<p>ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಶೆಟ್ಟಿಗೊಂಡನಹಳ್ಳಿಯಲ್ಲಿ ಹಳ್ಳಿಕಾರ್ ಮಠದ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಹಸಿರು ನಿಶಾನೆ ದೊರೆತಿದೆ ಎಂದು ಮಠದ ಟ್ರಸ್ಟ್ ಅಧ್ಯಕ್ಷ ನಾಗಯ್ಯ ತಿಳಿಸಿದರು.</p>.<p>ತಾಲ್ಲೂಕಿನ ಶೆಟ್ಟಿಗೊಂಡನಹಳ್ಳಿಯ ಹಳ್ಳಿಕಾರ್ ಮಠದ ಆವರಣದಲ್ಲಿ ಬೇವು, ಅರಳಿ, ಸೇರಿದಂತೆ ವಿವಿಧ ಜಾತಿಯ ಸಸಿಗಳನ್ನು ನೆಡುವ ಮೂಲಕ ಮಠದ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.</p>.<p>ಮಠವು ಹಳ್ಳೀಕಾರ್ ಸಮುದಾಯದ ಶಕ್ತಿ ಪೀಠವಾಗಿದ್ದು, ಸಮಾನ ಮನಸ್ಕರ ಒತ್ತಾಸೆಯಂತೆ ಮಠ ಸ್ಥಾಪಿಸುವ ಸಂಕಲ್ಪ ಮಾಡಲಾಗಿತ್ತು. ಕೋವಿಡ್ನಿಂದಾಗಿ ಇದು ವಿಳಂಬವಾಗಿತ್ತು ಎಂದರು.</p>.<p>ಮಠವು ಹಳ್ಳಿಕಾರ್ ಸಮುದಾಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಮಹತ್ವಾಕಾಂಕ್ಷೆ ಹೊಂದಿದೆ. ಈ ನಿಟ್ಟಿನಲ್ಲಿ ಹಳ್ಳೀಕಾರ್ ಮಠದ ಆಸುಪಾಸಿನಲ್ಲಿ ಸುಮಾರು 5 ಎಕರೆ ಪ್ರದೇಶದಲ್ಲಿ ಉತ್ತಮ ಶಿಕ್ಷಣ ಸಂಸ್ಥೆ ಸ್ಥಾಪಿಸುವ ಆಶಯ ಹೊಂದಿದೆ ಎಂದರು.</p>.<p>ಈಗಾಗಲೇ 1 ಕೋಟಿ ವೆಚ್ಚದಲ್ಲಿ ಮಠದ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಶೀಘ್ರ ಉತ್ತಮ ಶಿಕ್ಷಣ ಸಂಸ್ಥೆ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ ಎಂದರು.</p>.<p>ಮಠದ ಪದಾಧಿಕಾರಿಗಳಾದ ದಯಾನಂದ್, ಪಟೇಲ್ ಪಾಂಡು, ಬೆಟ್ಟಸ್ವಾಮಿ, ಪುಟ್ಟೇಗೌಡ, ಸಣ್ಣಯ್ಯ, ವೀರತಯ್ಯ, ರಮೇಶ್, ರಂಗಶ್ರೀ, ಕುನ್ನಯ್ಯ, ಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಶೆಟ್ಟಿಗೊಂಡನಹಳ್ಳಿಯಲ್ಲಿ ಹಳ್ಳಿಕಾರ್ ಮಠದ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಹಸಿರು ನಿಶಾನೆ ದೊರೆತಿದೆ ಎಂದು ಮಠದ ಟ್ರಸ್ಟ್ ಅಧ್ಯಕ್ಷ ನಾಗಯ್ಯ ತಿಳಿಸಿದರು.</p>.<p>ತಾಲ್ಲೂಕಿನ ಶೆಟ್ಟಿಗೊಂಡನಹಳ್ಳಿಯ ಹಳ್ಳಿಕಾರ್ ಮಠದ ಆವರಣದಲ್ಲಿ ಬೇವು, ಅರಳಿ, ಸೇರಿದಂತೆ ವಿವಿಧ ಜಾತಿಯ ಸಸಿಗಳನ್ನು ನೆಡುವ ಮೂಲಕ ಮಠದ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.</p>.<p>ಮಠವು ಹಳ್ಳೀಕಾರ್ ಸಮುದಾಯದ ಶಕ್ತಿ ಪೀಠವಾಗಿದ್ದು, ಸಮಾನ ಮನಸ್ಕರ ಒತ್ತಾಸೆಯಂತೆ ಮಠ ಸ್ಥಾಪಿಸುವ ಸಂಕಲ್ಪ ಮಾಡಲಾಗಿತ್ತು. ಕೋವಿಡ್ನಿಂದಾಗಿ ಇದು ವಿಳಂಬವಾಗಿತ್ತು ಎಂದರು.</p>.<p>ಮಠವು ಹಳ್ಳಿಕಾರ್ ಸಮುದಾಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಮಹತ್ವಾಕಾಂಕ್ಷೆ ಹೊಂದಿದೆ. ಈ ನಿಟ್ಟಿನಲ್ಲಿ ಹಳ್ಳೀಕಾರ್ ಮಠದ ಆಸುಪಾಸಿನಲ್ಲಿ ಸುಮಾರು 5 ಎಕರೆ ಪ್ರದೇಶದಲ್ಲಿ ಉತ್ತಮ ಶಿಕ್ಷಣ ಸಂಸ್ಥೆ ಸ್ಥಾಪಿಸುವ ಆಶಯ ಹೊಂದಿದೆ ಎಂದರು.</p>.<p>ಈಗಾಗಲೇ 1 ಕೋಟಿ ವೆಚ್ಚದಲ್ಲಿ ಮಠದ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಶೀಘ್ರ ಉತ್ತಮ ಶಿಕ್ಷಣ ಸಂಸ್ಥೆ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ ಎಂದರು.</p>.<p>ಮಠದ ಪದಾಧಿಕಾರಿಗಳಾದ ದಯಾನಂದ್, ಪಟೇಲ್ ಪಾಂಡು, ಬೆಟ್ಟಸ್ವಾಮಿ, ಪುಟ್ಟೇಗೌಡ, ಸಣ್ಣಯ್ಯ, ವೀರತಯ್ಯ, ರಮೇಶ್, ರಂಗಶ್ರೀ, ಕುನ್ನಯ್ಯ, ಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>