<p><strong>ತುಮಕೂರು:</strong> ಪ್ರೀತಿ, ಶಾಂತಿ, ಸಹಬಾಳ್ವೆ ಮೂಲಕವೇ ಬದುಕು ಕಟ್ಟಿಕೊಳ್ಳಬೇಕು. ಆ ಮೂಲಕ ಸಹೋದರತೆಯನ್ನು ಪ್ರತಿಪಾದಿಸಬೇಕು ಎಂದು ಸಾಹಿತಿ ಸಿದ್ದಗಿರಿ ನಂಜುಂಡಸ್ವಾಮಿ ಅಭಿಪ್ರಾಯಪಟ್ಟರು.</p>.<p>ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಸೀರತ್ ಅಭಿಯಾನದ ಅಂಗವಾಗಿ ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ಏರ್ಪಡಿಸಿದ್ದ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ ವಿಜೇತರಿಗೆ ಭೀಮಸಂದ್ರದ ಗ್ಲೋಬಲ್ ಶಾಯಿನ್ ಬಾಲಕಿಯರ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಯಾವ ಧರ್ಮವೂ ಹಿಂಸೆ ಪ್ರತಿಪಾದಿಸಿಲ್ಲ. ನೀನು ಒಳ್ಳೆಯವನಾಗು, ಇತರರನ್ನು ಒಳ್ಳೆಯವರನ್ನಾಗಿ ಮಾಡು ಎಂದು ಪೈಗಂಬರ್ ಹೇಳಿದ್ದಾರೆ. ಅದನ್ನೇ ಇತರೆ ಧರ್ಮಗಳು ಹೇಳಿವೆ’ ಎಂದರು.</p>.<p>ಜ್ಞಾನಬುತ್ತಿ ಸತ್ಸಂಗ ಕೇಂದ್ರದ ಅಧ್ಯಕ್ಷ ಟಿ. ಮುರಳಿಕೃಷ್ಣಪ್ಪ, ‘ಕುಟುಂಬ, ಶಿಕ್ಷಣ, ಸಮಾಜ ಒಂದಕ್ಕೊಂದು ಪೂರಕವಾಗಿವೆ. ಈ ವ್ಯವಸ್ಥೆಯಲ್ಲಿ ಏನು ಕಲಿಯುತ್ತೇವೆ ಎಂಬುದು ಮುಖ್ಯವಾಗುತ್ತದೆ. ವಿದ್ಯಾರ್ಥಿಗಳು ಸತತ ಪರಿಶ್ರಮದಿಂದ ಅಧ್ಯಯನ ನಡೆಸಿ, ಪ್ರಾಮಾಣಿಕತೆ, ಆತ್ಮವಿಶ್ವಾಸ ಮೂಡಿಸಿಕೊಂಡರೆ ಗುರಿ ಮುಟ್ಟಲು ಸಾಧ್ಯವಿದೆ’ ಎಂದು ಸಲಹೆ ಮಾಡಿದರು.</p>.<p>ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮಹಮದ್ ಕುಂಇ, ‘ಆರೋಗ್ಯಪೂರ್ಣ ಸಮಾಜ ಕಾಣಬೇಕಾದರೆ ಆರೋಗ್ಯಪೂರ್ಣ ಮನಸ್ಸುಗಳು ಇರಬೇಕು. ಹಗೆತನ, ದ್ವೇಷ, ಅಸೂಯೆಗಳು ಎಂದಿಗೂ ಯಾರಿಗೂ ಒಳ್ಳೆಯದಲ್ಲ. ದುರಾದೃಷ್ಟವಶಾತ್ ಇಂತಹ ವಿಕೃತಿಗಳೇ ಸಮಾಜದಲ್ಲಿ ಹೆಚ್ಚು ಕಂಡುಬರುತ್ತವೆ’ ಎಂದು ವಿಷಾದಿಸಿದರು.</p>.<p>ವರದಕ್ಷಿಣೆ ವಿರೋಧಿ ವೇದಿಕೆ ಪ್ರಧಾನ ಕಾರ್ಯದರ್ಶಿ ಸಾ.ಚಿ. ರಾಜಕುಮಾರ, ‘ಯಾವ ಧರ್ಮ, ದೇವರು, ಮಹನೀಯರು ದ್ವೇಷ, ಅಸೂಯೆಗಳ ಬಗ್ಗೆ ಹೇಳಿಲ್ಲ. ಎಲ್ಲ ಕಡೆಯೂ ಪ್ರೀತಿ, ವಾತ್ಸಲ್ಯವನ್ನೇ ತೋರಿಸಿಕೊಟ್ಟಿದ್ದಾರೆ’ ಎಂದು ಹೇಳಿದರು.</p>.<p>ಶಾಹೀನ್ ಪಿಯು ಕಾಲೇಜು ಮುಖ್ಯಸ್ಥ ಅಪ್ಜಲ್ ಷರೀಫ್,ರಿಯಾಜ್ ರೌನ್, ಹನೀಫ್ ಉಲ್ಲಾ, ಶೇಖ್ ಜೈ ಉಲ್ಲಾ<br />ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಪ್ರೀತಿ, ಶಾಂತಿ, ಸಹಬಾಳ್ವೆ ಮೂಲಕವೇ ಬದುಕು ಕಟ್ಟಿಕೊಳ್ಳಬೇಕು. ಆ ಮೂಲಕ ಸಹೋದರತೆಯನ್ನು ಪ್ರತಿಪಾದಿಸಬೇಕು ಎಂದು ಸಾಹಿತಿ ಸಿದ್ದಗಿರಿ ನಂಜುಂಡಸ್ವಾಮಿ ಅಭಿಪ್ರಾಯಪಟ್ಟರು.</p>.<p>ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಸೀರತ್ ಅಭಿಯಾನದ ಅಂಗವಾಗಿ ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ಏರ್ಪಡಿಸಿದ್ದ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ ವಿಜೇತರಿಗೆ ಭೀಮಸಂದ್ರದ ಗ್ಲೋಬಲ್ ಶಾಯಿನ್ ಬಾಲಕಿಯರ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಬಹುಮಾನ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಯಾವ ಧರ್ಮವೂ ಹಿಂಸೆ ಪ್ರತಿಪಾದಿಸಿಲ್ಲ. ನೀನು ಒಳ್ಳೆಯವನಾಗು, ಇತರರನ್ನು ಒಳ್ಳೆಯವರನ್ನಾಗಿ ಮಾಡು ಎಂದು ಪೈಗಂಬರ್ ಹೇಳಿದ್ದಾರೆ. ಅದನ್ನೇ ಇತರೆ ಧರ್ಮಗಳು ಹೇಳಿವೆ’ ಎಂದರು.</p>.<p>ಜ್ಞಾನಬುತ್ತಿ ಸತ್ಸಂಗ ಕೇಂದ್ರದ ಅಧ್ಯಕ್ಷ ಟಿ. ಮುರಳಿಕೃಷ್ಣಪ್ಪ, ‘ಕುಟುಂಬ, ಶಿಕ್ಷಣ, ಸಮಾಜ ಒಂದಕ್ಕೊಂದು ಪೂರಕವಾಗಿವೆ. ಈ ವ್ಯವಸ್ಥೆಯಲ್ಲಿ ಏನು ಕಲಿಯುತ್ತೇವೆ ಎಂಬುದು ಮುಖ್ಯವಾಗುತ್ತದೆ. ವಿದ್ಯಾರ್ಥಿಗಳು ಸತತ ಪರಿಶ್ರಮದಿಂದ ಅಧ್ಯಯನ ನಡೆಸಿ, ಪ್ರಾಮಾಣಿಕತೆ, ಆತ್ಮವಿಶ್ವಾಸ ಮೂಡಿಸಿಕೊಂಡರೆ ಗುರಿ ಮುಟ್ಟಲು ಸಾಧ್ಯವಿದೆ’ ಎಂದು ಸಲಹೆ ಮಾಡಿದರು.</p>.<p>ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮಹಮದ್ ಕುಂಇ, ‘ಆರೋಗ್ಯಪೂರ್ಣ ಸಮಾಜ ಕಾಣಬೇಕಾದರೆ ಆರೋಗ್ಯಪೂರ್ಣ ಮನಸ್ಸುಗಳು ಇರಬೇಕು. ಹಗೆತನ, ದ್ವೇಷ, ಅಸೂಯೆಗಳು ಎಂದಿಗೂ ಯಾರಿಗೂ ಒಳ್ಳೆಯದಲ್ಲ. ದುರಾದೃಷ್ಟವಶಾತ್ ಇಂತಹ ವಿಕೃತಿಗಳೇ ಸಮಾಜದಲ್ಲಿ ಹೆಚ್ಚು ಕಂಡುಬರುತ್ತವೆ’ ಎಂದು ವಿಷಾದಿಸಿದರು.</p>.<p>ವರದಕ್ಷಿಣೆ ವಿರೋಧಿ ವೇದಿಕೆ ಪ್ರಧಾನ ಕಾರ್ಯದರ್ಶಿ ಸಾ.ಚಿ. ರಾಜಕುಮಾರ, ‘ಯಾವ ಧರ್ಮ, ದೇವರು, ಮಹನೀಯರು ದ್ವೇಷ, ಅಸೂಯೆಗಳ ಬಗ್ಗೆ ಹೇಳಿಲ್ಲ. ಎಲ್ಲ ಕಡೆಯೂ ಪ್ರೀತಿ, ವಾತ್ಸಲ್ಯವನ್ನೇ ತೋರಿಸಿಕೊಟ್ಟಿದ್ದಾರೆ’ ಎಂದು ಹೇಳಿದರು.</p>.<p>ಶಾಹೀನ್ ಪಿಯು ಕಾಲೇಜು ಮುಖ್ಯಸ್ಥ ಅಪ್ಜಲ್ ಷರೀಫ್,ರಿಯಾಜ್ ರೌನ್, ಹನೀಫ್ ಉಲ್ಲಾ, ಶೇಖ್ ಜೈ ಉಲ್ಲಾ<br />ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>