ಕೊಡಿಗೇನಹಳ್ಳಿ: ಹೋಬಳಿಯ ಕಡಗತ್ತೂರು ಗ್ರಾಮದಲ್ಲಿರುವ ಎಸ್ಬಿಐ ಬ್ಯಾಂಕ್ ಸಿಬ್ಬಂದಿ ಗ್ರಾಹಕರ ಸಮಸ್ಯೆ ಗಳಿಗೆ ಸರಿಯಾಗಿ ಸ್ಪಂದಿಸದೆ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಹಕರು ಪ್ರತಿಭಟನೆ ನಡೆಸಿದರು.
ಆರು ತಿಂಗಳಿಂದ ಪಾಸ್ ಬುಕ್ ಎಂಟ್ರಿ ಮಾಡಿಕೊಡುತ್ತಿಲ್ಲ. ಕೃಷಿ ಸಾಲ, ಬಂಗಾರದ ಮೇಲೆ ಸಾಲ ನೀಡಲು ಸತಾಯಿಸುತ್ತಾರೆ. ಪಿಂಚಣಿ ಹಣ ಪರಿಶೀಲಿಸಿ, ಎಂಟ್ರಿ ಮಾಡಿಕೊಡಲು ತಾಂತ್ರಿಕ ನೆಪವೊಡ್ಡುತ್ತಾರೆ ಎಂದು ಗ್ರಾಹಕರು ಆರೋಪಿಸಿದರು.
‘ಬ್ಯಾಂಕ್ನಲ್ಲಿ ಸಿಬ್ಬಂದಿ ಕೊರತೆ ಇದೆ. ಆದರೂ ಗ್ರಾಹಕರಿಗೆ ತೊಂದರೆಯಾಗಬಾರದೆಂಬ ಕಾರಣಕ್ಕೆ ಪಾಸ್ಬುಕ್, ಪಿಂಚಣಿ ಹಣ ಎಂಟ್ರಿ ಮಾಡುವುದನ್ನು ಹೊರತುಪಡಿಸಿ ಉಳಿದೆಲ್ಲಾ ಕೆಲಸಗಳನ್ನು ನಾವೇ ಮಾಡುತ್ತಿದ್ದೇವೆ’ ಎಂದು ಎಸ್ಬಿಐ ಕಡಗತ್ತೂರು ಶಾಖೆ ವ್ಯವಸ್ಥಾಪಕ ವಿನೋದ್ ಹೇಳಿದರು.