<p><strong>ಗುಬ್ಬಿ: </strong>ಕಡಬ ಹೋಬಳಿ ಬಾಡೇನಹಳ್ಳಿ ಹಾಗೂ ಗ್ರಾಮವನ್ನು ಸಂಪರ್ಕಿಸುವ ರಸ್ತೆಗಳಲ್ಲಿ ಹಳ್ಳ, ಗುಂಡಿ ಬಿದ್ದು ಸಂಪೂರ್ಣ ಹಾಳಾಗಿವೆ.<br />ಮಳೆಗಾಲದಲ್ಲಿ ನೀರು ನಿಂತು ಕೆಸರಾಗಿದೆ. ಗ್ರಾಮಸ್ಥರು ರಸ್ತೆಯಲ್ಲಿ ತೆಂಗು, ಅಡಿಕೆ, ಬಾಳೆ ನೆಟ್ಟು ಪ್ರತಿಭಟನೆ ನಡೆಸಿದರು.</p>.<p>ಗ್ರಾಮದ ರಸ್ತೆ ದುರಸ್ತಿಗೆ ಸಂಸದರು, ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದರೂ, ರಸ್ತೆ ಸರಿಪಡಿಸಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದರು.</p>.<p>ಈ ಗ್ರಾಮವು ಸಂಸದರ ಆದರ್ಶ ಪಂಚಾಯಿತಿ ಮಾರಶೆಟ್ಟಿಹಳ್ಳಿ ವ್ಯಾಪ್ತಿಯಲ್ಲಿದ್ದರೂ ಸಂಸದರು ಯಾವುದೇ ಅನುದಾನವನ್ನು ನೀಡದೆ ಗ್ರಾಮವನ್ನು ಕಡೆಗಣಿಸಿದ್ದಾರೆ. ಶಾಸಕರು ಇತ್ತ ತಿರುಗಿಯೂ ನೋಡುತ್ತಿಲ್ಲ. ಅಳಿಲುಘಟ್ಟ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಈ ಗ್ರಾಮಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯರು ಒಮ್ಮೆಯೂ ಭೇಟಿ ನೀಡಿಲ್ಲ ಎಂದು ದೂರಿದರು.</p>.<p>ಗ್ರಾಮದ ಪರಿಶಿಷ್ಟರ ಕೇರಿಗೆ ನಾಲ್ಕು ತಿಂಗಳಿಂದ ಕುಡಿಯುವ ನೀರು ಸರಬರಾಜು ಆಗುತ್ತಿಲ್ಲ. ಅಧಿಕಾರಿಗಳನ್ನು ಕೇಳಿದರೆ ಯಾವುದೇ ಅನುದಾನವಿಲ್ಲ ಎಂದು ಹೇಳುತ್ತಾರೆ. ಹೀಗಾದರೆ ಸಮಸ್ಯೆಗಳ ಬಗ್ಗೆ ಯಾರ ಬಳಿ ಹೇಳಬೇಕು ಎಂದು ಗ್ರಾಮದ ಕುಮಾರ್ ಪ್ರಶ್ನಿಸಿದರು.</p>.<p>ಗ್ರಾಮಕ್ಕೆ ಈವರೆಗೆ ಒಂದು ಸರ್ಕಾರಿ ಬಸ್ ಬರುತ್ತಿತ್ತು. ಲಾಕ್ಡೌನ್ ನೆಪದಲ್ಲಿ ಅದನ್ನು ನಿಲ್ಲಿಸಿದ್ದಾರೆ. ವಿದ್ಯಾರ್ಥಿಗಳಿಗೆ ಹಾಗೂ ಆಸ್ಪತ್ರೆಗೆ ಹೋಗುವ ರೋಗಿಗಳಿಗೆ ತೊಂದರೆಯಾಗುತಿದೆ. ಗ್ರಾಮಕ್ಕೆ ತಕ್ಷಣವೇ ಬಸ್ ವ್ಯವಸ್ಥೆ ಮಾಡಬೇಕು ಎಂದು ಗ್ರಾಮದ ಜಯಣ್ಣ ಆಗ್ರಹಿಸಿದರು.</p>.<p>ತಾಲ್ಲೂಕಿನ ಗಡಿಭಾಗದಲ್ಲಿರುವ ಈ ಗ್ರಾಮವನ್ನು ಜನಪ್ರತಿನಿಧಿಗಳು, ಅಧಿಕಾರಿಗಳು ಕಡೆಗಣಿಸುತ್ತಿದ್ದು, ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಬಹಿಷ್ಕರಿಸುವ ಬಗ್ಗೆ ಚಿಂತಿಸಿದ್ದೇವೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗಮನಹರಿಸಿ ಸೌಕರ್ಯ ಒದಗಿಸದಿದ್ದರೆ, ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದರು.</p>.<p>‘ಗ್ರಾಮ ಪಂಚಾಯಿತಿ ಸದಸ್ಯನಾಗಿ ಆಯ್ಕೆಯಾದ ನಂತರ ಸಾವಿರಾರು ರೂಪಾಯಿ ಸ್ವಂತ ಹಣ ಖರ್ಚು ಮಾಡಿ, ಕೆಲವು ಕಾಮಗಾರಿ ಮಾಡಿಸಿದ್ದೇನೆ. ಎಲ್ಲವನ್ನು ನಾನೇ ಮಾಡಲು ಸಾಧ್ಯವಾಗುವುದಿಲ್ಲ. ಗ್ರಾಮ ಪಂಚಾಯಿತಿಯ ಹದಿನಾಲ್ಕನೇ ಹಣಕಾಸು ಯೋಜನೆಯಲ್ಲಿ ಈ ಗ್ರಾಮಕ್ಕೆ ಜಲ್ಲಿ ರಸ್ತೆಗಾಗಿ ₹1 ಲಕ್ಷ ಮೀಸಲಿಡಲಾಗಿದೆ’ ಎಂದು ಗ್ರಾಮ ಪಂಚಾಯಿತಿ ಸದಸ್ಯ ಮುನೇಶ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ: </strong>ಕಡಬ ಹೋಬಳಿ ಬಾಡೇನಹಳ್ಳಿ ಹಾಗೂ ಗ್ರಾಮವನ್ನು ಸಂಪರ್ಕಿಸುವ ರಸ್ತೆಗಳಲ್ಲಿ ಹಳ್ಳ, ಗುಂಡಿ ಬಿದ್ದು ಸಂಪೂರ್ಣ ಹಾಳಾಗಿವೆ.<br />ಮಳೆಗಾಲದಲ್ಲಿ ನೀರು ನಿಂತು ಕೆಸರಾಗಿದೆ. ಗ್ರಾಮಸ್ಥರು ರಸ್ತೆಯಲ್ಲಿ ತೆಂಗು, ಅಡಿಕೆ, ಬಾಳೆ ನೆಟ್ಟು ಪ್ರತಿಭಟನೆ ನಡೆಸಿದರು.</p>.<p>ಗ್ರಾಮದ ರಸ್ತೆ ದುರಸ್ತಿಗೆ ಸಂಸದರು, ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದರೂ, ರಸ್ತೆ ಸರಿಪಡಿಸಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದರು.</p>.<p>ಈ ಗ್ರಾಮವು ಸಂಸದರ ಆದರ್ಶ ಪಂಚಾಯಿತಿ ಮಾರಶೆಟ್ಟಿಹಳ್ಳಿ ವ್ಯಾಪ್ತಿಯಲ್ಲಿದ್ದರೂ ಸಂಸದರು ಯಾವುದೇ ಅನುದಾನವನ್ನು ನೀಡದೆ ಗ್ರಾಮವನ್ನು ಕಡೆಗಣಿಸಿದ್ದಾರೆ. ಶಾಸಕರು ಇತ್ತ ತಿರುಗಿಯೂ ನೋಡುತ್ತಿಲ್ಲ. ಅಳಿಲುಘಟ್ಟ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಈ ಗ್ರಾಮಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯರು ಒಮ್ಮೆಯೂ ಭೇಟಿ ನೀಡಿಲ್ಲ ಎಂದು ದೂರಿದರು.</p>.<p>ಗ್ರಾಮದ ಪರಿಶಿಷ್ಟರ ಕೇರಿಗೆ ನಾಲ್ಕು ತಿಂಗಳಿಂದ ಕುಡಿಯುವ ನೀರು ಸರಬರಾಜು ಆಗುತ್ತಿಲ್ಲ. ಅಧಿಕಾರಿಗಳನ್ನು ಕೇಳಿದರೆ ಯಾವುದೇ ಅನುದಾನವಿಲ್ಲ ಎಂದು ಹೇಳುತ್ತಾರೆ. ಹೀಗಾದರೆ ಸಮಸ್ಯೆಗಳ ಬಗ್ಗೆ ಯಾರ ಬಳಿ ಹೇಳಬೇಕು ಎಂದು ಗ್ರಾಮದ ಕುಮಾರ್ ಪ್ರಶ್ನಿಸಿದರು.</p>.<p>ಗ್ರಾಮಕ್ಕೆ ಈವರೆಗೆ ಒಂದು ಸರ್ಕಾರಿ ಬಸ್ ಬರುತ್ತಿತ್ತು. ಲಾಕ್ಡೌನ್ ನೆಪದಲ್ಲಿ ಅದನ್ನು ನಿಲ್ಲಿಸಿದ್ದಾರೆ. ವಿದ್ಯಾರ್ಥಿಗಳಿಗೆ ಹಾಗೂ ಆಸ್ಪತ್ರೆಗೆ ಹೋಗುವ ರೋಗಿಗಳಿಗೆ ತೊಂದರೆಯಾಗುತಿದೆ. ಗ್ರಾಮಕ್ಕೆ ತಕ್ಷಣವೇ ಬಸ್ ವ್ಯವಸ್ಥೆ ಮಾಡಬೇಕು ಎಂದು ಗ್ರಾಮದ ಜಯಣ್ಣ ಆಗ್ರಹಿಸಿದರು.</p>.<p>ತಾಲ್ಲೂಕಿನ ಗಡಿಭಾಗದಲ್ಲಿರುವ ಈ ಗ್ರಾಮವನ್ನು ಜನಪ್ರತಿನಿಧಿಗಳು, ಅಧಿಕಾರಿಗಳು ಕಡೆಗಣಿಸುತ್ತಿದ್ದು, ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಬಹಿಷ್ಕರಿಸುವ ಬಗ್ಗೆ ಚಿಂತಿಸಿದ್ದೇವೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗಮನಹರಿಸಿ ಸೌಕರ್ಯ ಒದಗಿಸದಿದ್ದರೆ, ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದರು.</p>.<p>‘ಗ್ರಾಮ ಪಂಚಾಯಿತಿ ಸದಸ್ಯನಾಗಿ ಆಯ್ಕೆಯಾದ ನಂತರ ಸಾವಿರಾರು ರೂಪಾಯಿ ಸ್ವಂತ ಹಣ ಖರ್ಚು ಮಾಡಿ, ಕೆಲವು ಕಾಮಗಾರಿ ಮಾಡಿಸಿದ್ದೇನೆ. ಎಲ್ಲವನ್ನು ನಾನೇ ಮಾಡಲು ಸಾಧ್ಯವಾಗುವುದಿಲ್ಲ. ಗ್ರಾಮ ಪಂಚಾಯಿತಿಯ ಹದಿನಾಲ್ಕನೇ ಹಣಕಾಸು ಯೋಜನೆಯಲ್ಲಿ ಈ ಗ್ರಾಮಕ್ಕೆ ಜಲ್ಲಿ ರಸ್ತೆಗಾಗಿ ₹1 ಲಕ್ಷ ಮೀಸಲಿಡಲಾಗಿದೆ’ ಎಂದು ಗ್ರಾಮ ಪಂಚಾಯಿತಿ ಸದಸ್ಯ ಮುನೇಶ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>