<p><strong>ತುಮಕೂರು:</strong> ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್, ಮಾಜಿ ಉಪಪ್ರಧಾನಿ ಬಾಬು ಜಗಜೀವನ ರಾಂ ಜಯಂತಿ ಆಚರಿಸುವುದರಿಂದ ಪ್ರಗತಿ ಆಗುವುದಿಲ್ಲ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದಾಗ ಮಾತ್ರ ಪ್ರಗತಿ ಸಾಧ್ಯವಾಗಲಿದೆ ಎಂದು ಮಹಾನಗರ ಪಾಲಿಕೆ ಮೇಯರ್ ಬಿ.ಜಿ.ಕೃಷ್ಣಪ್ಪ ಅಭಿಪ್ರಾಯಪಟ್ಟರು.</p>.<p>ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆ, ಪರಿಶಿಷ್ಟ ಜಾತಿ, ಪಂಗಡ ಸರ್ಕಾರಿ ನೌಕರರ ಸಂಘದ ತುಮಕೂರು ಶಾಖೆ ವತಿಯಿಂದ ಭಾನುವಾರ ಆಯೋಜಿಸಿದ್ದ ಅಂಬೇಡ್ಕರ್, ಬಾಬು ಜಗಜೀವನ ರಾಂ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಅಂಬೇಡ್ಕರ್, ಜಗಜೀವನ ರಾಂ ಅವರನ್ನು ಏಪ್ರಿಲ್ ತಿಂಗಳಲ್ಲಿ ನೆನಪು ಮಾಡಿಕೊಳ್ಳುತ್ತೇವೆ. ಆದರೆ ಪ್ರತಿನಿತ್ಯ ಅವರನ್ನು ಪೂಜಿಸಬೇಕು. ದಲಿತರೆಂಬ ಕೀಳರಿಮೆ ಬಿಡಬೇಕು. ಮಹಾಭಾರತ, ರಾಮಾಯಣ ಬರೆದವರು ದಲಿತರೇ. ದೇಶಕ್ಕೆ ಸಂವಿಧಾನ ಕೊಟ್ಟಂತಹವರು ದಲಿತರೇ ಎಂದು ನೆನಪು ಮಾಡಿಕೊಂಡರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಚ್.ಆರ್.ರಾಜಶೇಖರ್, ‘ಇತಿಹಾಸದ ಪುಟಗಳನ್ನು ತೆರೆದು ನೋಡಿ, ಪಟ್ಟಭದ್ರ ಹಿತಾಸಕ್ತಿಗಳ ಕೈಯಲ್ಲಿ ತನ್ನ ಜೀವನ ಹೇಗೆ ನಲುಗಿತು ಎಂಬುದನ್ನು ಅಂಬೇಡ್ಕರ್ ಅರಿತುಕೊಂಡರು. ನೋವುಂಡು ಸಂವಿಧಾನ ರಚಿಸಿಕೊಟ್ಟರು’ ಎಂದು ಸ್ಮರಿಸಿದರು.</p>.<p>ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸರ್ಕಾರಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಡಾ.ವೈ.ಕೆ.ಬಾಲಕೃಷ್ಣ, ‘ಶೋಷಿತ ಸಮುದಾಯಗಳ ಪರವಾಗಿ ಅಂಬೇಡ್ಕರ್ ಹೋರಾಟ ಮಾಡಿದರು’ ಎಂದರು.</p>.<p>ಸಂಘದ ಬೆಂಗಳೂರು ಘಟಕದ ಅಧ್ಯಕ್ಷ ಎ.ಟಿ.ಮಂಜುನಾಥ್, ನಿಕಟ ಪೂರ್ವ ಅಧ್ಯಕ್ಷ ಆರ್.ವೆಂಕಟಪ್ಪ, ಡಾ.ಎಚ್.ವಿ.ರಂಗಸ್ವಾಮಿ, ಆಡಳಿತಾಧಿಕಾರಿ ಕೆ.ಎಚ್.ಭೂತರಂಗಪ್ಪ, ಡಾ.ಎಸ್.ರುದ್ರಮೂರ್ತಿ, ರಂಗನಾಥ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್, ಮಾಜಿ ಉಪಪ್ರಧಾನಿ ಬಾಬು ಜಗಜೀವನ ರಾಂ ಜಯಂತಿ ಆಚರಿಸುವುದರಿಂದ ಪ್ರಗತಿ ಆಗುವುದಿಲ್ಲ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದಾಗ ಮಾತ್ರ ಪ್ರಗತಿ ಸಾಧ್ಯವಾಗಲಿದೆ ಎಂದು ಮಹಾನಗರ ಪಾಲಿಕೆ ಮೇಯರ್ ಬಿ.ಜಿ.ಕೃಷ್ಣಪ್ಪ ಅಭಿಪ್ರಾಯಪಟ್ಟರು.</p>.<p>ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆ, ಪರಿಶಿಷ್ಟ ಜಾತಿ, ಪಂಗಡ ಸರ್ಕಾರಿ ನೌಕರರ ಸಂಘದ ತುಮಕೂರು ಶಾಖೆ ವತಿಯಿಂದ ಭಾನುವಾರ ಆಯೋಜಿಸಿದ್ದ ಅಂಬೇಡ್ಕರ್, ಬಾಬು ಜಗಜೀವನ ರಾಂ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಅಂಬೇಡ್ಕರ್, ಜಗಜೀವನ ರಾಂ ಅವರನ್ನು ಏಪ್ರಿಲ್ ತಿಂಗಳಲ್ಲಿ ನೆನಪು ಮಾಡಿಕೊಳ್ಳುತ್ತೇವೆ. ಆದರೆ ಪ್ರತಿನಿತ್ಯ ಅವರನ್ನು ಪೂಜಿಸಬೇಕು. ದಲಿತರೆಂಬ ಕೀಳರಿಮೆ ಬಿಡಬೇಕು. ಮಹಾಭಾರತ, ರಾಮಾಯಣ ಬರೆದವರು ದಲಿತರೇ. ದೇಶಕ್ಕೆ ಸಂವಿಧಾನ ಕೊಟ್ಟಂತಹವರು ದಲಿತರೇ ಎಂದು ನೆನಪು ಮಾಡಿಕೊಂಡರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಚ್.ಆರ್.ರಾಜಶೇಖರ್, ‘ಇತಿಹಾಸದ ಪುಟಗಳನ್ನು ತೆರೆದು ನೋಡಿ, ಪಟ್ಟಭದ್ರ ಹಿತಾಸಕ್ತಿಗಳ ಕೈಯಲ್ಲಿ ತನ್ನ ಜೀವನ ಹೇಗೆ ನಲುಗಿತು ಎಂಬುದನ್ನು ಅಂಬೇಡ್ಕರ್ ಅರಿತುಕೊಂಡರು. ನೋವುಂಡು ಸಂವಿಧಾನ ರಚಿಸಿಕೊಟ್ಟರು’ ಎಂದು ಸ್ಮರಿಸಿದರು.</p>.<p>ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸರ್ಕಾರಿ ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಡಾ.ವೈ.ಕೆ.ಬಾಲಕೃಷ್ಣ, ‘ಶೋಷಿತ ಸಮುದಾಯಗಳ ಪರವಾಗಿ ಅಂಬೇಡ್ಕರ್ ಹೋರಾಟ ಮಾಡಿದರು’ ಎಂದರು.</p>.<p>ಸಂಘದ ಬೆಂಗಳೂರು ಘಟಕದ ಅಧ್ಯಕ್ಷ ಎ.ಟಿ.ಮಂಜುನಾಥ್, ನಿಕಟ ಪೂರ್ವ ಅಧ್ಯಕ್ಷ ಆರ್.ವೆಂಕಟಪ್ಪ, ಡಾ.ಎಚ್.ವಿ.ರಂಗಸ್ವಾಮಿ, ಆಡಳಿತಾಧಿಕಾರಿ ಕೆ.ಎಚ್.ಭೂತರಂಗಪ್ಪ, ಡಾ.ಎಸ್.ರುದ್ರಮೂರ್ತಿ, ರಂಗನಾಥ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>