<p>ಕೊಡಿಗೇನಹಳ್ಳಿ: ಹೋಬಳಿಯ ಕಡಗತ್ತೂರು ಗ್ರಾಮದಲ್ಲಿರುವ ಎಸ್ಬಿಐ ಬ್ಯಾಂಕ್ ಸಿಬ್ಬಂದಿ ಗ್ರಾಹಕರ ಸಮಸ್ಯೆ<br />ಗಳಿಗೆ ಸರಿಯಾಗಿ ಸ್ಪಂದಿಸದೆ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಹಕರು ಪ್ರತಿಭಟನೆ ನಡೆಸಿದರು.</p>.<p>ಆರು ತಿಂಗಳಿಂದ ಪಾಸ್ ಬುಕ್ ಎಂಟ್ರಿ ಮಾಡಿಕೊಡುತ್ತಿಲ್ಲ. ಕೃಷಿ ಸಾಲ, ಬಂಗಾರದ ಮೇಲೆ ಸಾಲ ನೀಡಲು ಸತಾಯಿಸುತ್ತಾರೆ. ಪಿಂಚಣಿ ಹಣ ಪರಿಶೀಲಿಸಿ, ಎಂಟ್ರಿ ಮಾಡಿಕೊಡಲು ತಾಂತ್ರಿಕ ನೆಪವೊಡ್ಡುತ್ತಾರೆ ಎಂದು ಗ್ರಾಹಕರು ಆರೋಪಿಸಿದರು.</p>.<p>‘ಬ್ಯಾಂಕ್ನಲ್ಲಿ ಸಿಬ್ಬಂದಿ ಕೊರತೆ ಇದೆ. ಆದರೂ ಗ್ರಾಹಕರಿಗೆ ತೊಂದರೆಯಾಗಬಾರದೆಂಬ ಕಾರಣಕ್ಕೆ ಪಾಸ್ಬುಕ್, ಪಿಂಚಣಿ ಹಣ ಎಂಟ್ರಿ ಮಾಡುವುದನ್ನು ಹೊರತುಪಡಿಸಿ ಉಳಿದೆಲ್ಲಾ ಕೆಲಸಗಳನ್ನು ನಾವೇ ಮಾಡುತ್ತಿದ್ದೇವೆ’ ಎಂದು ಎಸ್ಬಿಐ ಕಡಗತ್ತೂರು ಶಾಖೆ ವ್ಯವಸ್ಥಾಪಕ ವಿನೋದ್ ಹೇಳಿದರು.</p>.<p>ಪ್ರತಿಭಟನೆಯಲ್ಲಿ ಜಗನ್ನಾಥರೆಡ್ಡಿ, ತಿಮ್ಮಾರೆಡ್ಡಿ, ಶ್ರೀನಿವಾಸ್, ನಿಖಿಲ್, ಆದಿ, ಗಂಗಾಧರ್, ವೀರಭದ್ರಪ್ಪ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಡಿಗೇನಹಳ್ಳಿ: ಹೋಬಳಿಯ ಕಡಗತ್ತೂರು ಗ್ರಾಮದಲ್ಲಿರುವ ಎಸ್ಬಿಐ ಬ್ಯಾಂಕ್ ಸಿಬ್ಬಂದಿ ಗ್ರಾಹಕರ ಸಮಸ್ಯೆ<br />ಗಳಿಗೆ ಸರಿಯಾಗಿ ಸ್ಪಂದಿಸದೆ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಹಕರು ಪ್ರತಿಭಟನೆ ನಡೆಸಿದರು.</p>.<p>ಆರು ತಿಂಗಳಿಂದ ಪಾಸ್ ಬುಕ್ ಎಂಟ್ರಿ ಮಾಡಿಕೊಡುತ್ತಿಲ್ಲ. ಕೃಷಿ ಸಾಲ, ಬಂಗಾರದ ಮೇಲೆ ಸಾಲ ನೀಡಲು ಸತಾಯಿಸುತ್ತಾರೆ. ಪಿಂಚಣಿ ಹಣ ಪರಿಶೀಲಿಸಿ, ಎಂಟ್ರಿ ಮಾಡಿಕೊಡಲು ತಾಂತ್ರಿಕ ನೆಪವೊಡ್ಡುತ್ತಾರೆ ಎಂದು ಗ್ರಾಹಕರು ಆರೋಪಿಸಿದರು.</p>.<p>‘ಬ್ಯಾಂಕ್ನಲ್ಲಿ ಸಿಬ್ಬಂದಿ ಕೊರತೆ ಇದೆ. ಆದರೂ ಗ್ರಾಹಕರಿಗೆ ತೊಂದರೆಯಾಗಬಾರದೆಂಬ ಕಾರಣಕ್ಕೆ ಪಾಸ್ಬುಕ್, ಪಿಂಚಣಿ ಹಣ ಎಂಟ್ರಿ ಮಾಡುವುದನ್ನು ಹೊರತುಪಡಿಸಿ ಉಳಿದೆಲ್ಲಾ ಕೆಲಸಗಳನ್ನು ನಾವೇ ಮಾಡುತ್ತಿದ್ದೇವೆ’ ಎಂದು ಎಸ್ಬಿಐ ಕಡಗತ್ತೂರು ಶಾಖೆ ವ್ಯವಸ್ಥಾಪಕ ವಿನೋದ್ ಹೇಳಿದರು.</p>.<p>ಪ್ರತಿಭಟನೆಯಲ್ಲಿ ಜಗನ್ನಾಥರೆಡ್ಡಿ, ತಿಮ್ಮಾರೆಡ್ಡಿ, ಶ್ರೀನಿವಾಸ್, ನಿಖಿಲ್, ಆದಿ, ಗಂಗಾಧರ್, ವೀರಭದ್ರಪ್ಪ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>