ಎಐಕೆಕೆಎಂಎಸ್ ರಾಜ್ಯ ಸಮಿತಿ ಸದಸ್ಯ ಎಚ್.ಪಿ.ಶಿವಪ್ರಕಾಶ್ ಮಾತ ನಾಡಿ, ‘ಬಹುರಾಷ್ಟ್ರೀಯ ಕಂಪನಿಗಳಿಗೆ ಭಾರತದ ಮಾರುಕಟ್ಟೆ ತೆರೆದಿಟ್ಟು, ದೇಶದ ಸಂಪನ್ಮೂಲ ಲೂಟಿ ಮಾಡಲು ಕಾಂಗ್ರೆಸ್ ಸರ್ಕಾರ ಅವಕಾಶ ನೀಡಿತ್ತು. ಇದೀಗ ಬಿಜೆಪಿ ಸರ್ಕಾರ ಜನ ಸಾಮಾನ್ಯರನ್ನು ನಿರ್ಗತಿಕರನ್ನಾಗಿ ಮಾಡಿ, ಕಾರ್ಪೊರೇಟ್ ಸಂಸ್ಥೆಗಳಿಗೆ ನೆರವು ನೀಡುತ್ತಿದೆ’ ಎಂದರು.