ವೇದಿಕೆಯ ಅಧ್ಯಕ್ಷ ಎಚ್. ಜಿ. ರಮೇಶ್ ಮಾತನಾಡಿ, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಸಮಯದಲ್ಲಿ ಲೋಕಾಯುಕ್ತಾ ವ್ಯವಸ್ಥೆ ಬಲಪಡಿಸುವುದಾಗಿ ಎಡಿಯೂರಪ್ಪ ತಿಳಿಸಿದ್ದರೂ, ಈಗ ಮರೆತಿರುವಂತಿದೆ. ಈ ಕಾರಣದಿಂದಾಗಿ ಮುಖ್ಯಮಂತ್ರಿ ಗಮನಸೆಳೆಯಲು ಅವರ ಮನೆದೇವರಾದ ಎಡೆಯೂರು ಸಿದ್ದಲಿಂಗೇಶ್ವರಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಸಾದದೊಂದಿಗೆ ಮುಖ್ಯಮಂತ್ರಿ ಯಡೆಯೂರಪ್ಪ ಅವರ ಗೃಹಕಚೇರಿವರೆಗೂ ಪಾದಯಾತ್ರೆ ಮೂಲಕ ತೆರಳಿ ಮನವಿ ಸಲ್ಲಿಸುವುದಾಗಿ ತಿಳಿಸಿದರು.