ಕಾರ್ಮಿಕ ಕಾನೂನುಗಳ ಅನ್ವಯ ದುಡಿಯುತ್ತಿರುವ ನೇರಪಾವತಿ, ದಿನಗೂಲಿ, ಗುತ್ತಿಗೆ, ಹೊರ ಗುತ್ತಿಗೆ ಅಧಾರಿತ ಪೌರಕಾರ್ಮಿಕರಿಗೆ ಕನಿಷ್ಠ ಕೂಲಿ, ವಾರದ ರಜೆ, ಅನಾರೋಗ್ಯ ರಜೆ, ಗಳಿಕೆ ರಜೆ ನೀಡಬೇಕು. ಪ್ರತಿ ತಿಂಗಳು 5ನೇ ತಾರೀಕಿನ ಒಳಗೆ ಸಂಬಳ ನೀಡಬೇಕು. ಕೊರೊನಾ ಕೆಲಸದಲ್ಲಿ ತೊಡಗಿದ್ದಾಗ ಮರಣ ಹೊಂದಿರುವ ಪೌರಕಾರ್ಮಿಕರ ಕುಟುಂಬಗಳಿಗೆ ₹ 30 ಲಕ್ಷ ವಿಮೆ ನೀಡಬೇಕು ಎಂದು ಆಗ್ರಹಿಸಿದರು.