ಚಂದ್ರಯಾನ–2 ವಿಫಲಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುರೇಶ್ಕುಮಾರ್, ‘ಜೆಡಿಎಸ್ ಮತ್ತು ಕಾಂಗ್ರೆಸ್ನವರು ಕೂಡಿ ಸರ್ಕಾರ ಮಾಡಿದವರು. ಸಿದ್ಧರಾಮಯ್ಯ ಅವರು ಮೂಢನಂಬಿಕೆ ವಿರುದ್ಧ ಕಾನೂನು ತಂದಿದ್ದಾರೆ. ಕುಮಾರಸ್ವಾಮಿಯವರು ಅದನ್ನು ಗಮನಿಸಬೇಕು’ ಎಂದು ತಿಳಿಸಿದರು.