ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಶಿಷ್ಟರ ಮೇಲೆ ದಬ್ಬಾಳಿಕೆ ಖಂಡಿಸಿ ಪ್ರತಿಭಟನೆ

ಚನ್ನಬಸವೇಶ್ವರ ದೇವಾಲಯ ಆವರಣದಿಂದ ಮೆರವಣಿಗೆ
Last Updated 9 ಸೆಪ್ಟೆಂಬರ್ 2020, 3:01 IST
ಅಕ್ಷರ ಗಾತ್ರ

ಗುಬ್ಬಿ: ಪರಿಶಿಷ್ಟರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಕೊನೆಗೊಳಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಪಟ್ಟಣದ ಚನ್ನಬಸವೇಶ್ವರದೇವಾಲಯ ಆವರಣದಿಂದ ಮೆರವಣಿಗೆ ಮೂಲಕ ತಾಲ್ಲೂಕು ಕಚೇರಿಗೆ ಬಂದು ಪ್ರತಿಭಟಿಸಿದರು. ಪರಿಶಿಷ್ಟರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ನಿಲ್ಲಬೇಕು ಎಂದು ಆಗ್ರಹಿಸಿದರು.

ತಾಲ್ಲೂಕಿನಲ್ಲಿ ಪರಿಶಿಷ್ಟರ ಕಾಲೊನಿಗಳು ಇರುವ ಕಡೆ ಸ್ಮಶಾನಕ್ಕೆ ಜಮೀನು ಮಂಜೂರು ಮಾಡಬೇಕು. ಬಗರ್ ಹುಕುಂ ಸಾಗುವಳಿಯಲ್ಲಿ ಜಮೀನು ಮಂಜೂರಾದವರಿಗೆ ಖಾತೆ, ಪಹಣಿ ಮಾಡಿಕೊಡಬೇಕು. ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಪರಿಶಿಷ್ಟರ ದೌರ್ಜನ್ಯ ಹಿತರಕ್ಷಣಾ ಸಮಿತಿ ಸಭೆ ಕರೆಯಬೇಕು. ಪರಿಶಿಷ್ಟರ ಕೇರಿಗಳಲ್ಲಿ ಶುದ್ಧ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಚರಂಡಿ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಸಮಿತಿ ಅಧ್ಯಕ್ಷ ರಾಜೇಶ್, ತಾಲ್ಲೂಕು ಸಮಿತಿ ಅಧ್ಯಕ್ಷ ಸೋಮು, ಉಪಾಧ್ಯಕ್ಷ ಸೋಮಶೇಖರ್, ಪದಾಧಿಕಾರಿಗಳಾದ ನಾರಾಯಣ್ ಮಂಜುನಾಥ, ಸುರೇಶ್, ನವೀನ್ ಕುಮಾರ್, ನಿಧಿ ಕುಮಾರ್, ಕೃಷ್ಣಮೂರ್ತಿ, ಮಹೇಶ್, ವೆಂಕಟೇಶ್, ಬಲರಾಜ್, ರಂಗಸ್ವಾಮಿ, ಅಮರ್, ನರಸಿಂಹರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT