್ರವೃತ್ತಿ ಹೆಚ್ಚಿದರೆ ಆತ್ಮಹತ್ಯೆಯಂತಹ ಸಾಮಾಜಿಕ ಸಮಸ್ಯೆಗಳಿಗೆ ಕಡಿವಾಣ ಹಾಕಲು ಸಾಧ್ಯ ಎಂದು ಲೇಖಕಿ ಅನ್ನಪೂರ್ಣ ವೆಂಕಟನಂಜಪ್ಪ ಹೇಳಿದರು.</p>.<p>ವರದಕ್ಷಿಣೆ ವಿರೋಧಿ ವೇದಿಕೆ, ಸಾಂತ್ವನ ಕೇಂದ್ರದಿಂದ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ಅಂಗವಾಗಿ ಇಲ್ಲಿನ ಸಾಂತ್ವನ ಕೇಂದ್ರದಲ್ಲಿ ಆಯೋಜಿಸಿದ್ದ ಚಿಂತನಾ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಆಧುನಿಕತೆಯ ಈ ಯುಗದಲ್ಲಿ ಎಲ್ಲರೂ ಹಣದ ಹಿಂದೆ ಹೋಗುತ್ತಿದ್ದಾರೆ. ಕುಟುಂಬ ಪ್ರೀತಿ ಮರೆಯುತ್ತಿದ್ದಾರೆ. ಇದರ ಪರಿಣಾಮ ಕುಟುಂಬಗಳಲ್ಲಿ ಪ್ರೀತಿಯೇ ಕಣ್ಮರೆ ಆಗುತ್ತಿದೆ. ಆತ್ಮಹತ್ಯೆ ಪ್ರಕರಣಗಳಿಗೂ ಪ್ರೇರಣೆ ಆಗುತ್ತಿದೆ ಎಂದು ವಿಷಾದಿಸಿದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಬಾ.ಹ.ರಮಾಕುಮಾರಿ, ಲಾಕ್ಡೌನ್ ಸಂದರ್ಭದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆದಿವೆ. ಆದರೆ ಬಹಿರಂಗವಾಗಿಲ್ಲ. ಮನೆಯಲ್ಲಿಯೇ ಕೆಲಸ ಮಾಡುತ್ತಿರುವ ಉದ್ಯೋಗಿಗಳೂ ಬೇರೆ ಬೇರೆ ರೀತಿಯ ದೌರ್ಜನ್ಯ ಎದುರಿಸುತ್ತಿದ್ದಾರೆ ಎಂದರು.</p>.<p>ಲೇಖಕಿ ಸಿ.ಎಲ್.ಸುನಂದಮ್ಮ, ವಿದ್ಯಾರ್ಥಿಗಳ ಕೈಗೆ ಈಗ ಮೊಬೈಲ್ಗಳು ಸುಲಭವಾಗಿ ಸಿಗುತ್ತಿವೆ. ಮಕ್ಕಳು ಮೊಬೈಲ್ ಗೀಳಿಗೆ ಒಳಗಾಗಿ ಅನಾರೋಗ್ಯಕರ ಆಟಗಳಿಗೆ ತುತ್ತಾಗುತ್ತಿದ್ದಾರೆ ಎಂದು ಹೇಳಿದರು.</p>.<p>ವರದಕ್ಷಿಣೆ ವಿರೋಧಿ ವೇದಿಕೆ ಪ್ರಧಾನ ಕಾರ್ಯದರ್ಶಿ ಸಾ.ಚಿ.ರಾಜಕುಮಾರ, ನಿರ್ಭಯ ಮಹಿಳಾ ವೇದಿಕೆ ಮುಖ್ಯಸ್ಥೆ ಗೀತಾ ನಾಗೇಶ್, ಸಿ.ಲಲಿತಾಮಲ್ಲಪ್ಪ, ಪಾರ್ವತಮ್ಮ, ಗಂಗಲಕ್ಷ್ಮಿ, ಅಂಬುಜಾಕ್ಷಿ, ಸವಿತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಇತರರ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಪ್ರವೃತ್ತಿ ಹೆಚ್ಚಿದರೆ ಆತ್ಮಹತ್ಯೆಯಂತಹ ಸಾಮಾಜಿಕ ಸಮಸ್ಯೆಗಳಿಗೆ ಕಡಿವಾಣ ಹಾಕಲು ಸಾಧ್ಯ ಎಂದು ಲೇಖಕಿ ಅನ್ನಪೂರ್ಣ ವೆಂಕಟನಂಜಪ್ಪ ಹೇಳಿದರು.</p>.<p>ವರದಕ್ಷಿಣೆ ವಿರೋಧಿ ವೇದಿಕೆ, ಸಾಂತ್ವನ ಕೇಂದ್ರದಿಂದ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ಅಂಗವಾಗಿ ಇಲ್ಲಿನ ಸಾಂತ್ವನ ಕೇಂದ್ರದಲ್ಲಿ ಆಯೋಜಿಸಿದ್ದ ಚಿಂತನಾ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಆಧುನಿಕತೆಯ ಈ ಯುಗದಲ್ಲಿ ಎಲ್ಲರೂ ಹಣದ ಹಿಂದೆ ಹೋಗುತ್ತಿದ್ದಾರೆ. ಕುಟುಂಬ ಪ್ರೀತಿ ಮರೆಯುತ್ತಿದ್ದಾರೆ. ಇದರ ಪರಿಣಾಮ ಕುಟುಂಬಗಳಲ್ಲಿ ಪ್ರೀತಿಯೇ ಕಣ್ಮರೆ ಆಗುತ್ತಿದೆ. ಆತ್ಮಹತ್ಯೆ ಪ್ರಕರಣಗಳಿಗೂ ಪ್ರೇರಣೆ ಆಗುತ್ತಿದೆ ಎಂದು ವಿಷಾದಿಸಿದರು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಬಾ.ಹ.ರಮಾಕುಮಾರಿ, ಲಾಕ್ಡೌನ್ ಸಂದರ್ಭದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆದಿವೆ. ಆದರೆ ಬಹಿರಂಗವಾಗಿಲ್ಲ. ಮನೆಯಲ್ಲಿಯೇ ಕೆಲಸ ಮಾಡುತ್ತಿರುವ ಉದ್ಯೋಗಿಗಳೂ ಬೇರೆ ಬೇರೆ ರೀತಿಯ ದೌರ್ಜನ್ಯ ಎದುರಿಸುತ್ತಿದ್ದಾರೆ ಎಂದರು.</p>.<p>ಲೇಖಕಿ ಸಿ.ಎಲ್.ಸುನಂದಮ್ಮ, ವಿದ್ಯಾರ್ಥಿಗಳ ಕೈಗೆ ಈಗ ಮೊಬೈಲ್ಗಳು ಸುಲಭವಾಗಿ ಸಿಗುತ್ತಿವೆ. ಮಕ್ಕಳು ಮೊಬೈಲ್ ಗೀಳಿಗೆ ಒಳಗಾಗಿ ಅನಾರೋಗ್ಯಕರ ಆಟಗಳಿಗೆ ತುತ್ತಾಗುತ್ತಿದ್ದಾರೆ ಎಂದು ಹೇಳಿದರು.</p>.<p>ವರದಕ್ಷಿಣೆ ವಿರೋಧಿ ವೇದಿಕೆ ಪ್ರಧಾನ ಕಾರ್ಯದರ್ಶಿ ಸಾ.ಚಿ.ರಾಜಕುಮಾರ, ನಿರ್ಭಯ ಮಹಿಳಾ ವೇದಿಕೆ ಮುಖ್ಯಸ್ಥೆ ಗೀತಾ ನಾಗೇಶ್, ಸಿ.ಲಲಿತಾಮಲ್ಲಪ್ಪ, ಪಾರ್ವತಮ್ಮ, ಗಂಗಲಕ್ಷ್ಮಿ, ಅಂಬುಜಾಕ್ಷಿ, ಸವಿತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>