<p><strong>ಶಿರಾ: </strong>ನಗರದಲ್ಲಿ ಗುಣಮಟ್ಟದ ರಸ್ತೆ ಹಾಗೂ ಚರಂಡಿಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಶಾಸಕ ಡಾ.ಸಿ.ಎಂ. ರಾಜೇಶ್ ಗೌಡ ಹೇಳಿದರು.</p>.<p>ನಗರದ ಜ್ಯೋತಿನಗರ ಬಡಾವಣೆಯಲ್ಲಿ ಇತ್ತೀಚೆಗೆ ₹ 5 ಲಕ್ಷ ವೆಚ್ಚದಲ್ಲಿ ಸಿ.ಸಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.</p>.<p>ಶಿರಾ ನಗರ ಅತಿವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಆದ್ಯತೆ ಮೇರೆಗೆ ಮೂಲಸೌಕರ್ಯ ಒದಗಿಸಲಾಗುವುದು. ಕಾಮಗಾರಿಯ ಗುಣಮಟ್ಟದ ವಿಚಾರದಲ್ಲಿ ಯಾವುದೇ ರಾಜೀಯ ಪ್ರಶ್ನೆ ಇಲ್ಲ. ನಿಗದಿತ ಸಮಯದಲ್ಲಿ ಉತ್ತಮ ರಸ್ತೆ ಹಾಗೂ ಚರಂಡಿ ನಿರ್ಮಾಣ ಮಾಡುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.</p>.<p>ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಆರ್. ಉಗ್ರೇಶ್ ಮಾತನಾಡಿ, ನಗರಸಭೆ ವಾರ್ಡ್ ನಂ. 2 ಮತ್ತು 3ರಲ್ಲಿ ಉದ್ಯೋಗಸ್ಥರೇ ಹೆಚ್ಚು ಮಂದಿ ವಾಸವಾಗಿದ್ದಾರೆ. ಆದರೂ, ಮೂಲ ಸೌಕರ್ಯವಿಲ್ಲ. ಆದ್ದರಿಂದ ಶಾಸಕರು ಹೆಚ್ಚಿನ ಅನುದಾನವನ್ನು ಇಲ್ಲಿಗೆ ನೀಡಬೇಕು. ನಗರಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳು ಇಲ್ಲದೆ ಅಧಿಕಾರಿಗಳು ಯಾರ ಮಾತು ಕೇಳುತ್ತಿಲ್ಲ. ಅಭಿವೃದ್ಧಿ ಕುಂಠಿತವಾಗಿದ್ದು ಶಾಸಕರು ಈ ಬಗ್ಗೆ ಎಚ್ಚರವಹಿಸಬೇಕು ಎಂದರು.</p>.<p>ನಗರಸಭೆ ಪೌರಾಯುಕ್ತ ಶ್ರೀನಿವಾಸ್, ಎಂಜಿನಿಯರ್ ಶಾರದಾ, ಗೋಣಿಹಳ್ಳಿ ದೇವರಾಜು, ಸುರೇಶ್, ಪುಟ್ಟಸಿದ್ದ ಯಾದವ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ: </strong>ನಗರದಲ್ಲಿ ಗುಣಮಟ್ಟದ ರಸ್ತೆ ಹಾಗೂ ಚರಂಡಿಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಶಾಸಕ ಡಾ.ಸಿ.ಎಂ. ರಾಜೇಶ್ ಗೌಡ ಹೇಳಿದರು.</p>.<p>ನಗರದ ಜ್ಯೋತಿನಗರ ಬಡಾವಣೆಯಲ್ಲಿ ಇತ್ತೀಚೆಗೆ ₹ 5 ಲಕ್ಷ ವೆಚ್ಚದಲ್ಲಿ ಸಿ.ಸಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.</p>.<p>ಶಿರಾ ನಗರ ಅತಿವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಆದ್ಯತೆ ಮೇರೆಗೆ ಮೂಲಸೌಕರ್ಯ ಒದಗಿಸಲಾಗುವುದು. ಕಾಮಗಾರಿಯ ಗುಣಮಟ್ಟದ ವಿಚಾರದಲ್ಲಿ ಯಾವುದೇ ರಾಜೀಯ ಪ್ರಶ್ನೆ ಇಲ್ಲ. ನಿಗದಿತ ಸಮಯದಲ್ಲಿ ಉತ್ತಮ ರಸ್ತೆ ಹಾಗೂ ಚರಂಡಿ ನಿರ್ಮಾಣ ಮಾಡುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.</p>.<p>ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಆರ್. ಉಗ್ರೇಶ್ ಮಾತನಾಡಿ, ನಗರಸಭೆ ವಾರ್ಡ್ ನಂ. 2 ಮತ್ತು 3ರಲ್ಲಿ ಉದ್ಯೋಗಸ್ಥರೇ ಹೆಚ್ಚು ಮಂದಿ ವಾಸವಾಗಿದ್ದಾರೆ. ಆದರೂ, ಮೂಲ ಸೌಕರ್ಯವಿಲ್ಲ. ಆದ್ದರಿಂದ ಶಾಸಕರು ಹೆಚ್ಚಿನ ಅನುದಾನವನ್ನು ಇಲ್ಲಿಗೆ ನೀಡಬೇಕು. ನಗರಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳು ಇಲ್ಲದೆ ಅಧಿಕಾರಿಗಳು ಯಾರ ಮಾತು ಕೇಳುತ್ತಿಲ್ಲ. ಅಭಿವೃದ್ಧಿ ಕುಂಠಿತವಾಗಿದ್ದು ಶಾಸಕರು ಈ ಬಗ್ಗೆ ಎಚ್ಚರವಹಿಸಬೇಕು ಎಂದರು.</p>.<p>ನಗರಸಭೆ ಪೌರಾಯುಕ್ತ ಶ್ರೀನಿವಾಸ್, ಎಂಜಿನಿಯರ್ ಶಾರದಾ, ಗೋಣಿಹಳ್ಳಿ ದೇವರಾಜು, ಸುರೇಶ್, ಪುಟ್ಟಸಿದ್ದ ಯಾದವ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>