ತುಮಕೂರು: ತುಮಕೂರು, ಶಿರಾ, ತಿಪಟೂರು ಮತ್ತು ಪಾವಗಡ ತಾಲ್ಲೂಕು ಹೊರತುಪಡಿಸಿ ಬೇರೆ ತಾಲ್ಲೂಕುಗಳಲ್ಲಿ ಕೃಷಿ, ಉದ್ಯೋಗ ಖಾತ್ರಿ ಮತ್ತು ಗ್ರಾಮೀಣ ಭಾಗದಲ್ಲಿ ಕೈಗಾರಿಕೆಗಳ ಚಟುವಟಿಕೆಗಳನ್ನು ಅಂತರ ಕಾಯ್ದುಕೊಂಡು ನಡೆಸಲು ಅನುಮತಿ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ವಿಡಿಯೊ ಕಾನ್ಫರೆನ್ಸ್ನಲ್ಲಿ ಮುಖ್ಯಮಂತ್ರಿಗೆ ಮಾಹಿತಿ ನೀಡಿದರು.