‘ಸಂಸ್ಥೆಯ ಆರ್ಥಿಕ ಸ್ಥಿತಿ ಹದಗೆಟ್ಟಿದೆ ಎಂದು ಡಾ. ಭೀಮಾಶಂಕರ ಬಿಲಗುಂದಿ ಗುಂಪಿನವರು ಆರೋಪಿಸಿದ್ದಾರೆ. ಆದರೆ ನಮ್ಮ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ್ದೇವೆ. ಪಿಡಿಎ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿಯರಿಗಾಗಿ ₹2 ಕೋಟಿ ವೆಚ್ಚದ ವಸತಿಗೃಹ ನಿರ್ಮಿಸಿದ್ದೇವೆ. ₹18 ಕೋಟಿ ಆದಾಯ ತೆರಿಗೆ ಬಾಕಿ ಪಾವತಿಸಲಾಗಿದ್ದು, ₹1.5 ಕೋಟಿ ಹಿಂತಿರುಗಿ ಬಂದಿದೆ. ಟೆಕ್ಯುಪ್ ಯೋಜನೆ ಅಡಿ ಪಿಡಿಎ ಕಾಲೇಜಿಗೆ ₹7.5 ಕೋಟಿ ಅನುದಾನ ಮಂಜೂರಾಗಿದ್ದು, ₹2 ಕೋಟಿ ಈಗಾಗಲೇ ಬಿಡುಗಡೆಯಾಗಿದೆ. ಇವು ಅಭಿವೃದ್ಧಿ ಕೆಲಸಗಳಲ್ಲವೇ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.‘ಸುರಪುರದಲ್ಲಿ ಪದವಿಪೂರ್ವ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. ವಿ.ಜಿ. ಮಹಿಳಾ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ. ನಾವು ಉತ್ತಮ ಆಡಳಿತ ನೀಡಿದ್ದರೂ ನಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ. ಅಲ್ಲದೆ ಮತದಾರರು ಬದಲಾವಣೆ ಬಯಸಿದ್ದರಿಂದ ನಮಗೆ ಸೋಲುಂಟಾಗಿದೆ. ಮತದಾರರ ತೀರ್ಪಿಗೆ ತಲೆ ಬಾಗುತ್ತೇವೆ’ ಎಂದರು.