<p><strong>ಪಾವಗಡ:</strong> ತಾಲ್ಲೂಕಿನ ಕೋಡಿಗೆಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ತಿಪ್ಪೇಸ್ವಾಮಿ ಅವರನ್ನು ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಪೋಷಕರು ಶುಕ್ರವಾರ ಶಾಲೆ ಮುಂಭಾಗ ಪ್ರತಿಭಟನೆ ನಡೆಸಿದರು.</p>.<p>ಕಳೆದ ಹಲವು ವರ್ಷಗಳಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶ ಬರುತ್ತಿದೆ. ಶೈಕ್ಷಣಿಕವಾಗಿ ಶಾಲೆ ಪ್ರಗತಿಯತ್ತ ಸಾಗುತ್ತಿದೆ. ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಪ್ರಾಂಶುಪಾಲರನ್ನು ಬೇರೆಡೆಗೆ ವರ್ಗವಾಣೆ ಮಾಡಿರುವುದು ಖಂಡನೀಯ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಗಡಿ ಪ್ರದೇಶದಲ್ಲಿರುವ ವಸತಿ ಶಾಲೆಯಲ್ಲಿ ಕಳಂಕ ರಹಿತ ಸೇವೆ ಸಲ್ಲಿಸುತ್ತಿದ್ದಾರೆ. ಕರ್ನಾಟಕ ವಸತಿ ಶಿಕ್ಷಣ ಸಂಘದ ವ್ಯಾಪ್ತಿಯಲ್ಲಿಯೂ 2ನೇ ರ್ಯಾಂಕ್ ಪಡೆದಿದ್ದಾರೆ. ಇಲ್ಲಿನ ಎಲ್ಲ ವಿದ್ಯಾರ್ಥಿಗಳನ್ನು ತುಂಬಾ ಜವಾಬ್ದಾರಿಯುತವಾಗಿ ನೋಡಿಕೊಳ್ಳುವುದಲ್ಲದೆ ಅವರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುತ್ತಾರೆ ಎಂದು ಪೋಷಕ ಜಯಶೀಲರೆಡ್ಡಿ ತಿಳಿಸಿದರು.</p>.<p>ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಾಂಶುಪಾಲ ತಿಪ್ಪೇಸ್ವಾಮಿ ಅವರ ವರ್ಗಾವಣೆ ಆದೇಶವನ್ನು ಹಿಂಪಡೆಯುವವರೆಗೆ ಪ್ರತಿಭಟನೆ ನಡೆಸಲಾಗುವುದು. ಬೇಡಿಕೆ ಈಡೇರದಿದ್ದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದುರ್ಗಣ್ಣ, ಡೈರಿ ಗಂಗಣ್ಣ, ಜಂಪಲಪ್ಪ, ಬಸವರಾಜು, ನಿಡಗಲ್ ಮಲ್ಲಣ್ಣ, ಕೆ ಟಿ ಹಳ್ಳಿ ಮಂಜುನಾಥ್, ವೀರನಾರಾಯಣ, ಕೆಂಚರಾಯ, ಪಾಲನಾಯಕ, ಗಿರಿಯಪ್ಪ, ನಟರಾಜ್, ನಿರಂಜನ್ , ರಘು, ಓಬಳೇಶ್, ಗಿರೀಶ್, ಕಾಂತರಾಜು, ಕವಿತಾ, ಸೋಮಶೇಖರ್, ರಾಜಮ್ಮ, ಹನುಮಂತರಾಯಪ್ಪ , ನಾಗಭೂಷಣ, ಪಾಲಪ್ಪ, ಗುಣೆಗೌಡ, ಸುಕನ್ಯಮ್ಮ, ಮಂಜುಳಾ, ನರೇಶ್ ಬಾಬು, ಮಂಜುನಾಥ್, ರಮೇಶ್, ಬಾಗ್ಯಲಕ್ಷ್ಮಿ, ಚಿತ್ತಯ್ಯ, ಈರಮುದ್ದಣ್ಣ , ಜಯರಾಮ, ಭಕ್ತೇಶ , ಗುಜ್ಜಾರಪ್ಪ, ಎಚ್. ರೆಡ್ಡಿ, ಈರಣ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ:</strong> ತಾಲ್ಲೂಕಿನ ಕೋಡಿಗೆಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ತಿಪ್ಪೇಸ್ವಾಮಿ ಅವರನ್ನು ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಪೋಷಕರು ಶುಕ್ರವಾರ ಶಾಲೆ ಮುಂಭಾಗ ಪ್ರತಿಭಟನೆ ನಡೆಸಿದರು.</p>.<p>ಕಳೆದ ಹಲವು ವರ್ಷಗಳಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶ ಬರುತ್ತಿದೆ. ಶೈಕ್ಷಣಿಕವಾಗಿ ಶಾಲೆ ಪ್ರಗತಿಯತ್ತ ಸಾಗುತ್ತಿದೆ. ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಪ್ರಾಂಶುಪಾಲರನ್ನು ಬೇರೆಡೆಗೆ ವರ್ಗವಾಣೆ ಮಾಡಿರುವುದು ಖಂಡನೀಯ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಗಡಿ ಪ್ರದೇಶದಲ್ಲಿರುವ ವಸತಿ ಶಾಲೆಯಲ್ಲಿ ಕಳಂಕ ರಹಿತ ಸೇವೆ ಸಲ್ಲಿಸುತ್ತಿದ್ದಾರೆ. ಕರ್ನಾಟಕ ವಸತಿ ಶಿಕ್ಷಣ ಸಂಘದ ವ್ಯಾಪ್ತಿಯಲ್ಲಿಯೂ 2ನೇ ರ್ಯಾಂಕ್ ಪಡೆದಿದ್ದಾರೆ. ಇಲ್ಲಿನ ಎಲ್ಲ ವಿದ್ಯಾರ್ಥಿಗಳನ್ನು ತುಂಬಾ ಜವಾಬ್ದಾರಿಯುತವಾಗಿ ನೋಡಿಕೊಳ್ಳುವುದಲ್ಲದೆ ಅವರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುತ್ತಾರೆ ಎಂದು ಪೋಷಕ ಜಯಶೀಲರೆಡ್ಡಿ ತಿಳಿಸಿದರು.</p>.<p>ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಾಂಶುಪಾಲ ತಿಪ್ಪೇಸ್ವಾಮಿ ಅವರ ವರ್ಗಾವಣೆ ಆದೇಶವನ್ನು ಹಿಂಪಡೆಯುವವರೆಗೆ ಪ್ರತಿಭಟನೆ ನಡೆಸಲಾಗುವುದು. ಬೇಡಿಕೆ ಈಡೇರದಿದ್ದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದುರ್ಗಣ್ಣ, ಡೈರಿ ಗಂಗಣ್ಣ, ಜಂಪಲಪ್ಪ, ಬಸವರಾಜು, ನಿಡಗಲ್ ಮಲ್ಲಣ್ಣ, ಕೆ ಟಿ ಹಳ್ಳಿ ಮಂಜುನಾಥ್, ವೀರನಾರಾಯಣ, ಕೆಂಚರಾಯ, ಪಾಲನಾಯಕ, ಗಿರಿಯಪ್ಪ, ನಟರಾಜ್, ನಿರಂಜನ್ , ರಘು, ಓಬಳೇಶ್, ಗಿರೀಶ್, ಕಾಂತರಾಜು, ಕವಿತಾ, ಸೋಮಶೇಖರ್, ರಾಜಮ್ಮ, ಹನುಮಂತರಾಯಪ್ಪ , ನಾಗಭೂಷಣ, ಪಾಲಪ್ಪ, ಗುಣೆಗೌಡ, ಸುಕನ್ಯಮ್ಮ, ಮಂಜುಳಾ, ನರೇಶ್ ಬಾಬು, ಮಂಜುನಾಥ್, ರಮೇಶ್, ಬಾಗ್ಯಲಕ್ಷ್ಮಿ, ಚಿತ್ತಯ್ಯ, ಈರಮುದ್ದಣ್ಣ , ಜಯರಾಮ, ಭಕ್ತೇಶ , ಗುಜ್ಜಾರಪ್ಪ, ಎಚ್. ರೆಡ್ಡಿ, ಈರಣ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>