<p><strong>ಶಿರಾ: </strong>ಬಡಜನತೆಯ ಅಪೌಷ್ಟಿಕತೆ ನಿವಾರಣೆಗೆ ಪೋಷಣ ಅಭಿಯಾನ ಪೂರಕವಾಗಿದೆ ಎಂದು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ಲಾ ಖಾನ್ ಹೇಳಿದರು.</p>.<p>ನಗರದ ಬೇಗಂ ಮೋಹಾಲ್ಲಾದ ಪಿ.ಎಚ್.ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಪೋಷಣ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಅಪೌಷ್ಟಿಕತೆ ನಿರ್ಮೂಲನೆಗಾಗಿ ಸ್ಥಳೀಯವಾಗಿ ದೊರೆಯುವ ಧಾನ್ಯ, ಸೊಪ್ಪು, ತರಕಾರಿ, ಹಣ್ಣುಗಳನ್ನು ಹೆಚ್ಚುಬಳಕೆ ಮಾಡಬೇಕು. ಸರ್ಕಾರ ಸಹ ಅಪೌಷ್ಟಿಕತೆ ನಿರ್ಮೂಲನೆಗಾಗಿ ಹಲವಾರು ಯೋಜನೆಗಳನ್ನು ಪ್ರಾರಂಭಿಸಿದ್ದು ಅಂಗನವಾಡಿ ಕೇಂದ್ರಗಳು ಈ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಿದ್ದು ಇಲ್ಲಿ ನೀಡುವ ಪೌಷ್ಟಿಕ ಆಹಾರವನ್ನು ತಪ್ಪದೆ ಬಳಸಬೇಕು ಎಂದರು.</p>.<p>ಅಪೌಷ್ಟಿಕತೆ ನಿರ್ಮೂಲನೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅತ್ಯವಶ್ಯವಾಗಿದೆ. ಇದರಿಂದಾಗಿ ಗರ್ಭಿಣಿಯರು ಮತ್ತು ನವಜಾತ ಶಿಶುಗಳ ಮರಣವನ್ನು ತಡೆಯಲು ಸಾಧ್ಯ ಎಂದರು.ಜ್ಯೋತಿ, ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ: </strong>ಬಡಜನತೆಯ ಅಪೌಷ್ಟಿಕತೆ ನಿವಾರಣೆಗೆ ಪೋಷಣ ಅಭಿಯಾನ ಪೂರಕವಾಗಿದೆ ಎಂದು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ಲಾ ಖಾನ್ ಹೇಳಿದರು.</p>.<p>ನಗರದ ಬೇಗಂ ಮೋಹಾಲ್ಲಾದ ಪಿ.ಎಚ್.ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಪೋಷಣ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಅಪೌಷ್ಟಿಕತೆ ನಿರ್ಮೂಲನೆಗಾಗಿ ಸ್ಥಳೀಯವಾಗಿ ದೊರೆಯುವ ಧಾನ್ಯ, ಸೊಪ್ಪು, ತರಕಾರಿ, ಹಣ್ಣುಗಳನ್ನು ಹೆಚ್ಚುಬಳಕೆ ಮಾಡಬೇಕು. ಸರ್ಕಾರ ಸಹ ಅಪೌಷ್ಟಿಕತೆ ನಿರ್ಮೂಲನೆಗಾಗಿ ಹಲವಾರು ಯೋಜನೆಗಳನ್ನು ಪ್ರಾರಂಭಿಸಿದ್ದು ಅಂಗನವಾಡಿ ಕೇಂದ್ರಗಳು ಈ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಿದ್ದು ಇಲ್ಲಿ ನೀಡುವ ಪೌಷ್ಟಿಕ ಆಹಾರವನ್ನು ತಪ್ಪದೆ ಬಳಸಬೇಕು ಎಂದರು.</p>.<p>ಅಪೌಷ್ಟಿಕತೆ ನಿರ್ಮೂಲನೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅತ್ಯವಶ್ಯವಾಗಿದೆ. ಇದರಿಂದಾಗಿ ಗರ್ಭಿಣಿಯರು ಮತ್ತು ನವಜಾತ ಶಿಶುಗಳ ಮರಣವನ್ನು ತಡೆಯಲು ಸಾಧ್ಯ ಎಂದರು.ಜ್ಯೋತಿ, ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>