<p><strong>ತುಮಕೂರು</strong>: ರಾಜ್ಯ ಸರ್ಕಾರವನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದು, ಅಂತಹ ಶಾಲೆಗಳಲ್ಲಿ ಕನ್ನಡ ಭಾಷೆಯ ಅನುಷ್ಠಾನ ಕಷ್ಟಕರವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಇಲ್ಲಿ ಶುಕ್ರವಾರ ವಿಷಾದಿಸಿದರು.</p>.<p>ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರಕ್ಕೆ ಹಿಡಿತ ಇಲ್ಲವಾಗಿದೆ. ಸರ್ಕಾರದ ಹಿಡಿತದಲ್ಲಿ ಇರಬೇಕಾದ ಸಂಸ್ಥೆಗಳು ಸರ್ಕಾರವನ್ನು ನಿಯಂತ್ರಿಸುತ್ತಿವೆ. ಹಾಗಾಗಿ ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆ ಅನುಷ್ಠಾನ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ವಿಶ್ವವಿದ್ಯಾಲಯಗಳ ಹಂತದಲ್ಲಿ ಹಾಗೂ ಉನ್ನತ ಶಿಕ್ಷಣಕ್ಕೆ ಪೂರಕವಾದ ಪಠ್ಯವನ್ನು ಕನ್ನಡದಲ್ಲಿ ರಚಿಸಿದರೆ ಅದನ್ನು ಪ್ರಾಧಿಕಾರ ಅಥವಾ ಇತರ ಸಂಸ್ಥೆಗಳ ಮೂಲಕ ಮುದ್ರಿಸಲಾಗುವುದು. ₹500 ಕೋಟಿ ಇಡುಗಂಟು ನೀಡಿ, ಅದರಲ್ಲಿ ಬರುವ ಬಡ್ಡಿ ಹಣವನ್ನು ಬಳಸಿಕೊಂಡು ನಿರ್ವಹಣೆ ಮಾಡುವ ‘ಅನುದಾನ ಕೇಂದ್ರ’ ಆರಂಭಿಸಬೇಕು. ಈ ಕೇಂದ್ರದ ಮೂಲಕ ಜಗತ್ತಿನ ಇತರೆ ಭಾಷೆಗಳ ಜ್ಞಾನ ಭಂಡಾರವನ್ನು ಕನ್ನಡಕ್ಕೆ ಅನುವಾದಿಸುವ ಕೆಲಸ ಮಾಡುವಂತೆ ಸರ್ಕಾರಕ್ಕೆ ಸಲಹೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಕನ್ನಡಪರ ಸಂಘಟನೆಗಳ ಪ್ರಮುಖರು, ಹೋರಾಟಗಾರರ ಜತೆ ಸಮಾಲೋಚನೆ ನಡೆಸಲಾಯಿತು. ಜಿಲ್ಲಾಧಿಕಾರಿ, ವಿಶ್ವವಿದ್ಯಾಲಯದಲ್ಲಿ ಕನ್ನಡ ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸಲಾಯಿತು. ಜಿಲ್ಲೆಯಲ್ಲಿ ಕನ್ನಡ ಅನುಷ್ಠಾನಕ್ಕೆ ಅಧಿಕಾರಿಗಳು ಆಸಕ್ತಿಯಿಂದ ಕೆಲಸ ಮಾಡಿದಂತೆ ಕಂಡುಬರಲಿಲ್ಲ. ತಮಗೆ ಶಿಕ್ಷೆ ನೀಡುವ ಅಧಿಕಾರ ಇಲ್ಲ. ಆದರೆ ಈ ಬಗ್ಗೆ ಸೂಚನೆ ನೀಡಲಾಗಿದೆ ಎಂದರು.</p>.<p>2022 ಸಮಗ್ರ ಕನ್ನಡ ಅನುಷ್ಠಾನ ಅಧಿನಿಯಮ ಕೆಲವೇ ತಿಂಗಳಲ್ಲಿ ಜಾರಿಗೆ ಬರಲಿದೆ. ಇದು ಜಾರಿಯಾದರೆ ನಿಯಮ ಉಲ್ಲಂಘಿಸುವ ಹಾಗೂ ಕನ್ನಡ ಅನುಷ್ಠಾನ ಮಾಡದ ಅಧಿಕಾರಿ, ನೌಕರರಿಗೆ ಶಿಕ್ಷೆ ವಿಧಿಸಬಹುದಾಗಿದೆ. ಈಗ ಶಿಕ್ಷೆಯ ಭಯವಿಲ್ಲದೆ ಕನ್ನಡ ಅನುಷ್ಠಾನದಲ್ಲಿ ತಾತ್ಸಾರ ತೋರುತ್ತಾರೆ ಎಂದು ಹೇಳಿದರು.</p>.<p>ಕನ್ನಡಪರ ಹೋರಾಟಗಾರರು ಹಾಗೂ ಜಿಲ್ಲಾಧಿಕಾರಿ ನಡುವೆ ಅಂತರ ಇರುವುದು, ಹೋರಾಟಗಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಸಭೆ ನಡೆದ ಸಮಯದಲ್ಲಿ ಕಂಡು ಬಂತು. ಜಿಲ್ಲಾಧಿಕಾರಿ ವಿರುದ್ಧ ಹೋರಾಟಗಾರರು ದೂರು ಸಲ್ಲಿಸಿದ್ದಾರೆ. ಈ ವಿಚಾರವನ್ನು ಜಿಲ್ಲಾಧಿಕಾರಿ ಗಮನಕ್ಕೆ ತಂದಿದ್ದು, ಸರಿಪಡಿಸಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ. ಕನ್ನಡದ ಪರವಾಗಿ ಹೋರಾಟ ನಡೆಸಿದವರ ಮೇಲೆ ದಾಖಲಾಗಿರುವ ದೂರಿನ ವಿವರಗಳನ್ನು ನೀಡುವಂತೆ ನಿರ್ದೇಶಿಸಲಾಗಿದೆ ಎಂದು ತಿಳಿಸಿದರು.</p>.<p>ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ಲ, ಸದಸ್ಯ ರವಿಕುಮಾರ್ ನೀಹ ಇತರರು ಉಪಸ್ಥಿತರಿದ್ದರು.</p>.<p><strong>ಬ್ಯಾಂಕ್ಗೆ ಕನ್ನಡ ಬಲ್ಲವರ ನೇಮಕ </strong></p><p>ರಾಷ್ಟ್ರೀಕೃತ ಬ್ಯಾಂಕ್ಗಳ ಎಲ್ಲ ಶಾಖೆಯಲ್ಲಿ ಕನ್ನಡ ಭಾಷೆ ಗೊತ್ತಿರುವ ಒಬ್ಬರನ್ನು ಕಡ್ಡಾಯವಾಗಿ ನೇಮಕ ಮಾಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದು ಪುರುಷೋತ್ತಮ ಬಿಳಿಮಲೆ ಹೇಳಿದರು. ಈ ಸಂಬಂಧ ಲೀಡ್ ಬ್ಯಾಂಕ್ (ಎಸ್ಬಿಐ) ಅಧಿಕಾರಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಇದು ಜಾರಿಗೆ ಬರಲಿದೆ. ಇದರಿಂದ ಬ್ಯಾಂಕ್ಗಳಲ್ಲಿ ನಡೆಯುವ ಸಂಘರ್ಷ ಕಡಿಮೆಯಾಗಲಿದೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ರಾಜ್ಯ ಸರ್ಕಾರವನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದು, ಅಂತಹ ಶಾಲೆಗಳಲ್ಲಿ ಕನ್ನಡ ಭಾಷೆಯ ಅನುಷ್ಠಾನ ಕಷ್ಟಕರವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಇಲ್ಲಿ ಶುಕ್ರವಾರ ವಿಷಾದಿಸಿದರು.</p>.<p>ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರಕ್ಕೆ ಹಿಡಿತ ಇಲ್ಲವಾಗಿದೆ. ಸರ್ಕಾರದ ಹಿಡಿತದಲ್ಲಿ ಇರಬೇಕಾದ ಸಂಸ್ಥೆಗಳು ಸರ್ಕಾರವನ್ನು ನಿಯಂತ್ರಿಸುತ್ತಿವೆ. ಹಾಗಾಗಿ ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆ ಅನುಷ್ಠಾನ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ವಿಶ್ವವಿದ್ಯಾಲಯಗಳ ಹಂತದಲ್ಲಿ ಹಾಗೂ ಉನ್ನತ ಶಿಕ್ಷಣಕ್ಕೆ ಪೂರಕವಾದ ಪಠ್ಯವನ್ನು ಕನ್ನಡದಲ್ಲಿ ರಚಿಸಿದರೆ ಅದನ್ನು ಪ್ರಾಧಿಕಾರ ಅಥವಾ ಇತರ ಸಂಸ್ಥೆಗಳ ಮೂಲಕ ಮುದ್ರಿಸಲಾಗುವುದು. ₹500 ಕೋಟಿ ಇಡುಗಂಟು ನೀಡಿ, ಅದರಲ್ಲಿ ಬರುವ ಬಡ್ಡಿ ಹಣವನ್ನು ಬಳಸಿಕೊಂಡು ನಿರ್ವಹಣೆ ಮಾಡುವ ‘ಅನುದಾನ ಕೇಂದ್ರ’ ಆರಂಭಿಸಬೇಕು. ಈ ಕೇಂದ್ರದ ಮೂಲಕ ಜಗತ್ತಿನ ಇತರೆ ಭಾಷೆಗಳ ಜ್ಞಾನ ಭಂಡಾರವನ್ನು ಕನ್ನಡಕ್ಕೆ ಅನುವಾದಿಸುವ ಕೆಲಸ ಮಾಡುವಂತೆ ಸರ್ಕಾರಕ್ಕೆ ಸಲಹೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಕನ್ನಡಪರ ಸಂಘಟನೆಗಳ ಪ್ರಮುಖರು, ಹೋರಾಟಗಾರರ ಜತೆ ಸಮಾಲೋಚನೆ ನಡೆಸಲಾಯಿತು. ಜಿಲ್ಲಾಧಿಕಾರಿ, ವಿಶ್ವವಿದ್ಯಾಲಯದಲ್ಲಿ ಕನ್ನಡ ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸಲಾಯಿತು. ಜಿಲ್ಲೆಯಲ್ಲಿ ಕನ್ನಡ ಅನುಷ್ಠಾನಕ್ಕೆ ಅಧಿಕಾರಿಗಳು ಆಸಕ್ತಿಯಿಂದ ಕೆಲಸ ಮಾಡಿದಂತೆ ಕಂಡುಬರಲಿಲ್ಲ. ತಮಗೆ ಶಿಕ್ಷೆ ನೀಡುವ ಅಧಿಕಾರ ಇಲ್ಲ. ಆದರೆ ಈ ಬಗ್ಗೆ ಸೂಚನೆ ನೀಡಲಾಗಿದೆ ಎಂದರು.</p>.<p>2022 ಸಮಗ್ರ ಕನ್ನಡ ಅನುಷ್ಠಾನ ಅಧಿನಿಯಮ ಕೆಲವೇ ತಿಂಗಳಲ್ಲಿ ಜಾರಿಗೆ ಬರಲಿದೆ. ಇದು ಜಾರಿಯಾದರೆ ನಿಯಮ ಉಲ್ಲಂಘಿಸುವ ಹಾಗೂ ಕನ್ನಡ ಅನುಷ್ಠಾನ ಮಾಡದ ಅಧಿಕಾರಿ, ನೌಕರರಿಗೆ ಶಿಕ್ಷೆ ವಿಧಿಸಬಹುದಾಗಿದೆ. ಈಗ ಶಿಕ್ಷೆಯ ಭಯವಿಲ್ಲದೆ ಕನ್ನಡ ಅನುಷ್ಠಾನದಲ್ಲಿ ತಾತ್ಸಾರ ತೋರುತ್ತಾರೆ ಎಂದು ಹೇಳಿದರು.</p>.<p>ಕನ್ನಡಪರ ಹೋರಾಟಗಾರರು ಹಾಗೂ ಜಿಲ್ಲಾಧಿಕಾರಿ ನಡುವೆ ಅಂತರ ಇರುವುದು, ಹೋರಾಟಗಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಸಭೆ ನಡೆದ ಸಮಯದಲ್ಲಿ ಕಂಡು ಬಂತು. ಜಿಲ್ಲಾಧಿಕಾರಿ ವಿರುದ್ಧ ಹೋರಾಟಗಾರರು ದೂರು ಸಲ್ಲಿಸಿದ್ದಾರೆ. ಈ ವಿಚಾರವನ್ನು ಜಿಲ್ಲಾಧಿಕಾರಿ ಗಮನಕ್ಕೆ ತಂದಿದ್ದು, ಸರಿಪಡಿಸಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ. ಕನ್ನಡದ ಪರವಾಗಿ ಹೋರಾಟ ನಡೆಸಿದವರ ಮೇಲೆ ದಾಖಲಾಗಿರುವ ದೂರಿನ ವಿವರಗಳನ್ನು ನೀಡುವಂತೆ ನಿರ್ದೇಶಿಸಲಾಗಿದೆ ಎಂದು ತಿಳಿಸಿದರು.</p>.<p>ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ಲ, ಸದಸ್ಯ ರವಿಕುಮಾರ್ ನೀಹ ಇತರರು ಉಪಸ್ಥಿತರಿದ್ದರು.</p>.<p><strong>ಬ್ಯಾಂಕ್ಗೆ ಕನ್ನಡ ಬಲ್ಲವರ ನೇಮಕ </strong></p><p>ರಾಷ್ಟ್ರೀಕೃತ ಬ್ಯಾಂಕ್ಗಳ ಎಲ್ಲ ಶಾಖೆಯಲ್ಲಿ ಕನ್ನಡ ಭಾಷೆ ಗೊತ್ತಿರುವ ಒಬ್ಬರನ್ನು ಕಡ್ಡಾಯವಾಗಿ ನೇಮಕ ಮಾಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದು ಪುರುಷೋತ್ತಮ ಬಿಳಿಮಲೆ ಹೇಳಿದರು. ಈ ಸಂಬಂಧ ಲೀಡ್ ಬ್ಯಾಂಕ್ (ಎಸ್ಬಿಐ) ಅಧಿಕಾರಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಇದು ಜಾರಿಗೆ ಬರಲಿದೆ. ಇದರಿಂದ ಬ್ಯಾಂಕ್ಗಳಲ್ಲಿ ನಡೆಯುವ ಸಂಘರ್ಷ ಕಡಿಮೆಯಾಗಲಿದೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>