ಜ್ಞಾನಬುತ್ತಿ ಸತ್ಸಂಗ ಕೇಂದ್ರದ ಅಧ್ಯಕ್ಷ ಟಿ. ಮುರಳಿಕೃಷ್ಣಪ್ಪ, ‘ಕುಟುಂಬ, ಶಿಕ್ಷಣ, ಸಮಾಜ ಒಂದಕ್ಕೊಂದು ಪೂರಕವಾಗಿವೆ. ಈ ವ್ಯವಸ್ಥೆಯಲ್ಲಿ ಏನು ಕಲಿಯುತ್ತೇವೆ ಎಂಬುದು ಮುಖ್ಯವಾಗುತ್ತದೆ. ವಿದ್ಯಾರ್ಥಿಗಳು ಸತತ ಪರಿಶ್ರಮದಿಂದ ಅಧ್ಯಯನ ನಡೆಸಿ, ಪ್ರಾಮಾಣಿಕತೆ, ಆತ್ಮವಿಶ್ವಾಸ ಮೂಡಿಸಿಕೊಂಡರೆ ಗುರಿ ಮುಟ್ಟಲು ಸಾಧ್ಯವಿದೆ’ ಎಂದು ಸಲಹೆ ಮಾಡಿದರು.