ಈ ಜಾಗೃತಿ ಜಾಥಾದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನ ವಂಶಿಕೃಷ್ಣ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾ ಅಧಿಕಾರಿ(ಸಿಇಒ) ಶುಭಾ ಕಲ್ಯಾಣ್, ಮಹಾನಗರ ಪಾಲಿಕೆ ಉಪಮೇಯರ್ ರೂಪಶ್ರೀ, ಪಾಲಿಕೆಯ ಆರೋಗ್ಯಾಧಿಕಾರಿ ನಾಗೇಶ್, ಟೂಡಾ ಆಯುಕ್ತ ಯೋಗಾನಂದ ಸೇರಿದಂತೆ ಪಾಲಿಕೆ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.