<p>ತಿಪಟೂರು: ‘ತಾಲ್ಲೂಕಿನ 26 ಪಂಚಾಯಿತಿಗಳನ್ನು ಬಿಜೆಪಿ ನೇತೃತ್ವದಲ್ಲಿ ಅಧಿಕಾರ ಹಿಡಿಯಲು ನಿರ್ಧರಿ<br />ಸಿದ್ದು, ಬಿಜೆಪಿಗೆ ಬೆಂಬಲವಾಗಿ ಕಾರ್ಯಕರ್ತನಾಗಿ ದುಡಿಯುತ್ತೇನೆ’ ಎಂದು ಮುಖಂಡ ಲೋಕೇಶ್ವರ ತಿಳಿಸಿದರು.</p>.<p>ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಒಡೆದ ಮನೆಯಾಗಿದೆ. ಜೆಡಿಎಸ್ ಅಸ್ತಿತ್ವದಲ್ಲಿ ಇಲ್ಲ<br />ದಂತಾಗಿದೆ. ಹಾಗಾಗಿ ರಾಜ್ಯ ಸರ್ಕಾರದ ಯೋಜನೆಗಳನ್ನು ಮನೆ ಮನೆಗಳಿಗೆ ತಲುಪಿಸಿ ಮತ ಕೇಳಲಿದ್ದೇವೆ. ತಾಲ್ಲೂಕಿನ ಎಲ್ಲ ಪಂಚಾಯಿತಿಗಳನ್ನು ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳಲಾಗುವುದು’ ಎಂದರು.</p>.<p>ಚುನಾವಣೆ ಬಹಿಷ್ಕರಿಸಿರುವ ಹೊನ್ನವಳ್ಳಿ ಗ್ರಾಮ ಪಂಚಾಯಿತಿ ಪ್ರಜಾಪ್ರಭುತ್ವ ವ್ಯವಸ್ಥೆಯಿಂದ ಹೊರಗುಳಿ<br />ಯಲಿದೆ. ಆದರೆ ಅನೇಕ ವರ್ಷಗಳಿಂದಲೂ ನೀರಿಲ್ಲದೆ ಇಲ್ಲಿನ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. 2010ರಲ್ಲಿ<br />ಹಣ ಮಂಜೂರಾಗಿತ್ತು. ಆದರೆತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸುವಲ್ಲಿ ಸರ್ಕಾರ ವಿಫಲವಾಗಿದೆ. ಹೊಸ ಯೋಜನೆಗೆ ₹36 ಕೋಟಿ ಸಿದ್ಧವಾಗಿದ್ದು ಹೋರಾಟಗಳು ನಡೆದರೆ ನೀರು ಬರಲಿದೆ. ಮುಂದಿನ ದಿನಗಳಲ್ಲಿ ಶಾಸಕರೊಂದಿಗೆ ಚರ್ಚಿಸಿ ಮುಖ್ಯಮಂತ್ರಿ ಬಳಿನಿಯೋಗ ಕರೆದೊಯ್ದು ಮನವಿ ಮಾಡಲಾಗುವುದು. ಮುಂದಿನ ಮಳೆಗಾಲದ ಒಳಗಾಗಿ ಹೊನ್ನವಳ್ಳಿ ಕೆರೆಗೆ ನೀರು ಹರಿಸಲು ಪ್ರಯತ್ನಿಸಲಾಗುವುದು ಎಂದರು.</p>.<p>ನಗರಸಭೆ ಉಪಾಧ್ಯಕ್ಷ ಗಣೇಶ್, ಸದಸ್ಯರಾದ ಭಾರತಿ, ಜಯರಾಂ, ನಯೀಮ್, ಮುನ್ನಾ, ಮುಖಂಡರಾದ ಧರಣೀಶ್, ರಾಜಶೇಖರ್, ಆಲದಹಳ್ಳಿ ಹರೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿಪಟೂರು: ‘ತಾಲ್ಲೂಕಿನ 26 ಪಂಚಾಯಿತಿಗಳನ್ನು ಬಿಜೆಪಿ ನೇತೃತ್ವದಲ್ಲಿ ಅಧಿಕಾರ ಹಿಡಿಯಲು ನಿರ್ಧರಿ<br />ಸಿದ್ದು, ಬಿಜೆಪಿಗೆ ಬೆಂಬಲವಾಗಿ ಕಾರ್ಯಕರ್ತನಾಗಿ ದುಡಿಯುತ್ತೇನೆ’ ಎಂದು ಮುಖಂಡ ಲೋಕೇಶ್ವರ ತಿಳಿಸಿದರು.</p>.<p>ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಒಡೆದ ಮನೆಯಾಗಿದೆ. ಜೆಡಿಎಸ್ ಅಸ್ತಿತ್ವದಲ್ಲಿ ಇಲ್ಲ<br />ದಂತಾಗಿದೆ. ಹಾಗಾಗಿ ರಾಜ್ಯ ಸರ್ಕಾರದ ಯೋಜನೆಗಳನ್ನು ಮನೆ ಮನೆಗಳಿಗೆ ತಲುಪಿಸಿ ಮತ ಕೇಳಲಿದ್ದೇವೆ. ತಾಲ್ಲೂಕಿನ ಎಲ್ಲ ಪಂಚಾಯಿತಿಗಳನ್ನು ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳಲಾಗುವುದು’ ಎಂದರು.</p>.<p>ಚುನಾವಣೆ ಬಹಿಷ್ಕರಿಸಿರುವ ಹೊನ್ನವಳ್ಳಿ ಗ್ರಾಮ ಪಂಚಾಯಿತಿ ಪ್ರಜಾಪ್ರಭುತ್ವ ವ್ಯವಸ್ಥೆಯಿಂದ ಹೊರಗುಳಿ<br />ಯಲಿದೆ. ಆದರೆ ಅನೇಕ ವರ್ಷಗಳಿಂದಲೂ ನೀರಿಲ್ಲದೆ ಇಲ್ಲಿನ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. 2010ರಲ್ಲಿ<br />ಹಣ ಮಂಜೂರಾಗಿತ್ತು. ಆದರೆತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸುವಲ್ಲಿ ಸರ್ಕಾರ ವಿಫಲವಾಗಿದೆ. ಹೊಸ ಯೋಜನೆಗೆ ₹36 ಕೋಟಿ ಸಿದ್ಧವಾಗಿದ್ದು ಹೋರಾಟಗಳು ನಡೆದರೆ ನೀರು ಬರಲಿದೆ. ಮುಂದಿನ ದಿನಗಳಲ್ಲಿ ಶಾಸಕರೊಂದಿಗೆ ಚರ್ಚಿಸಿ ಮುಖ್ಯಮಂತ್ರಿ ಬಳಿನಿಯೋಗ ಕರೆದೊಯ್ದು ಮನವಿ ಮಾಡಲಾಗುವುದು. ಮುಂದಿನ ಮಳೆಗಾಲದ ಒಳಗಾಗಿ ಹೊನ್ನವಳ್ಳಿ ಕೆರೆಗೆ ನೀರು ಹರಿಸಲು ಪ್ರಯತ್ನಿಸಲಾಗುವುದು ಎಂದರು.</p>.<p>ನಗರಸಭೆ ಉಪಾಧ್ಯಕ್ಷ ಗಣೇಶ್, ಸದಸ್ಯರಾದ ಭಾರತಿ, ಜಯರಾಂ, ನಯೀಮ್, ಮುನ್ನಾ, ಮುಖಂಡರಾದ ಧರಣೀಶ್, ರಾಜಶೇಖರ್, ಆಲದಹಳ್ಳಿ ಹರೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>