ಕೃಷ್ಣಪ್ಪ(65) ಹಲ್ಲೆ ಮಾಡಿದ ತಂದೆ. ಆಸ್ತಿ ವಿಚಾರವಾಗಿ ಇಬ್ಬರ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಅದೇ ಕಾರಣಕ್ಕೆ ಬುಧವಾರ ಬೆಳಿಗ್ಗೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಕೃಷ್ಣಪ್ಪ ಮಗ ಲಕ್ಷ್ಮಿಕಾಂತರಾಜುಗೆ ಗುದ್ದಲಿ ಕಾವಿನಿಂದ ತಲೆಗೆ ಹೊಡೆದಿದ್ದಾರೆ. ಬಲವಾಗಿ ತಲೆಗೆ ಪೆಟ್ಟು ಬಿದ್ದ ಪರಿಣಾಮ ಸ್ಥಳದಲ್ಲಿಯೇ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಮೆದುಳು ನಿಷ್ಕ್ರಿಯಗೊಂಡಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದಾರೆಂದು ವೈದ್ಯರು ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಕೃಷ್ಣಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳಕ್ಕೆ ಸಿಪಿಐ ಕೆ. ಸುರೇಶ್, ಪಿಎಸ್ಐ ಜಿ. ಚೇತನ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.