<p><strong>ತಿಪಟೂರು: </strong>ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಮೂರು ವರ್ಷಗಳಿಂದಲೂ ಗ್ರಾಮೀಣ ಹಾಗೂ ನಗರ ಪ್ರದೇಶದ ರಸ್ತೆಗಳ ಅಭಿವೃದ್ಧಿ ಶಾಸಕ ಬಿ.ಸಿ.ನಾಗೇಶ್ ಹೆಚ್ಚಿನ ಆದ್ಯತೆ ನೀಡಿದ್ದಾರೆ.</p>.<p>ತಾಲ್ಲೂಕಿನ ವಿವಿಧೆಡೆಗಳಲ್ಲಿ ವಿವಿಧ ಯೋಜನೆಗಳ ಅಡಿ ಶೇ 70ಕ್ಕೂ ಹೆಚ್ಚಿನ ಸುವ್ಯವಸ್ಥಿತ ರಸ್ತೆ ನಿರ್ಮಾಣವಾಗಿವೆ.</p>.<p>ನಗರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಕೊಬ್ಬರಿ ಮಾರುಕಟ್ಟೆ ಇದೆ. ಗ್ರಾಮೀಣ ಭಾಗದಿಂದ ನಗರಕ್ಕೆ ಕೊಬ್ಬರಿ ತೆಗೆದುಕೊಂಡು ಬರಲು ಸುವ್ಯವಸ್ಥಿತ ರಸ್ತೆಗಳು ಅಗತ್ಯವಿದ್ದು, ಶಾಸಕರು ಇದಕ್ಕೆ ಆದ್ಯತೆ ನೀಡಿದ್ದಾರೆ. ಶಾಲೆ, ಧಾರ್ಮಿಕ ಕೇಂದ್ರಗಳನ್ನು ಸಂಪರ್ಕಿಸುವ ರಸ್ತೆಗಳ ನಿರ್ಮಾಣಕ್ಕೂ ಶಾಸಕರ ಅನುದಾನ ಬಳಕೆಯಾಗಿದೆ.</p>.<p>ಶಾಸಕರು ತಮ್ಮ ಪ್ರದೇಶಾಭಿವೃದ್ಧಿ ಅನುದಾನವನ್ನು ಶೇ 100ರಷ್ಟು ಬಳಕೆ ಮಾಡಿಕೊಂಡಿದ್ದಾರೆ. 2018ರಲ್ಲಿ ಸುಮಾರು 73 ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿತ್ತು. ಅದರಲ್ಲಿ 62 ಕಾಮಗಾರಿ ಪೂರ್ಣಗೊಂಡಿದ್ದು, 11 ಕಾಮಗಾರಿಗಳು ಪ್ರಗತಿಯಲ್ಲಿವೆ.</p>.<p>2019ರಲ್ಲಿ ಸುಮಾರು 43 ಕಾಮಗಾರಿಗಳು ಅನುಮೋದನೆಗೊಂಡಿತ್ತು. ಅದರಲ್ಲಿ 40ಕಾಮಗಾರಿಗಳು ರಸ್ತೆ ಅಭಿವೃದ್ಧಿಯದ್ದಾಗಿದ್ದು, ಉಳಿದ 3 ಕಾಮಗಾರಿ ನಗರದ ಎನ್.ಎಚ್. 206ರ ಬೀದಿ ದೀಪಗಳ ಅಭಿವೃದ್ಧಿಗಾಗಿ ಬಳಕೆ ಮಾಡಲಾಗಿದೆ. ಒಟ್ಟು 15 ಕಾಮಗಾರಿ ಪ್ರಗತಿಯಲ್ಲಿದ್ದು, ಉಳಿದ 28 ಕಾಮಗಾರಿಗಳು ಪೂರ್ಣಗೊಂಡಿವೆ.</p>.<p>2020ರಲ್ಲಿ ಅನುಮೋದನೆಗೊಂಡ 27 ಕಾಮಗಾರಿಗಳಲ್ಲಿ ಎಲ್ಲವೂ ಸದ್ಯ ಪ್ರಗತಿಯಲ್ಲಿವೆ. ನಗರದಾದ್ಯಂತ ಸುರಕ್ಷತೆಯ ದೃಷ್ಟಿಯಿಂದ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆಗೆ ₹20 ಲಕ್ಷ ಅನುದಾನವನ್ನು ಬಳಕೆ ಮಾಡಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು: </strong>ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಮೂರು ವರ್ಷಗಳಿಂದಲೂ ಗ್ರಾಮೀಣ ಹಾಗೂ ನಗರ ಪ್ರದೇಶದ ರಸ್ತೆಗಳ ಅಭಿವೃದ್ಧಿ ಶಾಸಕ ಬಿ.ಸಿ.ನಾಗೇಶ್ ಹೆಚ್ಚಿನ ಆದ್ಯತೆ ನೀಡಿದ್ದಾರೆ.</p>.<p>ತಾಲ್ಲೂಕಿನ ವಿವಿಧೆಡೆಗಳಲ್ಲಿ ವಿವಿಧ ಯೋಜನೆಗಳ ಅಡಿ ಶೇ 70ಕ್ಕೂ ಹೆಚ್ಚಿನ ಸುವ್ಯವಸ್ಥಿತ ರಸ್ತೆ ನಿರ್ಮಾಣವಾಗಿವೆ.</p>.<p>ನಗರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಕೊಬ್ಬರಿ ಮಾರುಕಟ್ಟೆ ಇದೆ. ಗ್ರಾಮೀಣ ಭಾಗದಿಂದ ನಗರಕ್ಕೆ ಕೊಬ್ಬರಿ ತೆಗೆದುಕೊಂಡು ಬರಲು ಸುವ್ಯವಸ್ಥಿತ ರಸ್ತೆಗಳು ಅಗತ್ಯವಿದ್ದು, ಶಾಸಕರು ಇದಕ್ಕೆ ಆದ್ಯತೆ ನೀಡಿದ್ದಾರೆ. ಶಾಲೆ, ಧಾರ್ಮಿಕ ಕೇಂದ್ರಗಳನ್ನು ಸಂಪರ್ಕಿಸುವ ರಸ್ತೆಗಳ ನಿರ್ಮಾಣಕ್ಕೂ ಶಾಸಕರ ಅನುದಾನ ಬಳಕೆಯಾಗಿದೆ.</p>.<p>ಶಾಸಕರು ತಮ್ಮ ಪ್ರದೇಶಾಭಿವೃದ್ಧಿ ಅನುದಾನವನ್ನು ಶೇ 100ರಷ್ಟು ಬಳಕೆ ಮಾಡಿಕೊಂಡಿದ್ದಾರೆ. 2018ರಲ್ಲಿ ಸುಮಾರು 73 ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿತ್ತು. ಅದರಲ್ಲಿ 62 ಕಾಮಗಾರಿ ಪೂರ್ಣಗೊಂಡಿದ್ದು, 11 ಕಾಮಗಾರಿಗಳು ಪ್ರಗತಿಯಲ್ಲಿವೆ.</p>.<p>2019ರಲ್ಲಿ ಸುಮಾರು 43 ಕಾಮಗಾರಿಗಳು ಅನುಮೋದನೆಗೊಂಡಿತ್ತು. ಅದರಲ್ಲಿ 40ಕಾಮಗಾರಿಗಳು ರಸ್ತೆ ಅಭಿವೃದ್ಧಿಯದ್ದಾಗಿದ್ದು, ಉಳಿದ 3 ಕಾಮಗಾರಿ ನಗರದ ಎನ್.ಎಚ್. 206ರ ಬೀದಿ ದೀಪಗಳ ಅಭಿವೃದ್ಧಿಗಾಗಿ ಬಳಕೆ ಮಾಡಲಾಗಿದೆ. ಒಟ್ಟು 15 ಕಾಮಗಾರಿ ಪ್ರಗತಿಯಲ್ಲಿದ್ದು, ಉಳಿದ 28 ಕಾಮಗಾರಿಗಳು ಪೂರ್ಣಗೊಂಡಿವೆ.</p>.<p>2020ರಲ್ಲಿ ಅನುಮೋದನೆಗೊಂಡ 27 ಕಾಮಗಾರಿಗಳಲ್ಲಿ ಎಲ್ಲವೂ ಸದ್ಯ ಪ್ರಗತಿಯಲ್ಲಿವೆ. ನಗರದಾದ್ಯಂತ ಸುರಕ್ಷತೆಯ ದೃಷ್ಟಿಯಿಂದ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆಗೆ ₹20 ಲಕ್ಷ ಅನುದಾನವನ್ನು ಬಳಕೆ ಮಾಡಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>