<p><strong>ತುಮಕೂರು: </strong>ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುವ ತುಮಕೂರು ವಿಶ್ವವಿದ್ಯಾನಿಲಯ ಇದೀಗ ಬೋಧಕೇತರ ನೌಕರರಿಗೆ ಮುಂಬಡ್ತಿ ನೀಡುವ ವಿಚಾರದಲ್ಲಿ ಮತ್ತೊಮ್ಮೆ ಸುದ್ದಿಯಾಗಿದೆ.</p>.<p>ವಿ.ವಿ.ಯ ಅವಕಾಶ ವಂಚಿತ ನೌಕರರು ತಮಗೆ ಮುಂಬಡ್ತಿ ನೀಡುವಲ್ಲಿ ವಿಶ್ವವಿದ್ಯಾನಿಲಯ ಅನ್ಯಾಯ ಮಾಡಿದೆ. ಹಾಗಾಗಿ ತಮಗೆ ನ್ಯಾಯ ದೊರಕಿಸಿಕೊಡುವಂತೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅಲ್ಲದೆ, ಹೈಕೋರ್ಟ್ ಸಹ ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡುವಂತೆ ವಿ.ವಿ.ಗೆ ಸೂಚಿಸಿದೆ.</p>.<p>ಈ ನಡುವೆ ಶುಕ್ರವಾರ ನಡೆದ ಸಿಂಡಿಕೇಟ್ ಸಭೆಯಲ್ಲಿ ಮುಂಬಡ್ತಿ ನೀಡಲು ಅನುಮತಿಯನ್ನು ಪಡೆಯಲಾಗಿದೆ. ವಿಶ್ವವಿದ್ಯಾನಿಲಯದ ಈ ನಡೆ ಅವಕಾಶ ವಂಚಿತ ನೌಕರರನ್ನು ಮತ್ತಷ್ಟು ಕೆರಳಿಸಿದೆ.</p>.<p>ಮುಂಬಡ್ತಿ ವಂಚಿತರ ಆರೋಪವೇನು?: ಸರ್ಕಾರದ ಜೇಷ್ಠತಾ ನಿಯಮಗಳ ಪ್ರಕಾರ ವಿಶ್ವವಿದ್ಯಾನಿಲಯ ಪ್ರತಿ ವರ್ಷವೂ ಜೇಷ್ಠತಾ ಪಟ್ಟಿ ಪ್ರಕಟಿಸಬೇಕು. ಈ ಪಟ್ಟಿ ಪ್ರಕಟಿಸುವ ಸಂದರ್ಭದಲ್ಲಿ ಅಧಿಕೃತವಾಗಿ ಆಕ್ಷೇಪಣೆಗಳನ್ನು ಆಹ್ವಾನಿಸಬೇಕಾಗಿತ್ತು. ಆದರೆ, ವಿಶ್ವವಿದ್ಯಾನಿಲಯ ಈವರೆಗೂ ಆಕ್ಷೇಪಣೆಗೆ ಅವಕಾಶ ನೀಡಿಲ್ಲ. ಹಾಗಾಗಿ ಈ ಪ್ರಕ್ರಿಯೆ ಕಾನೂನು ಮತ್ತು ನಿಯಮಗಳಿಗೆ ವಿರುದ್ಧವಾಗಿವೆ ಎಂದು ಮುಂಬಡ್ತಿ ವಂಚಿತ ಸಿಬ್ಬಂದಿ ಆರೋಪಿಸಿದ್ದಾರೆ.</p>.<p><strong>ಪ್ರಕ್ರಿಯೆ ಸ್ಥಗಿತಗೊಳಿಸಿ:</strong> ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವಾಗ ಈ ಪ್ರಕ್ರಿಯೆ ನಡೆಸಿರುವುದು ಸರಿಯಲ್ಲ. ಹಾಗಾಗಿ ನ್ಯಾಯಾಲಯದಲ್ಲಿ ದಾಖಲಿಸಿರುವ ಮೊಕದ್ದಮೆಗಳು ಇತ್ಯರ್ಥವಾಗುವವರೆಗೂ ಮುಂಬಡ್ತಿ ಪ್ರಕ್ರಿಯೆ ಸ್ಥಗಿತಗೊಳಿಸಬೇಕು ಎಂದು ಅವಕಾಶ ವಂಚಿತರು ಒತ್ತಾಯಿಸಿದ್ದಾರೆ.</p>.<p><strong>ಕುಲಪತಿ ಹೇಳುವುದೇನು?</strong><br />ನ್ಯಾಯಾಲಯದ ಮೊರೆ ಹೋಗಿರುವವರು ಮುಂಬಡ್ತಿಗೆ ಅರ್ಹತೆಯನ್ನೇ ಹೊಂದಿಲ್ಲ. ಜತೆಗೆ ಮುಂಬಡ್ತಿಗಾಗಿ ನಡೆಯುವ ಪರೀಕ್ಷೆ ಬರೆಯುವುದಕ್ಕೂ ಇವರಿಗೆ ಅವಕಾಶ ಇರಲಿಲ್ಲ ಎಂದುಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ಸ್ಪಷ್ಟಪಡಿಸಿದರು.</p>.<p>‘ಇನ್ನೊಬ್ಬರಿಗೆ ತೊಂದರೆ ನೀಡುವ ಸಲುವಾಗಿ ಕೋರ್ಟ್ ಮೊರೆ ಹೋಗಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸ್ಪಷ್ಟೀಕರಣ ನೀಡಿದೆಯೇ ಹೊರತು, ಮುಂಬಡ್ತಿಗೆ ತಡೆ ನೀಡಿಲ್ಲ. ಹಾಗಾಗಿ ರಾಜ್ಯಪಾಲರು ಅನಮೋದಿಸಿರುವ ಮುಂಬಡ್ತಿ ಪ್ರಕ್ರಿಯೆಯನ್ನು ಮುಂದುವರಿಸಿದ್ದೇವೆ. ಪರೀಕ್ಷೆ ಬರೆದು ಉತ್ತೀರ್ಣರಾದವರನ್ನು ರೋಸ್ಟರ್ ಮಾದರಿಯಲ್ಲಿ ಪರಿಗಣಿಸಿದ್ದೇವೆ’ ಎಂದು ಹೇಳಿದರು.</p>.<p>‘ನ್ಯಾಯಾಲಯ ಮುಂಬಡ್ತಿ ಪ್ರಕ್ರಿಯೆಗೆ ತಡೆ ನೀಡಿದ್ದರೆ ಸಿಂಡಿಕೇಟ್ ಸಭೆಯ ಗಮನಕ್ಕೆ ತರುತ್ತಿದ್ದೆವು. ಆದರೆ, ನ್ಯಾಯಾಲಯ ಸ್ಪಷ್ಟೀಕರಣ ಕೇಳುವುದು ಸಾಮಾನ್ಯದ ಸಂಗತಿ. ಹಾಗಾಗಿ ಆಡಳಿತಾತ್ಮಕ ವಿಚಾರವನ್ನು ಗಮನಕ್ಕೆ ತರುವ ಅಗತ್ಯವಿಲ್ಲ’ ಎಂದರು.</p>.<p><strong>ಸಿಂಡಿಕೇಟ್ ಸದಸ್ಯರ ಗಮನಕ್ಕೂ ಇಲ್ಲ</strong><br />‘ಮುಂಬಡ್ತಿ ವಿಚಾರದಲ್ಲಿ ಅವಕಾಶ ವಂಚಿತರು ನ್ಯಾಯಾಲಯದ ಮೊರೆ ಹೋಗಿರುವ ವಿಚಾರ ಹಾಗೂ ನ್ಯಾಯಾಲಯ ಈ ಬಗ್ಗೆ ಸ್ಪಷ್ಟೀಕರಣ ಕೋರಿರುವ ಬಗ್ಗೆ ನಮ್ಮ ಗಮನದಲ್ಲಿ ಇರಲಿಲ್ಲ. ಕುಲಪತಿ, ಕುಲಸಚಿವರು ಈ ವಿಷಯವನ್ನು ತಮಗೆ ತಿಳಿಸಿದೆ ಜುಲೈ 17ರಂದು ನಡೆದ ಸಿಂಡಿಕೇಟ್ ಸಭೆಯಲ್ಲಿ ಅನುಮತಿ ಪಡೆದಿದ್ದಾರೆ’ ಎಂದು ಕೆಲವು ಸಿಂಡಿಕೇಟ್ ಸದಸ್ಯರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುವ ತುಮಕೂರು ವಿಶ್ವವಿದ್ಯಾನಿಲಯ ಇದೀಗ ಬೋಧಕೇತರ ನೌಕರರಿಗೆ ಮುಂಬಡ್ತಿ ನೀಡುವ ವಿಚಾರದಲ್ಲಿ ಮತ್ತೊಮ್ಮೆ ಸುದ್ದಿಯಾಗಿದೆ.</p>.<p>ವಿ.ವಿ.ಯ ಅವಕಾಶ ವಂಚಿತ ನೌಕರರು ತಮಗೆ ಮುಂಬಡ್ತಿ ನೀಡುವಲ್ಲಿ ವಿಶ್ವವಿದ್ಯಾನಿಲಯ ಅನ್ಯಾಯ ಮಾಡಿದೆ. ಹಾಗಾಗಿ ತಮಗೆ ನ್ಯಾಯ ದೊರಕಿಸಿಕೊಡುವಂತೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅಲ್ಲದೆ, ಹೈಕೋರ್ಟ್ ಸಹ ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡುವಂತೆ ವಿ.ವಿ.ಗೆ ಸೂಚಿಸಿದೆ.</p>.<p>ಈ ನಡುವೆ ಶುಕ್ರವಾರ ನಡೆದ ಸಿಂಡಿಕೇಟ್ ಸಭೆಯಲ್ಲಿ ಮುಂಬಡ್ತಿ ನೀಡಲು ಅನುಮತಿಯನ್ನು ಪಡೆಯಲಾಗಿದೆ. ವಿಶ್ವವಿದ್ಯಾನಿಲಯದ ಈ ನಡೆ ಅವಕಾಶ ವಂಚಿತ ನೌಕರರನ್ನು ಮತ್ತಷ್ಟು ಕೆರಳಿಸಿದೆ.</p>.<p>ಮುಂಬಡ್ತಿ ವಂಚಿತರ ಆರೋಪವೇನು?: ಸರ್ಕಾರದ ಜೇಷ್ಠತಾ ನಿಯಮಗಳ ಪ್ರಕಾರ ವಿಶ್ವವಿದ್ಯಾನಿಲಯ ಪ್ರತಿ ವರ್ಷವೂ ಜೇಷ್ಠತಾ ಪಟ್ಟಿ ಪ್ರಕಟಿಸಬೇಕು. ಈ ಪಟ್ಟಿ ಪ್ರಕಟಿಸುವ ಸಂದರ್ಭದಲ್ಲಿ ಅಧಿಕೃತವಾಗಿ ಆಕ್ಷೇಪಣೆಗಳನ್ನು ಆಹ್ವಾನಿಸಬೇಕಾಗಿತ್ತು. ಆದರೆ, ವಿಶ್ವವಿದ್ಯಾನಿಲಯ ಈವರೆಗೂ ಆಕ್ಷೇಪಣೆಗೆ ಅವಕಾಶ ನೀಡಿಲ್ಲ. ಹಾಗಾಗಿ ಈ ಪ್ರಕ್ರಿಯೆ ಕಾನೂನು ಮತ್ತು ನಿಯಮಗಳಿಗೆ ವಿರುದ್ಧವಾಗಿವೆ ಎಂದು ಮುಂಬಡ್ತಿ ವಂಚಿತ ಸಿಬ್ಬಂದಿ ಆರೋಪಿಸಿದ್ದಾರೆ.</p>.<p><strong>ಪ್ರಕ್ರಿಯೆ ಸ್ಥಗಿತಗೊಳಿಸಿ:</strong> ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವಾಗ ಈ ಪ್ರಕ್ರಿಯೆ ನಡೆಸಿರುವುದು ಸರಿಯಲ್ಲ. ಹಾಗಾಗಿ ನ್ಯಾಯಾಲಯದಲ್ಲಿ ದಾಖಲಿಸಿರುವ ಮೊಕದ್ದಮೆಗಳು ಇತ್ಯರ್ಥವಾಗುವವರೆಗೂ ಮುಂಬಡ್ತಿ ಪ್ರಕ್ರಿಯೆ ಸ್ಥಗಿತಗೊಳಿಸಬೇಕು ಎಂದು ಅವಕಾಶ ವಂಚಿತರು ಒತ್ತಾಯಿಸಿದ್ದಾರೆ.</p>.<p><strong>ಕುಲಪತಿ ಹೇಳುವುದೇನು?</strong><br />ನ್ಯಾಯಾಲಯದ ಮೊರೆ ಹೋಗಿರುವವರು ಮುಂಬಡ್ತಿಗೆ ಅರ್ಹತೆಯನ್ನೇ ಹೊಂದಿಲ್ಲ. ಜತೆಗೆ ಮುಂಬಡ್ತಿಗಾಗಿ ನಡೆಯುವ ಪರೀಕ್ಷೆ ಬರೆಯುವುದಕ್ಕೂ ಇವರಿಗೆ ಅವಕಾಶ ಇರಲಿಲ್ಲ ಎಂದುಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ಸ್ಪಷ್ಟಪಡಿಸಿದರು.</p>.<p>‘ಇನ್ನೊಬ್ಬರಿಗೆ ತೊಂದರೆ ನೀಡುವ ಸಲುವಾಗಿ ಕೋರ್ಟ್ ಮೊರೆ ಹೋಗಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸ್ಪಷ್ಟೀಕರಣ ನೀಡಿದೆಯೇ ಹೊರತು, ಮುಂಬಡ್ತಿಗೆ ತಡೆ ನೀಡಿಲ್ಲ. ಹಾಗಾಗಿ ರಾಜ್ಯಪಾಲರು ಅನಮೋದಿಸಿರುವ ಮುಂಬಡ್ತಿ ಪ್ರಕ್ರಿಯೆಯನ್ನು ಮುಂದುವರಿಸಿದ್ದೇವೆ. ಪರೀಕ್ಷೆ ಬರೆದು ಉತ್ತೀರ್ಣರಾದವರನ್ನು ರೋಸ್ಟರ್ ಮಾದರಿಯಲ್ಲಿ ಪರಿಗಣಿಸಿದ್ದೇವೆ’ ಎಂದು ಹೇಳಿದರು.</p>.<p>‘ನ್ಯಾಯಾಲಯ ಮುಂಬಡ್ತಿ ಪ್ರಕ್ರಿಯೆಗೆ ತಡೆ ನೀಡಿದ್ದರೆ ಸಿಂಡಿಕೇಟ್ ಸಭೆಯ ಗಮನಕ್ಕೆ ತರುತ್ತಿದ್ದೆವು. ಆದರೆ, ನ್ಯಾಯಾಲಯ ಸ್ಪಷ್ಟೀಕರಣ ಕೇಳುವುದು ಸಾಮಾನ್ಯದ ಸಂಗತಿ. ಹಾಗಾಗಿ ಆಡಳಿತಾತ್ಮಕ ವಿಚಾರವನ್ನು ಗಮನಕ್ಕೆ ತರುವ ಅಗತ್ಯವಿಲ್ಲ’ ಎಂದರು.</p>.<p><strong>ಸಿಂಡಿಕೇಟ್ ಸದಸ್ಯರ ಗಮನಕ್ಕೂ ಇಲ್ಲ</strong><br />‘ಮುಂಬಡ್ತಿ ವಿಚಾರದಲ್ಲಿ ಅವಕಾಶ ವಂಚಿತರು ನ್ಯಾಯಾಲಯದ ಮೊರೆ ಹೋಗಿರುವ ವಿಚಾರ ಹಾಗೂ ನ್ಯಾಯಾಲಯ ಈ ಬಗ್ಗೆ ಸ್ಪಷ್ಟೀಕರಣ ಕೋರಿರುವ ಬಗ್ಗೆ ನಮ್ಮ ಗಮನದಲ್ಲಿ ಇರಲಿಲ್ಲ. ಕುಲಪತಿ, ಕುಲಸಚಿವರು ಈ ವಿಷಯವನ್ನು ತಮಗೆ ತಿಳಿಸಿದೆ ಜುಲೈ 17ರಂದು ನಡೆದ ಸಿಂಡಿಕೇಟ್ ಸಭೆಯಲ್ಲಿ ಅನುಮತಿ ಪಡೆದಿದ್ದಾರೆ’ ಎಂದು ಕೆಲವು ಸಿಂಡಿಕೇಟ್ ಸದಸ್ಯರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>