ತುಮಕೂರು: ಕುಣಿಗಲ್ ತಾಲ್ಲೂಕಿನ ಬಿಸೇಗೌಡನದೊಡ್ಡಿ ಕಲ್ಲು ಗಣಿಗಾರಿಕೆಯ ಕ್ರಷರ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆನಂದ್ ಪಟೇಲ್ ಮತ್ತು ರೈತ ಮಹಿಳೆಯರನ್ನು ಪೊಲೀಸರು ಬಲವಂತವಾಗಿ ಶುಕ್ರವಾರ ವಶಕ್ಕೆ ಪಡೆದರು.
ಕಲ್ಲು ಗಣಿಗಾರಿಕೆಯ ಸ್ಥಳದಲ್ಲಿ ಸ್ಪೋಟಕ ಮತ್ತು ಕಂಪನ ಪ್ರಮಾಣದ ಪರಿಶೀಲನೆಗೆ ತಜ್ಞರ ತಂಡ ಆಗಮಿಸಿತ್ತು. ತಜ್ಞರ ತಂಡದ ಪರಿಶೀಲನೆಗೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಗೆ ಮುಂದಾಗಿದ್ದ ರೈತರು ಮತ್ತು ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.