ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಪ್ರಧಾನಿ ಮೋದಿ ಕಾರ್ಯಕ್ರಮದತ್ತ ಜನರ ಆಗಮನ

Last Updated 6 ಫೆಬ್ರುವರಿ 2023, 8:21 IST
ಅಕ್ಷರ ಗಾತ್ರ

ತುಮಕೂರು: ಗುಬ್ಬಿ ತಾಲ್ಲೂಕಿನ ಬಿದರೆಹಳ್ಳ ಕಾವಲ್‌ನಲ್ಲಿ ಎಚ್ಎಎಲ್ ಘಟಕ ಉದ್ಘಾಟನೆ ಕಾರ್ಯಕ್ರಮದತ್ತ ಸಾರ್ವಜನಿಕರು ಹೆಜ್ಜೆ ಹಾಕಿದರು.

ಮಧ್ಯಾಹ್ನ 3.30 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಎಚ್ಎಎಲ್ ಘಟಕ ಉದ್ಘಾಟಿಸಲಿದ್ದಾರೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯದ ಸಚಿವರು ಮೋದಿ ಅವರಿಗೆ ಸಾಥ್ ನೀಡಲಿದ್ದಾರೆ.

ನೂರಾರು ಬಿಜೆಪಿ ಕಾರ್ಯಕರ್ತರು ಬೈಕ್ ರ್‍ಯಾಲಿಯ ಮೂಲಕ ವೇದಿಕೆ ಕಾರ್ಯಕ್ರಮದತ್ತ ತೆರಳಿದರು. ಎಎಚ್‌ಎಲ್‌ ಘಕಟದಿಂದ ಮೂರು ಕಿ.ಮೀ ದೂರದಲ್ಲಿ ಸುಮಾರು 150 ಎಕರೆ ವಿಸ್ತೀರ್ಣದಲ್ಲಿ ವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ.

ಕಾರ್ಯಕ್ರಮಕ್ಕೆ ಆಗಮಿಸಿದ ಸಾರ್ವಜನಿಕರು ವಾಹನಗಳನ್ನು ನಿಲ್ಲಿಸಿ, ಕಾಲ್ನಡಿಗೆಯಲ್ಲಿ ವೇದಿಕೆಯತ್ತ ತೆರಳುತ್ತಿದ್ದಾರೆ. ಎಚ್‌ಎಎಲ್ ಘಟಕದ ಒಳಗೆ ಗಣ್ಯರ ವಾಹನಗಳ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT