<p><strong>ತುಮಕೂರು:</strong> ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಸಾಲ ನೀಡುವುದಾಗಿ ನಂಬಿಸಿ ತಾಲ್ಲೂಕಿನ ನಂದಿಹಳ್ಳಿಯ ರೈತ ಎನ್.ಸಿ.ಶಿವರಾಜು ಎಂಬುವರಿಗೆ ₹3 ಲಕ್ಷ ವಂಚಿಸಲಾಗಿದೆ.</p>.<p>ಪಾರ್ಟ್ ಟೈಮ್ ಕೆಲಸ, ಕೊರಿಯರ್, ಡಿಜಿಟಲ್ ಅರೆಸ್ಟ್, ದುಪ್ಪಟ್ಟು ಹಣ ಗಳಿಕೆಯ ಆಮಿಷ ನೀಡಿ ಹಣ ವಂಚಿಸುತ್ತಿದ್ದ ಪ್ರಕರಣಗಳು ಹೆಚ್ಚುತ್ತಿದ್ದವು. ಈಗ ಸರ್ಕಾರದ ಯೋಜನೆಗಳ ಹೆಸರಿನಲ್ಲಿ ಲಿಂಕ್ ಕಳುಹಿಸಿ ವಂಚಿಸಲಾಗುತ್ತಿದೆ. ಸಾಲ ಕೊಡಲಾಗುವುದು ಎಂದು ರೈತರನ್ನು ಮರಳು ಮಾಡಲಾಗುತ್ತಿದೆ.</p>.<p>ಶಿವರಾಜು ಮುದ್ರಾ ಯೋಜನೆಯಡಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆಗ ಕೆಲ ಅಪರಿಚಿತರು ಕರೆ ಮಾಡಿ ಮಾತನಾಡಿದ್ದಾರೆ. ಕಂಪನಿಯ ಮ್ಯಾನೇಜರ್, ಸಿಬ್ಬಂದಿ ಎಂದು ಪರಿಚಯಿಸಿಕೊಂಡಿದ್ದಾರೆ. ‘₹8 ಲಕ್ಷ ಸಾಲ ಮಂಜೂರು ಮಾಡುತ್ತಿದ್ದು, ಅದಕ್ಕೆ ನೀವು ಒಂದಷ್ಟು ಹಣ ಕಟ್ಟಬೇಕು’ ಎಂದು ತಿಳಿಸಿದ್ದಾರೆ. ಶಿವರಾಜು ಮೊದಲಿಗೆ ₹4,500 ಹಾಕಿದ್ದಾರೆ. ನಂತರ ಇಎಂಐ ಕಟ್ಟಬೇಕು ಎಂದು ಮತ್ತೊಂದಷ್ಟು ಹಣ ಹಾಕಿಸಿಕೊಂಡಿದ್ದಾರೆ.</p>.<p>‘ನಿಮಗೆ ಸಾಲ ಮಂಜೂರಾಗಿದೆ ಅದಕ್ಕೆ ಮ್ಯಾನೇಜರ್ ಸಹಿ ಮಾಡಬೇಕು. ಅವರಿಗೆ ಲಂಚವಾಗಿ ₹10 ಸಾವಿರ ನೀಡುವಂತೆ’ ಸೈಬರ್ ವಂಚಕರು ಹೇಳಿದ್ದಾರೆ. ನಾನಾ ಕಾರಣ ಹೇಳಿ ಶಿವರಾಜು ಅವರಿಂದ ಒಟ್ಟು ₹3,00,541 ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಮೋಸ ಹೋದ ವಿಷಯ ಅರಿವಿಗೆ ಬಂದ ನಂತರ ‘ಸಾಲ ನೀಡುವುದಾಗಿ ವಂಚಿಸಿದವರನ್ನು ಪತ್ತೆ ಹಚ್ಚಿ, ಹಣ ವಾಪಸ್ ಕೊಡಿಸುವಂತೆ’ ಕೋರಿ ಕ್ಯಾತ್ಸಂದ್ರ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಸಾಲ ನೀಡುವುದಾಗಿ ನಂಬಿಸಿ ತಾಲ್ಲೂಕಿನ ನಂದಿಹಳ್ಳಿಯ ರೈತ ಎನ್.ಸಿ.ಶಿವರಾಜು ಎಂಬುವರಿಗೆ ₹3 ಲಕ್ಷ ವಂಚಿಸಲಾಗಿದೆ.</p>.<p>ಪಾರ್ಟ್ ಟೈಮ್ ಕೆಲಸ, ಕೊರಿಯರ್, ಡಿಜಿಟಲ್ ಅರೆಸ್ಟ್, ದುಪ್ಪಟ್ಟು ಹಣ ಗಳಿಕೆಯ ಆಮಿಷ ನೀಡಿ ಹಣ ವಂಚಿಸುತ್ತಿದ್ದ ಪ್ರಕರಣಗಳು ಹೆಚ್ಚುತ್ತಿದ್ದವು. ಈಗ ಸರ್ಕಾರದ ಯೋಜನೆಗಳ ಹೆಸರಿನಲ್ಲಿ ಲಿಂಕ್ ಕಳುಹಿಸಿ ವಂಚಿಸಲಾಗುತ್ತಿದೆ. ಸಾಲ ಕೊಡಲಾಗುವುದು ಎಂದು ರೈತರನ್ನು ಮರಳು ಮಾಡಲಾಗುತ್ತಿದೆ.</p>.<p>ಶಿವರಾಜು ಮುದ್ರಾ ಯೋಜನೆಯಡಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆಗ ಕೆಲ ಅಪರಿಚಿತರು ಕರೆ ಮಾಡಿ ಮಾತನಾಡಿದ್ದಾರೆ. ಕಂಪನಿಯ ಮ್ಯಾನೇಜರ್, ಸಿಬ್ಬಂದಿ ಎಂದು ಪರಿಚಯಿಸಿಕೊಂಡಿದ್ದಾರೆ. ‘₹8 ಲಕ್ಷ ಸಾಲ ಮಂಜೂರು ಮಾಡುತ್ತಿದ್ದು, ಅದಕ್ಕೆ ನೀವು ಒಂದಷ್ಟು ಹಣ ಕಟ್ಟಬೇಕು’ ಎಂದು ತಿಳಿಸಿದ್ದಾರೆ. ಶಿವರಾಜು ಮೊದಲಿಗೆ ₹4,500 ಹಾಕಿದ್ದಾರೆ. ನಂತರ ಇಎಂಐ ಕಟ್ಟಬೇಕು ಎಂದು ಮತ್ತೊಂದಷ್ಟು ಹಣ ಹಾಕಿಸಿಕೊಂಡಿದ್ದಾರೆ.</p>.<p>‘ನಿಮಗೆ ಸಾಲ ಮಂಜೂರಾಗಿದೆ ಅದಕ್ಕೆ ಮ್ಯಾನೇಜರ್ ಸಹಿ ಮಾಡಬೇಕು. ಅವರಿಗೆ ಲಂಚವಾಗಿ ₹10 ಸಾವಿರ ನೀಡುವಂತೆ’ ಸೈಬರ್ ವಂಚಕರು ಹೇಳಿದ್ದಾರೆ. ನಾನಾ ಕಾರಣ ಹೇಳಿ ಶಿವರಾಜು ಅವರಿಂದ ಒಟ್ಟು ₹3,00,541 ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಮೋಸ ಹೋದ ವಿಷಯ ಅರಿವಿಗೆ ಬಂದ ನಂತರ ‘ಸಾಲ ನೀಡುವುದಾಗಿ ವಂಚಿಸಿದವರನ್ನು ಪತ್ತೆ ಹಚ್ಚಿ, ಹಣ ವಾಪಸ್ ಕೊಡಿಸುವಂತೆ’ ಕೋರಿ ಕ್ಯಾತ್ಸಂದ್ರ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>