<p><strong>ಪಾವಗಡ</strong>: ತಾಲ್ಲೂಕಿನ ವೈ.ಎನ್. ಹೊಸಕೋಟೆ ಹೋಬಳಿ ಪೋಲೆನಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹಾಳಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.</p>.<p>ಗ್ರಾಮಕ್ಕೆ ಸಮರ್ಪಕ ರಸ್ತೆ ಇಲ್ಲದೆ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತಿದೆ. ರಸ್ತೆ ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ ಎಂಬುದು ಗ್ರಾಮಸ್ಥರ ಆರೋಪ.</p>.<p>ಗ್ರಾಮದಿಂದ ಕೆಂಚಮ್ಮನಹಳ್ಳಿ ರಸ್ತೆ ಹಾಗೂ ಸಾಸಲಕುಂಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿವೆ. ಡಾಂಬರ್ ಕಿತ್ತು ಬಂದು ಬೃಹತ್ ಗುಂಡಿಗಳು ನಿರ್ಮಾಣವಾಗಿದೆ. ಹಲವು ವರ್ಷಗಳಿಂದ ಗ್ರಾಮಕ್ಕೆ ಬರಲು ಕಸರತ್ತು ನಡೆಸಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>ತುರ್ತು ಸ್ಥಿತಿಯಲ್ಲಿ ಗ್ರಾಮದಿಂದ ಆಸ್ಪತ್ರೆಗೆ ತೆರಳು ಹೆಚ್ಚು ಸಮಯ ಹಿಡಿಯುತ್ತದೆ. ರೋಗಿಗಳು, ವೃದ್ಧರನ್ನು ಈ ಮಾರ್ಗದ ಮೂಲಕ ಕರೆದೊಯ್ಯುವುದು ತ್ರಾಸದಾಯಕ. ಮಳೆಗಾಲದಲ್ಲಿ ಗುಂಡಿಗಳಲ್ಲಿ ನೀರು ತುಂಬಿರುತ್ತದೆ. ಗುಂಡಿ ಎಲ್ಲಿದೆ, ರಸ್ತೆ ಎಲ್ಲಿದೆ ಎಂದೂ ಗೊತ್ತಾಗದೆ ವಾಹನಗಳು ಅಪಘಾತವಾಗಿರುವ ಸಾಕಷ್ಟು ನಿದರ್ಶನಗಳಿವೆ.</p>.<p>ದ್ವಿಚಕ್ರ ವಾಹನ ಸವಾರರ ಪಾಡು ಹೇಳತೀರದು. ಗುಂಡಿ ತಪ್ಪಿಸಲು ಹೋಗಿ ಎದುರಗಡೆಯಿಂದ ಬರುವವರಿಗೆ ಡಿಕ್ಕಿ ಹೊಡೆದಿರುವ ನಿದರ್ಶನಗಳಿವೆ. ರಸ್ತೆ ಹದಗೆಟ್ಟ ಪರಿಣಾಮ ಸಾಕಷ್ಟು ಮಂದಿ ಅಪಘಾತಗಳಿಗೆ ಬಲಿಯಾಗಿದ್ದಾರೆ. ಎಷ್ಟೊ ಮಂದಿ ಶಾಶ್ವತ ಅಂಗವಿಕಲರಾಗಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ಈ ಕೂಡಲೇ ರಸ್ತೆ ದುರಸ್ತಿ ಮಾಡಿಸಬೇಕು ಎಂದು ಪಿ.ಎನ್. ಶಾಂತಕುಮಾರ್, ಪಿ.ಈ. ಓಂಕಾರ್, ಪಿ.ಎಂ. ನಾಗರಾಜು, ಹನುಮಂತರಾಯ, ರಾಮಾಂಜಿನೇಯ ಒತ್ತಾಯಿಸಿದ್ದಾರೆ .</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ</strong>: ತಾಲ್ಲೂಕಿನ ವೈ.ಎನ್. ಹೊಸಕೋಟೆ ಹೋಬಳಿ ಪೋಲೆನಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹಾಳಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.</p>.<p>ಗ್ರಾಮಕ್ಕೆ ಸಮರ್ಪಕ ರಸ್ತೆ ಇಲ್ಲದೆ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತಿದೆ. ರಸ್ತೆ ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ ಎಂಬುದು ಗ್ರಾಮಸ್ಥರ ಆರೋಪ.</p>.<p>ಗ್ರಾಮದಿಂದ ಕೆಂಚಮ್ಮನಹಳ್ಳಿ ರಸ್ತೆ ಹಾಗೂ ಸಾಸಲಕುಂಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿವೆ. ಡಾಂಬರ್ ಕಿತ್ತು ಬಂದು ಬೃಹತ್ ಗುಂಡಿಗಳು ನಿರ್ಮಾಣವಾಗಿದೆ. ಹಲವು ವರ್ಷಗಳಿಂದ ಗ್ರಾಮಕ್ಕೆ ಬರಲು ಕಸರತ್ತು ನಡೆಸಲಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>ತುರ್ತು ಸ್ಥಿತಿಯಲ್ಲಿ ಗ್ರಾಮದಿಂದ ಆಸ್ಪತ್ರೆಗೆ ತೆರಳು ಹೆಚ್ಚು ಸಮಯ ಹಿಡಿಯುತ್ತದೆ. ರೋಗಿಗಳು, ವೃದ್ಧರನ್ನು ಈ ಮಾರ್ಗದ ಮೂಲಕ ಕರೆದೊಯ್ಯುವುದು ತ್ರಾಸದಾಯಕ. ಮಳೆಗಾಲದಲ್ಲಿ ಗುಂಡಿಗಳಲ್ಲಿ ನೀರು ತುಂಬಿರುತ್ತದೆ. ಗುಂಡಿ ಎಲ್ಲಿದೆ, ರಸ್ತೆ ಎಲ್ಲಿದೆ ಎಂದೂ ಗೊತ್ತಾಗದೆ ವಾಹನಗಳು ಅಪಘಾತವಾಗಿರುವ ಸಾಕಷ್ಟು ನಿದರ್ಶನಗಳಿವೆ.</p>.<p>ದ್ವಿಚಕ್ರ ವಾಹನ ಸವಾರರ ಪಾಡು ಹೇಳತೀರದು. ಗುಂಡಿ ತಪ್ಪಿಸಲು ಹೋಗಿ ಎದುರಗಡೆಯಿಂದ ಬರುವವರಿಗೆ ಡಿಕ್ಕಿ ಹೊಡೆದಿರುವ ನಿದರ್ಶನಗಳಿವೆ. ರಸ್ತೆ ಹದಗೆಟ್ಟ ಪರಿಣಾಮ ಸಾಕಷ್ಟು ಮಂದಿ ಅಪಘಾತಗಳಿಗೆ ಬಲಿಯಾಗಿದ್ದಾರೆ. ಎಷ್ಟೊ ಮಂದಿ ಶಾಶ್ವತ ಅಂಗವಿಕಲರಾಗಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ಈ ಕೂಡಲೇ ರಸ್ತೆ ದುರಸ್ತಿ ಮಾಡಿಸಬೇಕು ಎಂದು ಪಿ.ಎನ್. ಶಾಂತಕುಮಾರ್, ಪಿ.ಈ. ಓಂಕಾರ್, ಪಿ.ಎಂ. ನಾಗರಾಜು, ಹನುಮಂತರಾಯ, ರಾಮಾಂಜಿನೇಯ ಒತ್ತಾಯಿಸಿದ್ದಾರೆ .</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>