ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,‘ಎಚ್.ಡಿ.ಕುಮಾರಸ್ವಾಮಿ ಅವರು ಫೋನ್ ಕದ್ದಾಲಿಕೆ ಮಾಡಿದ್ದರೆ ಅವರನ್ನು ಹಿಡಿದುಕೊಂಡು ಹೋಗಲಿ ಬಿಡಿ. ಬೇಡ ಎಂದು ಹೇಳುವವರು ಯಾರು? ಮಾಡಬಾರದ್ದನ್ನು ಮಾಡಿ ದುಡ್ಡು ಹೊಡೆದಿದ್ದರೆ ಅವರನ್ನೂ ಹಿಡಿದುಕೊಂಡು ಹೋಗುತ್ತಾರೆ. ಅವರನ್ನು ಹಿಡಿಯಬಾರದು ಎಂದು ಕಾನೂನು ಏನಾದರೂ ಇದೆಯಾ’ ಎಂದು ಪ್ರಶ್ನಿಸಿದರು.