<p><strong>ತುಮಕೂರು:</strong> ಕವಿ, ನಿವೃತ್ತ ಪ್ರಾಂಶುಪಾಲ ಎನ್.ನಾಗಪ್ಪ (71) ನಗರದ ಗೋಕುಲ ಬಡಾವಣೆಯಲ್ಲಿರುವ ತಮ್ಮ ಮನೆಯಲ್ಲಿ ಶುಕ್ರವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಪತ್ನಿ, ಇಬ್ಬರು ಪುತ್ರರು ಇದ್ದಾರೆ. ದುಬೈನಲ್ಲಿ ನೆಲೆಸಿರುವ ಮಗನ ಜತೆ ಕೆಲ ದಿನಗಳಿಂದ ವಾಸವಿದ್ದು, ವಾಪಸಾಗಿದ್ದರು. ಶುಕ್ರವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಶನಿವಾರ ಬೆಳಿಗ್ಗೆ ಗೊತ್ತಾಗಿದೆ. ಉಪನ್ಯಾಸಕರಾಗಿದ್ದ ಸಮಯದಲ್ಲಿ ವಿದ್ಯಾರ್ಥಿನಿಯನ್ನೇ ಪ್ರೀತಿಸಿ ಅಂತರ್ ಜಾತಿ ವಿವಾಹವಾಗಿದ್ದರು. ಆ ಕಾಲಕ್ಕೆ ಈ ವಿಚಾರ ಸಾಕಷ್ಟು ಸುದ್ದಿಯಾಗಿತ್ತು.</p>.<p>‘ಸಾಕವ್ವ’ (ಕವನ ಸಂಕಲನ), ‘ಕುಂಬಾರಗುಂಡಯ್ಯ’ ಕೃತಿ ರಚಿಸಿದ್ದರು. ರೈತ, ದಲಿತ, ಬಂಡಾಯ ಸಾಹಿತ್ಯ, ಪ್ರಗತಿಪರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಜನರಲ್ಲಿ ವೈಚಾರಿಕ ಪ್ರಜ್ಞೆ ಮೂಡಿಸಿದವರು.</p>.<p>ಗುಬ್ಬಿ ತಾಲ್ಲೂಕು ಸುರಿಗೇನಹಳ್ಳಿ ಗ್ರಾಮದವರಾಗಿದ್ದು, ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ವೃತ್ತಿ ಜೀವನ ಆರಂಭಿಸಿದ್ದರು. ಚಿಕ್ಕನಾಯಕನಹಳ್ಳಿ ಕಾಲೇಜಿನಲ್ಲಿ ಸಾಕಷ್ಟು ವರ್ಷ ಕೆಲಸ ನಿರ್ವಹಿಸಿದ್ದರು. ಶಿರಾ ತಾಲ್ಲೂಕಿನ ಚಿಕ್ಕನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕೆಲಸ ನಿರ್ವಹಿಸಿ 2015ರಲ್ಲಿ ನಿವೃತ್ತರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಕವಿ, ನಿವೃತ್ತ ಪ್ರಾಂಶುಪಾಲ ಎನ್.ನಾಗಪ್ಪ (71) ನಗರದ ಗೋಕುಲ ಬಡಾವಣೆಯಲ್ಲಿರುವ ತಮ್ಮ ಮನೆಯಲ್ಲಿ ಶುಕ್ರವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಪತ್ನಿ, ಇಬ್ಬರು ಪುತ್ರರು ಇದ್ದಾರೆ. ದುಬೈನಲ್ಲಿ ನೆಲೆಸಿರುವ ಮಗನ ಜತೆ ಕೆಲ ದಿನಗಳಿಂದ ವಾಸವಿದ್ದು, ವಾಪಸಾಗಿದ್ದರು. ಶುಕ್ರವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಶನಿವಾರ ಬೆಳಿಗ್ಗೆ ಗೊತ್ತಾಗಿದೆ. ಉಪನ್ಯಾಸಕರಾಗಿದ್ದ ಸಮಯದಲ್ಲಿ ವಿದ್ಯಾರ್ಥಿನಿಯನ್ನೇ ಪ್ರೀತಿಸಿ ಅಂತರ್ ಜಾತಿ ವಿವಾಹವಾಗಿದ್ದರು. ಆ ಕಾಲಕ್ಕೆ ಈ ವಿಚಾರ ಸಾಕಷ್ಟು ಸುದ್ದಿಯಾಗಿತ್ತು.</p>.<p>‘ಸಾಕವ್ವ’ (ಕವನ ಸಂಕಲನ), ‘ಕುಂಬಾರಗುಂಡಯ್ಯ’ ಕೃತಿ ರಚಿಸಿದ್ದರು. ರೈತ, ದಲಿತ, ಬಂಡಾಯ ಸಾಹಿತ್ಯ, ಪ್ರಗತಿಪರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಜನರಲ್ಲಿ ವೈಚಾರಿಕ ಪ್ರಜ್ಞೆ ಮೂಡಿಸಿದವರು.</p>.<p>ಗುಬ್ಬಿ ತಾಲ್ಲೂಕು ಸುರಿಗೇನಹಳ್ಳಿ ಗ್ರಾಮದವರಾಗಿದ್ದು, ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ವೃತ್ತಿ ಜೀವನ ಆರಂಭಿಸಿದ್ದರು. ಚಿಕ್ಕನಾಯಕನಹಳ್ಳಿ ಕಾಲೇಜಿನಲ್ಲಿ ಸಾಕಷ್ಟು ವರ್ಷ ಕೆಲಸ ನಿರ್ವಹಿಸಿದ್ದರು. ಶಿರಾ ತಾಲ್ಲೂಕಿನ ಚಿಕ್ಕನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕೆಲಸ ನಿರ್ವಹಿಸಿ 2015ರಲ್ಲಿ ನಿವೃತ್ತರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>