<p>ತಿಪಟೂರು: ವಿದ್ಯುತ್ ಖಾಸಗಿಕರಣದಿಂದ ನೌಕರರು, ಅಧಿಕಾರಿಗಳ ಹಾಗೂ ರಾಜ್ಯದ ಬೊಕ್ಕಸ ಹಾಗೂ ಗ್ರಾಹಕರಿಗೆ ಸಾಕಷ್ಟು ನಷ್ಟ ಆಗಲಿದೆ. ಇದನ್ನು ಖಂಡಿಸಿ ರಾಜ್ಯಸರ್ಕಾರ ಕೇಂದ್ರಕ್ಕೆ ಪತ್ರ ಬರೆಯಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಕೆ.ಪಿ. ಜಯಪ್ಪ ಒತ್ತಾಯಿಸಿದರು.</p>.<p>ನಗರದ ಬೆಸ್ಕಾಂ ಕಚೇರಿ ಆವರಣದಲ್ಲಿ ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ಹಾಗೂ ವಿದ್ಯುತ್ ಕಾಯ್ದೆ ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ, ನೌಕರರ ಸಂಘ ಮತ್ತು ವಿವಿಧ ಸಂಘ ಸಂಸ್ಥೆಗಳ ಒಕ್ಕೂಟದಿಂದ ಸಾಂಕೇತಿಕ ಧರಣಿ ನಡೆಸಿದರು.</p>.<p>ವಿದ್ಯುತ್ ಕ್ಷೇತ್ರದಲ್ಲಿ ಹೊರಗುತ್ತಿಗೆ ಹಾಗೂ ಖಾಸಗೀಕರಣ ಮಾಡುತ್ತಿರುವುದು ಕಾರ್ಮಿಕ ವಿರೋಧಿಯಾಗಿದೆ. ಇದರಿಂದ ರೈತರು, ಗ್ರಾಹಕರು, ಜನಸಾಮಾನ್ಯರು ಸೇರಿದಂತೆ ಬೆಸ್ಕಾಂ ನೌಕರರಿಗೂ ಹೊರೆಯಾಗಲಿದೆ. ಕೇಂದ್ರ ಸರ್ಕಾರ ಖಾಸಗಿಕರಣ ಮಾಡುವುದರಿಂದ ಎಲ್ಲರಿಗೂ ತೊಂದರೆಯಾಗುತ್ತದೆ. ಕೂಡಲೇ ರಾಜ್ಯಸರ್ಕಾರ ಕಾಯ್ದೆಯನ್ನು ತಿದ್ದುಪಡಿಗೆ ಆಗ್ರಹಿಸಿ ಜಾರಿಗೆ ಮುಂದಾಗಬೇಕು ಎಂದರು.</p>.<p>ಸಹಾಯಕ ಎಂಜಿನಿಯರ್ಗಳಾದ ಹರಿಹರಪ್ಪ, ರಾಜಶೇಖರ್, ಚೇತನ್, ಪರಮೇಶ್ವರ ಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿಪಟೂರು: ವಿದ್ಯುತ್ ಖಾಸಗಿಕರಣದಿಂದ ನೌಕರರು, ಅಧಿಕಾರಿಗಳ ಹಾಗೂ ರಾಜ್ಯದ ಬೊಕ್ಕಸ ಹಾಗೂ ಗ್ರಾಹಕರಿಗೆ ಸಾಕಷ್ಟು ನಷ್ಟ ಆಗಲಿದೆ. ಇದನ್ನು ಖಂಡಿಸಿ ರಾಜ್ಯಸರ್ಕಾರ ಕೇಂದ್ರಕ್ಕೆ ಪತ್ರ ಬರೆಯಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಕೆ.ಪಿ. ಜಯಪ್ಪ ಒತ್ತಾಯಿಸಿದರು.</p>.<p>ನಗರದ ಬೆಸ್ಕಾಂ ಕಚೇರಿ ಆವರಣದಲ್ಲಿ ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ಹಾಗೂ ವಿದ್ಯುತ್ ಕಾಯ್ದೆ ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ, ನೌಕರರ ಸಂಘ ಮತ್ತು ವಿವಿಧ ಸಂಘ ಸಂಸ್ಥೆಗಳ ಒಕ್ಕೂಟದಿಂದ ಸಾಂಕೇತಿಕ ಧರಣಿ ನಡೆಸಿದರು.</p>.<p>ವಿದ್ಯುತ್ ಕ್ಷೇತ್ರದಲ್ಲಿ ಹೊರಗುತ್ತಿಗೆ ಹಾಗೂ ಖಾಸಗೀಕರಣ ಮಾಡುತ್ತಿರುವುದು ಕಾರ್ಮಿಕ ವಿರೋಧಿಯಾಗಿದೆ. ಇದರಿಂದ ರೈತರು, ಗ್ರಾಹಕರು, ಜನಸಾಮಾನ್ಯರು ಸೇರಿದಂತೆ ಬೆಸ್ಕಾಂ ನೌಕರರಿಗೂ ಹೊರೆಯಾಗಲಿದೆ. ಕೇಂದ್ರ ಸರ್ಕಾರ ಖಾಸಗಿಕರಣ ಮಾಡುವುದರಿಂದ ಎಲ್ಲರಿಗೂ ತೊಂದರೆಯಾಗುತ್ತದೆ. ಕೂಡಲೇ ರಾಜ್ಯಸರ್ಕಾರ ಕಾಯ್ದೆಯನ್ನು ತಿದ್ದುಪಡಿಗೆ ಆಗ್ರಹಿಸಿ ಜಾರಿಗೆ ಮುಂದಾಗಬೇಕು ಎಂದರು.</p>.<p>ಸಹಾಯಕ ಎಂಜಿನಿಯರ್ಗಳಾದ ಹರಿಹರಪ್ಪ, ರಾಜಶೇಖರ್, ಚೇತನ್, ಪರಮೇಶ್ವರ ಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>