ಪಾವಗಡ: ತಾಲ್ಲೂಕಿನ ಕಣಿವೇನಹಳ್ಳಿ ಗೇಟ್ ಬಳಿ ಭಾನುವಾರ ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕ್ರೇನ್ ಡಿಕ್ಕಿ ಹೊಡೆದು, ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ತಾಲ್ಲೂಕಿನ ಕಣಿವೇನಹಳ್ಳಿ ಗ್ರಾಮದ ಶ್ರೀನಿವಾಸ್ (54) ಮೃತರು.
ಕಣಿವೇನಹಳ್ಳಿ ಗೇಟ್ ಬಳಿ ದ್ವಿಚಕ್ರ ವಾಹನದೊಂದಿಗೆ ನಿಂತಿದ್ದಾಗ ಪಟ್ಟಣದ ಕಡೆಯಿಂದ ಬರುತ್ತಿದ್ದ ಕ್ರೇನ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದಿದೆ.