ಏಕಪಕ್ಷೀಯ ನಿರ್ಧಾರ
ಕೊರೊನಾ ಸೋಂಕು ನಿವಾರಣೆಗೆ ಶ್ರಮಿಸಬೇಕಿದ್ದ ಸರ್ಕಾರಗಳು ಜನವಿರೋಧಿ ಕಾರ್ಯದಲ್ಲಿ ನಿರತವಾಗಿವೆ. ಎಪಿಎಂಸಿ, ಭೂಸುಧಾರಣೆ, ಅಗತ್ಯಸೇವೆ, ವಿದ್ಯುತ್, ಕಾರ್ಮಿಕ ಕಾಯ್ದೆ ತಿದ್ದುಪಡಿಗೆ ಹೊರಟಿದ್ದು ಯಾರ ಹಿತಕಾಯಲು? ಕಾಯ್ದೆಗಳ ತಿದ್ದುಪಡಿ ಬಗ್ಗೆ ಸಂಸತ್ತು, ವಿಧಾನಸಭೆಯಲ್ಲಿ ಚರ್ಚಿಸದೆ ಏಕಪಕ್ಷೀಯವಾಗಿ ಹೇರಿಕೆ ಮಾಡುತ್ತಿದೆ ಎಂದು ಸೈಯದ್ ಮುಜೀಬ್ ಟೀಕಿಸಿದರು.