<p><strong>ಗುಬ್ಬಿ</strong>: ಮಕ್ಕಳನ್ನು ಪ್ರೋತ್ಸಾಹಿಸಲು ಪ್ರತಿಭಾ ಪುರಸ್ಕಾರಗಳು ಸಹಕಾರಿ ಎಂದು ಎಲೆರಾಂಪುರ ಮಠದ ಹನುಮಂತನಾಥ ಸ್ವಾಮೀಜಿ ತಿಳಿಸಿದರು.</p>.<p>ತಾಲ್ಲೂಕಿನ ಚೇಳೂರಿನಲ್ಲಿ ಕುಂಚಿಟಿಗ ಮಹಾಸಭಾದಿಂದ ಭಾನುವಾರ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮಕ್ಕಳು ಓದಿನ ಜೊತೆ ಸಂಸ್ಕಾರ ರೂಢಿಸಿಕೊಂಡು ಗೌರವಯುತ ಬದುಕು ಕಟ್ಟಿಕೊಳ್ಳುವತ್ತ ಗಮನಹರಿಸಬೇಕು. ಸನ್ಮಾನವು ಜವಾಬ್ದಾರಿಯನ್ನು ಹೆಚ್ಚಿಸುವುದರಿಂದ ಮಕ್ಕಳು ಸಿಕ್ಕಿರುವ ಅವಕಾಶಗಳನ್ನು ಉತ್ತಮವಾಗಿ ಬಳಸಿಕೊಂಡು ಬದುಕಿನ ಗುರಿ ತಲುಪಬೇಕು ಎಂದರು.</p>.<p>ಹಾಲಪ್ಪ ಪ್ರತಿಷ್ಠಾನದ ಮುಖಂಡ ಮುರಳಿದರ ಹಾಲಪ್ಪ ಮಾತನಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಗಮನಹರಿಸಬೇಕು. ಎಲ್ಲ ತಾರತಮ್ಯ ಬದಿಗೊತ್ತಿ ಒಗ್ಗಟ್ಟಿನಿಂದ ಇದ್ದಲ್ಲಿ ಮಾತ್ರ ಅಗತ್ಯ ಸೌಕರ್ಯಗಳನ್ನು ಪಡೆಯಲು ಸಾಧ್ಯ ಎಂದರು.</p>.<p>ಸಮುದಾಯದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಹಾಲಪ್ಪ ಪ್ರತಿಷ್ಠಾನ ವಿಶೇಷ ಕ್ರಿಯಾ ಯೋಜನೆ ರೂಪಿಸಿದೆ. ಗ್ರಾಮೀಣ ಭಾಗದ ಮಕ್ಕಳಿಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವಂತೆ ತರಬೇತಿ ಕೇಂದ್ರಗಳನ್ನು ತೆರೆಯಲು ಆಲೋಚಿಸಲಾಗುತ್ತಿದೆ ಎಂದು ಹೇಳಿದರು.</p>.<p>ಕುಂಚಿಟಿಗ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಜಯಣ್ಣ ಮಾತನಾಡಿ, ತಾಲ್ಲೂಕಿನಲ್ಲಿ ಸಮುದಾಯವು ಬಲಾಢ್ಯವಾಗಿದ್ದರೂ ರಾಜಕೀಯ ಶಕ್ತಿ ಪಡೆಯಲು ಸಾಧ್ಯವಾಗದಿರುವುದು ದುರಾದೃಷ್ಟಕರ. ಸಮುದಾಯದ ಒಡಕನ್ನು ಬೇರೆಯವರು ಪಡೆದುಕೊಳ್ಳುತ್ತಿದ್ದಾರೆ ಎಂದರು.</p>.<p>ಒಕ್ಕಲಿಗ ದಂತ ಮಹಾವಿದ್ಯಾಲಯದ ಅಧ್ಯಕ್ಷ ಜೆ. ರಾಜು ಮಾತನಾಡಿ, ಗ್ರಾಮೀಣ ಭಾಗದಲ್ಲಿ ಸಮುದಾಯವನ್ನು ಸಂಘಟಿಸಬೇಕು. ಸಮುದಾಯದವರು ರಾಜಕೀಯ ಶಕ್ತಿ ಪಡೆಯುವ ಜೊತೆಗೆ ಶೈಕ್ಷಣಿಕವಾಗಿಯೂ ಮುಂದೆ ಬರಬೇಕಿದೆ ಎಂದು ಹೇಳಿದರು.</p>.<p>ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಕುಂಚಿಟಿಗ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಧರ್, ಹಿರಿಯೂರು ತಾಲ್ಲೂಕು ಕುಂಚಿಟಿಗ ಸಂಘದ ಅಧ್ಯಕ್ಷ ಶಿವಣ್ಣ, ಸಮುದಾಯದ ಮುಖಂಡರು, ವಿದ್ಯಾರ್ಥಿಗಳು ಹಾಗೂ ಪೋಷಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ</strong>: ಮಕ್ಕಳನ್ನು ಪ್ರೋತ್ಸಾಹಿಸಲು ಪ್ರತಿಭಾ ಪುರಸ್ಕಾರಗಳು ಸಹಕಾರಿ ಎಂದು ಎಲೆರಾಂಪುರ ಮಠದ ಹನುಮಂತನಾಥ ಸ್ವಾಮೀಜಿ ತಿಳಿಸಿದರು.</p>.<p>ತಾಲ್ಲೂಕಿನ ಚೇಳೂರಿನಲ್ಲಿ ಕುಂಚಿಟಿಗ ಮಹಾಸಭಾದಿಂದ ಭಾನುವಾರ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮಕ್ಕಳು ಓದಿನ ಜೊತೆ ಸಂಸ್ಕಾರ ರೂಢಿಸಿಕೊಂಡು ಗೌರವಯುತ ಬದುಕು ಕಟ್ಟಿಕೊಳ್ಳುವತ್ತ ಗಮನಹರಿಸಬೇಕು. ಸನ್ಮಾನವು ಜವಾಬ್ದಾರಿಯನ್ನು ಹೆಚ್ಚಿಸುವುದರಿಂದ ಮಕ್ಕಳು ಸಿಕ್ಕಿರುವ ಅವಕಾಶಗಳನ್ನು ಉತ್ತಮವಾಗಿ ಬಳಸಿಕೊಂಡು ಬದುಕಿನ ಗುರಿ ತಲುಪಬೇಕು ಎಂದರು.</p>.<p>ಹಾಲಪ್ಪ ಪ್ರತಿಷ್ಠಾನದ ಮುಖಂಡ ಮುರಳಿದರ ಹಾಲಪ್ಪ ಮಾತನಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಗಮನಹರಿಸಬೇಕು. ಎಲ್ಲ ತಾರತಮ್ಯ ಬದಿಗೊತ್ತಿ ಒಗ್ಗಟ್ಟಿನಿಂದ ಇದ್ದಲ್ಲಿ ಮಾತ್ರ ಅಗತ್ಯ ಸೌಕರ್ಯಗಳನ್ನು ಪಡೆಯಲು ಸಾಧ್ಯ ಎಂದರು.</p>.<p>ಸಮುದಾಯದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಹಾಲಪ್ಪ ಪ್ರತಿಷ್ಠಾನ ವಿಶೇಷ ಕ್ರಿಯಾ ಯೋಜನೆ ರೂಪಿಸಿದೆ. ಗ್ರಾಮೀಣ ಭಾಗದ ಮಕ್ಕಳಿಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವಂತೆ ತರಬೇತಿ ಕೇಂದ್ರಗಳನ್ನು ತೆರೆಯಲು ಆಲೋಚಿಸಲಾಗುತ್ತಿದೆ ಎಂದು ಹೇಳಿದರು.</p>.<p>ಕುಂಚಿಟಿಗ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಜಯಣ್ಣ ಮಾತನಾಡಿ, ತಾಲ್ಲೂಕಿನಲ್ಲಿ ಸಮುದಾಯವು ಬಲಾಢ್ಯವಾಗಿದ್ದರೂ ರಾಜಕೀಯ ಶಕ್ತಿ ಪಡೆಯಲು ಸಾಧ್ಯವಾಗದಿರುವುದು ದುರಾದೃಷ್ಟಕರ. ಸಮುದಾಯದ ಒಡಕನ್ನು ಬೇರೆಯವರು ಪಡೆದುಕೊಳ್ಳುತ್ತಿದ್ದಾರೆ ಎಂದರು.</p>.<p>ಒಕ್ಕಲಿಗ ದಂತ ಮಹಾವಿದ್ಯಾಲಯದ ಅಧ್ಯಕ್ಷ ಜೆ. ರಾಜು ಮಾತನಾಡಿ, ಗ್ರಾಮೀಣ ಭಾಗದಲ್ಲಿ ಸಮುದಾಯವನ್ನು ಸಂಘಟಿಸಬೇಕು. ಸಮುದಾಯದವರು ರಾಜಕೀಯ ಶಕ್ತಿ ಪಡೆಯುವ ಜೊತೆಗೆ ಶೈಕ್ಷಣಿಕವಾಗಿಯೂ ಮುಂದೆ ಬರಬೇಕಿದೆ ಎಂದು ಹೇಳಿದರು.</p>.<p>ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಕುಂಚಿಟಿಗ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಧರ್, ಹಿರಿಯೂರು ತಾಲ್ಲೂಕು ಕುಂಚಿಟಿಗ ಸಂಘದ ಅಧ್ಯಕ್ಷ ಶಿವಣ್ಣ, ಸಮುದಾಯದ ಮುಖಂಡರು, ವಿದ್ಯಾರ್ಥಿಗಳು ಹಾಗೂ ಪೋಷಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>