’ರಾಜ್ಯದಲ್ಲಿನ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಎಲ್ಲಿ ಹೆಚ್ಚು ಅಪಘಾತಗಳು ನಡೆಯುತ್ತವೆ ಎಂಬ ಸ್ಥಳಗಳನ್ನು ಗುರುತಿಸಲಾಗಿದೆ. ಇಂತಹ ಕಡೆ ಈಗಾಗಲೇ ಪೊಲೀಸ್ ಗಸ್ತು ವಾಹನ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಈಚೆಗೆ ಅಪಘಾತಗಳೂ ಹೆಚ್ಚಾಗುತ್ತಿವೆ. ಕುಟುಂಬಕ್ಕೆ ಕುಟುಂಬಗಳೇ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ, ಅಪಘಾತ ತಡೆಯಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗುವುದು’ ಎಂದರು.