<p><strong>ಮಧುಗಿರಿ:</strong> ‘ದೇವರಾಜ ಅರಸು, ವೀರಪ್ಪ ಮೊಯ್ಲಿ ಅವರಂತಹ ಮಹಾನ್ ನಾಯಕರನ್ನೇ ಅಧಿಕಾರದಿಂದ ಕೆಳಗೆ ಇಳಿಸಲಾಗಿದೆ. ಅವರ ಮುಂದೆ ನನ್ನ ಅಧಿಕಾರ ದೊಡ್ಡದಲ್ಲ’ ಎಂದು ಕೆ.ಎನ್.ರಾಜಣ್ಣ ಹೇಳಿದರು.</p><p>ಪಟ್ಟಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ‘ಬಡವರ ಪರವಾದ ಆಡಳಿತ ನೀಡಿದ ದೇವರಾಜ ಅರಸು ಸರ್ಕಾರ ವಜಾ ಮಾಡಲಾಯಿತು. ಬಡವರ ಮಕ್ಕಳಿಗೆ ಅನುಕೂಲ ಆಗಲೆಂದು ಸಿಇಟಿ ಜಾರಿಗೆ ತಂದ ವೀರಪ್ಪ ಮೊಯ್ಲಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಲಾಯಿತು’ ಎಂದರು.</p><p>‘ಸಚಿವ ಸ್ಥಾನ ಹೋಗಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಕ್ಷೇಪಿಸುವುದು ಸರಿಯಲ್ಲ. ಅಧಿಕಾರ ಕಳೆದುಕೊಳ್ಳಲು ಹಲವು ಕಾರಣಗಳಿದ್ದು, ಸಮಯ ಬಂದಾಗ ಹೇಳುತ್ತೇನೆ’ ಎಂದು ಹೇಳಿದರು.</p>.ದೆಹಲಿಯಲ್ಲಿ ಮೂವರಿಂದ ಸಂಚು: ಪಿತೂರಿ ವಿದ್ಯೆ ನನಗೂ ಗೊತ್ತಿದೆ; ರಾಜಣ್ಣ ಗುಡುಗು.ರಾಜಣ್ಣ ವಜಾ: ಪಕ್ಷದ ಆಂತರಿಕ ವಿಷಯ; ಸಿ.ಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ:</strong> ‘ದೇವರಾಜ ಅರಸು, ವೀರಪ್ಪ ಮೊಯ್ಲಿ ಅವರಂತಹ ಮಹಾನ್ ನಾಯಕರನ್ನೇ ಅಧಿಕಾರದಿಂದ ಕೆಳಗೆ ಇಳಿಸಲಾಗಿದೆ. ಅವರ ಮುಂದೆ ನನ್ನ ಅಧಿಕಾರ ದೊಡ್ಡದಲ್ಲ’ ಎಂದು ಕೆ.ಎನ್.ರಾಜಣ್ಣ ಹೇಳಿದರು.</p><p>ಪಟ್ಟಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ‘ಬಡವರ ಪರವಾದ ಆಡಳಿತ ನೀಡಿದ ದೇವರಾಜ ಅರಸು ಸರ್ಕಾರ ವಜಾ ಮಾಡಲಾಯಿತು. ಬಡವರ ಮಕ್ಕಳಿಗೆ ಅನುಕೂಲ ಆಗಲೆಂದು ಸಿಇಟಿ ಜಾರಿಗೆ ತಂದ ವೀರಪ್ಪ ಮೊಯ್ಲಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಲಾಯಿತು’ ಎಂದರು.</p><p>‘ಸಚಿವ ಸ್ಥಾನ ಹೋಗಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಕ್ಷೇಪಿಸುವುದು ಸರಿಯಲ್ಲ. ಅಧಿಕಾರ ಕಳೆದುಕೊಳ್ಳಲು ಹಲವು ಕಾರಣಗಳಿದ್ದು, ಸಮಯ ಬಂದಾಗ ಹೇಳುತ್ತೇನೆ’ ಎಂದು ಹೇಳಿದರು.</p>.ದೆಹಲಿಯಲ್ಲಿ ಮೂವರಿಂದ ಸಂಚು: ಪಿತೂರಿ ವಿದ್ಯೆ ನನಗೂ ಗೊತ್ತಿದೆ; ರಾಜಣ್ಣ ಗುಡುಗು.ರಾಜಣ್ಣ ವಜಾ: ಪಕ್ಷದ ಆಂತರಿಕ ವಿಷಯ; ಸಿ.ಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>