ಹಿಂದೆ ಹೋರಾಟ ನಡೆಸಿದ ಸಮಯದಲ್ಲಿ ಸೆಪ್ಟೆಂಬರ್ 15ರ ಒಳಗೆ ಮೀಸಲಾತಿ ಸೌಲಭ್ಯ ಕಲ್ಪಿಸುವುದಾಗಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದರು. ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಭರವಸೆ ನೀಡುತ್ತಲೇ ಬಂದಿದ್ದಾರೆ. ಆದರೆ ಭರವಸೆ ಈಡೇರಿಲ್ಲ. ಸರ್ಕಾರ ನೀಡಿದ್ದ ಆರು ತಿಂಗಳ ಗಡುವುದು ಮುಗಿದಿದ್ದು, ಕೊಟ್ಟ ಮಾತು ನೆನಪಿಸಿ ಮತ್ತೆ ಹೋರಾಟ ಆರಂಭಿಸಲಾಗಿದೆ ಎಂದು ಹೇಳಿದರು.