<p><strong>ಚಿಕ್ಕನಾಯಕನಹಳ್ಳಿ</strong>: ಪಟ್ಟಣದ ಮೇಲನಹಳ್ಳಿ ಮೊರಾರ್ಜಿ ವಸತಿ ಶಾಲೆಗೆ ಅಗತ್ಯ ಸೌಲಭ್ಯ ನೀಡಲು ಕಳೆದ ವರ್ಷವೇ ₹1 ಕೋಟಿ ಮಂಜೂರು ಮಾಡಿಸಿದ್ದರೂ ಸರ್ಕಾರ ಸರಿಯಾದ ಟೆಂಡರ್ ಕರೆದು ಏಜೆನ್ಸಿಗಳನ್ನು ನೇಮಕ ಮಾಡದ ಕಾರಣ ಅಭಿವೃದ್ಧಿ ಸಾಧ್ಯವಾಗಲಿಲ್ಲ. ಈ ವರ್ಷ ಆ ಅನುದಾನದಲ್ಲಿ ಎಲ್ಲ ಅಭಿವೃದ್ಧಿ ಕೆಲಸ ಮಾಡಿಸುತ್ತೇನೆ ಎಂದು ಶಾಸಕ ಸಿ.ಬಿ.ಸುರೇಶ್ಬಾಬು ಭರವಸೆ ನೀಡಿದರು.</p>.<p>ಪಟ್ಟಣದ ಮೇಲನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುರುವಾರ ನಡೆದ ಪ್ರಥಮ ಪೋಷಕರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>‘ನಾನು ಹಾಸ್ಟೇಲ್ನಲ್ಲೇ ವ್ಯಾಸಾಂಗ ಮಾಡಿದ್ದು, ನನಗೆ ಹಾಸ್ಟೆಲ್ನ ವಿದ್ಯಾರ್ಥಿಗಳ ಮನಸ್ಸು ಯಾವ ರೀತಿ ಇರುತ್ತದೆ ಅಲ್ಲಿನ ಸಮಸ್ಯೆಗಳು ಏನು ಎಂಬುದರ ಅರಿವಿದೆ. 2011ರಲ್ಲಿ ಪ್ರಾರಂಭವಾದ ಈ ವಸತಿ ಶಾಲೆ ಈವರೆಗೆ ಎಸ್ಎಸ್ಎಲ್ಸಿಯಲ್ಲಿ ನೂರಕ್ಕೆ ನೂರು ಪಲಿತಾಂಶ ನೀಡುತ್ತಿದೆ. ಶಾಲೆಗೆ ಅಗತ್ಯ ಸೌಲಭ್ಯ ನೀಡಲಾಗುವುದು’ ಎಂದರು. </p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು ಮಾತನಾಡಿ, ಉತ್ತಮ ವಾತಾವರಣ ಇರುವ ಈ ಮೊರಾರ್ಜಿ ವಸತಿ ಶಾಲೆ ಎಸ್ಎಸ್ಎಲ್ಸಿಯಲ್ಲಿ ಪ್ರಥಮ ಸ್ಥಾನ ನೀಡಿದೆ. ದಾಖಲಾತಿಯೂ ಹೆಚ್ಚುತ್ತಿದೆ. ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚಿನ ಗಮನಹರಿಸಿ ಅವರ ಸಮಸ್ಯೆಗಳನ್ನು ತಿಳಿದು ಸ್ಪಂದಿಸಬೇಕು ಎಂದು ಹೇಳಿದರು.</p>.<p>ಎಸ್ಎಸ್ಎಲ್ಸಿಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.</p>.<p>ಪ್ರಾಂಶುಪಾಲ ಸತೀಶ್ ಸೇರಿದಂತೆ ಭೋದಕ ಹಾಗೂ ಬೋಧಕೇತರ ಸಿಬ್ಬಂದಿ, ಪೋಷಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕನಾಯಕನಹಳ್ಳಿ</strong>: ಪಟ್ಟಣದ ಮೇಲನಹಳ್ಳಿ ಮೊರಾರ್ಜಿ ವಸತಿ ಶಾಲೆಗೆ ಅಗತ್ಯ ಸೌಲಭ್ಯ ನೀಡಲು ಕಳೆದ ವರ್ಷವೇ ₹1 ಕೋಟಿ ಮಂಜೂರು ಮಾಡಿಸಿದ್ದರೂ ಸರ್ಕಾರ ಸರಿಯಾದ ಟೆಂಡರ್ ಕರೆದು ಏಜೆನ್ಸಿಗಳನ್ನು ನೇಮಕ ಮಾಡದ ಕಾರಣ ಅಭಿವೃದ್ಧಿ ಸಾಧ್ಯವಾಗಲಿಲ್ಲ. ಈ ವರ್ಷ ಆ ಅನುದಾನದಲ್ಲಿ ಎಲ್ಲ ಅಭಿವೃದ್ಧಿ ಕೆಲಸ ಮಾಡಿಸುತ್ತೇನೆ ಎಂದು ಶಾಸಕ ಸಿ.ಬಿ.ಸುರೇಶ್ಬಾಬು ಭರವಸೆ ನೀಡಿದರು.</p>.<p>ಪಟ್ಟಣದ ಮೇಲನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುರುವಾರ ನಡೆದ ಪ್ರಥಮ ಪೋಷಕರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>‘ನಾನು ಹಾಸ್ಟೇಲ್ನಲ್ಲೇ ವ್ಯಾಸಾಂಗ ಮಾಡಿದ್ದು, ನನಗೆ ಹಾಸ್ಟೆಲ್ನ ವಿದ್ಯಾರ್ಥಿಗಳ ಮನಸ್ಸು ಯಾವ ರೀತಿ ಇರುತ್ತದೆ ಅಲ್ಲಿನ ಸಮಸ್ಯೆಗಳು ಏನು ಎಂಬುದರ ಅರಿವಿದೆ. 2011ರಲ್ಲಿ ಪ್ರಾರಂಭವಾದ ಈ ವಸತಿ ಶಾಲೆ ಈವರೆಗೆ ಎಸ್ಎಸ್ಎಲ್ಸಿಯಲ್ಲಿ ನೂರಕ್ಕೆ ನೂರು ಪಲಿತಾಂಶ ನೀಡುತ್ತಿದೆ. ಶಾಲೆಗೆ ಅಗತ್ಯ ಸೌಲಭ್ಯ ನೀಡಲಾಗುವುದು’ ಎಂದರು. </p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು ಮಾತನಾಡಿ, ಉತ್ತಮ ವಾತಾವರಣ ಇರುವ ಈ ಮೊರಾರ್ಜಿ ವಸತಿ ಶಾಲೆ ಎಸ್ಎಸ್ಎಲ್ಸಿಯಲ್ಲಿ ಪ್ರಥಮ ಸ್ಥಾನ ನೀಡಿದೆ. ದಾಖಲಾತಿಯೂ ಹೆಚ್ಚುತ್ತಿದೆ. ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚಿನ ಗಮನಹರಿಸಿ ಅವರ ಸಮಸ್ಯೆಗಳನ್ನು ತಿಳಿದು ಸ್ಪಂದಿಸಬೇಕು ಎಂದು ಹೇಳಿದರು.</p>.<p>ಎಸ್ಎಸ್ಎಲ್ಸಿಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.</p>.<p>ಪ್ರಾಂಶುಪಾಲ ಸತೀಶ್ ಸೇರಿದಂತೆ ಭೋದಕ ಹಾಗೂ ಬೋಧಕೇತರ ಸಿಬ್ಬಂದಿ, ಪೋಷಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>