ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪಿಎಫ್‌ಐ ವಿರುದ್ಧ ದ್ವೇಷದ ರಾಜಕಾರಣ’

ಹಾಥರಸ್‌ ಘಟನೆಗೆ ಖಂಡನೆ; ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಪ್ರತಿಭಟನೆ
Last Updated 11 ಅಕ್ಟೋಬರ್ 2020, 4:32 IST
ಅಕ್ಷರ ಗಾತ್ರ

ತುಮಕೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ವಿರುದ್ಧ ಉತ್ತರ ಪ್ರದೇಶ ರಾಜ್ಯ ಸರ್ಕಾರ ದ್ವೇಷದ ಅಭಿಯಾನ ನಡೆಸುತ್ತಿದೆ. ಇದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿ ಪಿಎಫ್‌ಐ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಮುಂ ದೆ ಜಮಾಯಿಸಿದ ಪ್ರತಿಭಟನಕಾರರು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಹಾಥರಸ್ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸುವಲ್ಲಿ ಉತ್ತರ ಪ್ರದೇಶ ಸರ್ಕಾರ ವಿಫಲವಾಗಿದೆ. ಜನರ ಗಮನ ಬೇರೆಡೆಗೆ ಸೆಳೆಯುವ ಸಲುವಾಗಿ ಪಿಎಫ್‌ಐ ವಿರುದ್ಧ ಹೊಸ ಆರೋಪಗಳನ್ನು ಮಾಡುತ್ತಿದೆ ಎಂದು ದೂರಿದರು.

ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಉತ್ತರ ಪ್ರದೇಶದಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆ ಇರಲಿಲ್ಲ. ಈಗ ದಲಿತರು ಮತ್ತು ಮಹಿಳೆಯರಿಗೂ ರಕ್ಷಣೆ ಇಲ್ಲ ಎಂದು ಆರೋಪಿಸಿದರು.

ಪಿಎಫ್‌ಐ ಈ ನೆಲದ ಕಾನೂನನ್ನು ಗೌರವಿಸುತ್ತ ಪ್ರಜಾಸತ್ತಾತ್ಮಕ ಹೋರಾಟಗಳಲ್ಲಿ ನಂಬಿಕೆ ಇಟ್ಟಿರುವ ಸಂಘಟನೆ. ಸಂಘಟನೆಯು ನಡೆಸಿಕೊಂಡು ಬಂದಿರುವ ಕಾನೂನಾತ್ಮಕ ಹೋರಾಟಗಳುಇದನ್ನು ಸಾಬೀತುಪಡಿಸು ತ್ತಿವೆ. ಆಧಾರರಹಿತ ಆರೋಪಗಳ ಮೂಲಕ ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸರು ನಮ್ಮ ಸಂಘಟನೆಯನ್ನು ಬೇಟೆ ಆಡುವುದಕ್ಕೆ ಮುಂದಾಗಿದ್ದಾರೆ ಎಂದು ಪಿಎಫ್‌ಐ ಜಿಲ್ಲಾ ಘಟಕದ ಅಧ್ಯಕ್ಷ ರೆಹಾನ್ ಖಾನ್ ಆರೋಪಿಸಿದರು.

ಹಾಥರಸ್ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ದೊರಕಿಸಲು ಮತ್ತು ಘಟನೆಯ ಸತ್ಯವನ್ನು ಜನರು ತಿಳಿಯಲು ಪ್ರಕರಣವನ್ನು ಸುಪ್ರೀಂಕೋರ್ಟ್‍ ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆ ನಡೆಸಬೇಕು ಎಂದು ರಾಷ್ಟ್ರಪತಿ ಅವರನ್ನು ಕೋರಿದರು.

ಪ್ರತಿಭಟನೆಯಲ್ಲಿ ಸಂಘಟನೆ ಕಾರ್ಯದರ್ಶಿ ವಸೀಮ್ ಇದ್ರೀಸ್, ಚಾಂದ್ ಪಾಷಾ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT