<p><strong>ತಿಪಟೂರು</strong>: ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್. ಸಂಗ್ರೇಶಿ ಶಿವಮೊಗ್ಗಕ್ಕೆ ತೆರಳುವ ಮಾರ್ಗ ಮಧ್ಯೆ ನಗರದ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿದರು. ಉಪವಿಭಾಗಾಧಿಕಾರಿ ಸಪ್ತಶ್ರೀ ಹಾಗೂ ಇತರೆ ಅಧಿಕಾರಿಗಳೊಂದಿಗೆ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಚರ್ಚಿಸಿದರು.</p>.<p>‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಬಾಕಿ ಇದ್ದ ಒಂದು ಗ್ರಾಮ ಪಂಚಾಯಿತಿ ಉಪಚುನಾವಣೆ ತಯಾರಿ ಬಗ್ಗೆ, ಮತದಾರ ಪಟ್ಟಿ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ರಾಜ್ಯದ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗೆ ಸರ್ಕಾರದಿಂದ ಮೀಸಲಾತಿ ಪಟ್ಟಿಗಾಗಿ ಕಾಯುತ್ತಿರುವುದಾಗಿ ತಿಳಿಸಿದರು.</p>.<p>ಮೇ 30ರೊಳಗೆ ಸರ್ಕಾರ ಮೀಸಲಾತಿ ಪಟ್ಟಿ ನೀಡುವುವಾಗಿ ತಿಳಿಸಿದ್ದು, ನಂತರ ಎರಡು, ಮೂರು ತಿಂಗಳಲ್ಲಿ ಚುನಾವಣೆಗೆ ತಯಾರಿ ನಡೆಸಲಾಗುವುದು. ದಸರಾ ನಂತರ ಅಕ್ಟೋಬರ್, ನವೆಂಬರ್ನಲ್ಲಿ ಜಿಪಂ, ತಾಪಂ ಚುನಾವಣೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಿದರು.</p>.<p>ಉಪವಿಭಾಗಾಧಿಕಾರಿ ಸಪ್ತಶ್ರೀ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ನಗರಸಭೆ ಆಯುಕ್ತ ವಿಶ್ವೇಶ್ವರ ಬದರಗಡೆ, ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ವೆಂಕಟೇಶ್, ಗ್ರೇಡ್–2 ತಹಶೀಲ್ದಾರ್ ಜಗನ್ನಾಥ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು</strong>: ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್. ಸಂಗ್ರೇಶಿ ಶಿವಮೊಗ್ಗಕ್ಕೆ ತೆರಳುವ ಮಾರ್ಗ ಮಧ್ಯೆ ನಗರದ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿದರು. ಉಪವಿಭಾಗಾಧಿಕಾರಿ ಸಪ್ತಶ್ರೀ ಹಾಗೂ ಇತರೆ ಅಧಿಕಾರಿಗಳೊಂದಿಗೆ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಚರ್ಚಿಸಿದರು.</p>.<p>‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಬಾಕಿ ಇದ್ದ ಒಂದು ಗ್ರಾಮ ಪಂಚಾಯಿತಿ ಉಪಚುನಾವಣೆ ತಯಾರಿ ಬಗ್ಗೆ, ಮತದಾರ ಪಟ್ಟಿ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ರಾಜ್ಯದ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗೆ ಸರ್ಕಾರದಿಂದ ಮೀಸಲಾತಿ ಪಟ್ಟಿಗಾಗಿ ಕಾಯುತ್ತಿರುವುದಾಗಿ ತಿಳಿಸಿದರು.</p>.<p>ಮೇ 30ರೊಳಗೆ ಸರ್ಕಾರ ಮೀಸಲಾತಿ ಪಟ್ಟಿ ನೀಡುವುವಾಗಿ ತಿಳಿಸಿದ್ದು, ನಂತರ ಎರಡು, ಮೂರು ತಿಂಗಳಲ್ಲಿ ಚುನಾವಣೆಗೆ ತಯಾರಿ ನಡೆಸಲಾಗುವುದು. ದಸರಾ ನಂತರ ಅಕ್ಟೋಬರ್, ನವೆಂಬರ್ನಲ್ಲಿ ಜಿಪಂ, ತಾಪಂ ಚುನಾವಣೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಿದರು.</p>.<p>ಉಪವಿಭಾಗಾಧಿಕಾರಿ ಸಪ್ತಶ್ರೀ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ನಗರಸಭೆ ಆಯುಕ್ತ ವಿಶ್ವೇಶ್ವರ ಬದರಗಡೆ, ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ವೆಂಕಟೇಶ್, ಗ್ರೇಡ್–2 ತಹಶೀಲ್ದಾರ್ ಜಗನ್ನಾಥ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>