<p><strong>ತುರುವೇಕೆರೆ</strong>: ಹೇಮಾವತಿ ಜಲಾಶಯದಿಂದ ನಾಗಮಂಗಲ ಶಾಖಾ ನಾಲೆಯ ಮೂಲಕ ದಬ್ಬೇಘಟ್ಟ ಮತ್ತು ಮಾಯಸಂದ್ರ ಹೋಬಳಿಗೆ ಕುಡಿಯುವ ನೀರು ಹರಿಸುವಂತೆ ಒತ್ತಾಯಿಸಿ ಶಾಸಕ ಎಂ.ಟಿ.ಕೃಷ್ಣಪ್ಪ ನೇತೃತ್ವದಲ್ಲಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ತಲೆಯ ಮೇಲೆ ಖಾಲಿ ಕೊಡ ಹೊತ್ತು ಹೇಮಾವತಿ ಕಚೇರಿವರೆಗೆ ನಡೆದರು.</p>.<p>‘ಬೇಕೇ ಬೇಕು ಹೇಮಾವತಿ ನೀರು’, ‘ಉಳಿಸಿ ಉಳಿಸಿ ರೈತರ ಉಳಿಸಿ’ ಎಂದು ಘೋಷಣೆ ಕೂಗಿದರು.</p>.<p>ಕುಡಿಯುವ ನೀರಿಗೆ ತತ್ವಾರವಿರುವ ದಬ್ಬೇಘಟ್ಟ ಹೋಬಳಿ ಮತ್ತು ಮಾಯಸಂದ್ರ ಹೋಬಳಿಯ ಕೆರೆ ಕಟ್ಟೆಗಳನ್ನು ತುಂಬಿಸಬೇಕು ಎಂದು ಒತ್ತಾಯಿಸಿದರು.</p>.<p>‘ತುಮಕೂರು ಶಾಖಾ ನಾಲೆಗೆ ಮಾತ್ರ ನೀರು ಬಿಡಲಾಗಿದೆ. ನಾಗಮಂಗಲ ಶಾಖಾ ನಾಲೆಗೆ ಏಕೆ ನೀರು ಬಿಡುತ್ತಿಲ್ಲ. ಇಲ್ಲಿಯ ಜನರು ಬದುಕುವುದು ಬೇಡವೇ?’ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಮಾವತಿ ಇಲಾಖಾ ಅಧೀಕ್ಷಕಿ ಸುವರ್ಣ ಅವರನ್ನು ಪ್ರಶ್ನಿಸಿದರು.</p>.<p>ಮೂರ್ನಾಲ್ಕು ದಿನಗಳಲ್ಲಿ ಹೇಮಾವತಿ ನೀರನ್ನು ನಾಗಮಂಗಲ ಶಾಖಾ ನಾಲೆಗೆ ಹರಿಸದಿದ್ದಲ್ಲಿ ಹೇಮಾವತಿ ಇಲಾಖೆ ಕಚೇರಿ ಮುಂದೆ ಧರಣಿ ಕೂರುವುದಾಗಿ ಎಚ್ಚರಿಸಿದರು.</p>.<p>ಕಚೇರಿಯ ಗೇಟ್ ಮುಂಭಾಗವೇ ಪ್ರತಿಭಟನಕಾರರನ್ನು ಪೊಲೀಸರು ತಡೆದರು. </p>.<p>ಹೇಮಾವತಿ ಇಲಾಖೆಯ ಎಸ್ಇ ಸುವರ್ಣ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಿಂದಿ ಮತ್ತು ಶ್ರೀನಿವಾಸ್, ಸಹಾಯಕ ಎಂಜಿಯರ್ ಶಿವಪ್ರಸಾದ್ ಸ್ಥಳಕ್ಕೆ ಬಂದು ಅಹವಾಲು ಆಲಿಸಿದರು.</p>.<p>ಸಂಬಂಧಿಸಿದ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.</p>.<p>ಮಾಜಿ ಶಾಸಕ ಎಂ.ಡಿ.ಲಕ್ಷ್ಮಿನಾರಾಯಣ್, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ದೊಡ್ಡೇಗೌಡ, ಮಂಗೀಕುಪ್ಪೆ ಬಸವರಾಜು, ಹೇಮಚಂದ್ರು, ಹರೀಶ್, ಸೋಮಣ್ಣ, ಲೀಲಾವತಿ, ವೆಂಕಟೇಶ್, ಕೃಷ್ಣಪ್ಪ, ಬಿ.ಎಸ್.ದೇವರಾಜ್, ರಾಜು, ಕೃಷ್ಣಮೂರ್ತಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ</strong>: ಹೇಮಾವತಿ ಜಲಾಶಯದಿಂದ ನಾಗಮಂಗಲ ಶಾಖಾ ನಾಲೆಯ ಮೂಲಕ ದಬ್ಬೇಘಟ್ಟ ಮತ್ತು ಮಾಯಸಂದ್ರ ಹೋಬಳಿಗೆ ಕುಡಿಯುವ ನೀರು ಹರಿಸುವಂತೆ ಒತ್ತಾಯಿಸಿ ಶಾಸಕ ಎಂ.ಟಿ.ಕೃಷ್ಣಪ್ಪ ನೇತೃತ್ವದಲ್ಲಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ತಲೆಯ ಮೇಲೆ ಖಾಲಿ ಕೊಡ ಹೊತ್ತು ಹೇಮಾವತಿ ಕಚೇರಿವರೆಗೆ ನಡೆದರು.</p>.<p>‘ಬೇಕೇ ಬೇಕು ಹೇಮಾವತಿ ನೀರು’, ‘ಉಳಿಸಿ ಉಳಿಸಿ ರೈತರ ಉಳಿಸಿ’ ಎಂದು ಘೋಷಣೆ ಕೂಗಿದರು.</p>.<p>ಕುಡಿಯುವ ನೀರಿಗೆ ತತ್ವಾರವಿರುವ ದಬ್ಬೇಘಟ್ಟ ಹೋಬಳಿ ಮತ್ತು ಮಾಯಸಂದ್ರ ಹೋಬಳಿಯ ಕೆರೆ ಕಟ್ಟೆಗಳನ್ನು ತುಂಬಿಸಬೇಕು ಎಂದು ಒತ್ತಾಯಿಸಿದರು.</p>.<p>‘ತುಮಕೂರು ಶಾಖಾ ನಾಲೆಗೆ ಮಾತ್ರ ನೀರು ಬಿಡಲಾಗಿದೆ. ನಾಗಮಂಗಲ ಶಾಖಾ ನಾಲೆಗೆ ಏಕೆ ನೀರು ಬಿಡುತ್ತಿಲ್ಲ. ಇಲ್ಲಿಯ ಜನರು ಬದುಕುವುದು ಬೇಡವೇ?’ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಮಾವತಿ ಇಲಾಖಾ ಅಧೀಕ್ಷಕಿ ಸುವರ್ಣ ಅವರನ್ನು ಪ್ರಶ್ನಿಸಿದರು.</p>.<p>ಮೂರ್ನಾಲ್ಕು ದಿನಗಳಲ್ಲಿ ಹೇಮಾವತಿ ನೀರನ್ನು ನಾಗಮಂಗಲ ಶಾಖಾ ನಾಲೆಗೆ ಹರಿಸದಿದ್ದಲ್ಲಿ ಹೇಮಾವತಿ ಇಲಾಖೆ ಕಚೇರಿ ಮುಂದೆ ಧರಣಿ ಕೂರುವುದಾಗಿ ಎಚ್ಚರಿಸಿದರು.</p>.<p>ಕಚೇರಿಯ ಗೇಟ್ ಮುಂಭಾಗವೇ ಪ್ರತಿಭಟನಕಾರರನ್ನು ಪೊಲೀಸರು ತಡೆದರು. </p>.<p>ಹೇಮಾವತಿ ಇಲಾಖೆಯ ಎಸ್ಇ ಸುವರ್ಣ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಿಂದಿ ಮತ್ತು ಶ್ರೀನಿವಾಸ್, ಸಹಾಯಕ ಎಂಜಿಯರ್ ಶಿವಪ್ರಸಾದ್ ಸ್ಥಳಕ್ಕೆ ಬಂದು ಅಹವಾಲು ಆಲಿಸಿದರು.</p>.<p>ಸಂಬಂಧಿಸಿದ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.</p>.<p>ಮಾಜಿ ಶಾಸಕ ಎಂ.ಡಿ.ಲಕ್ಷ್ಮಿನಾರಾಯಣ್, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ದೊಡ್ಡೇಗೌಡ, ಮಂಗೀಕುಪ್ಪೆ ಬಸವರಾಜು, ಹೇಮಚಂದ್ರು, ಹರೀಶ್, ಸೋಮಣ್ಣ, ಲೀಲಾವತಿ, ವೆಂಕಟೇಶ್, ಕೃಷ್ಣಪ್ಪ, ಬಿ.ಎಸ್.ದೇವರಾಜ್, ರಾಜು, ಕೃಷ್ಣಮೂರ್ತಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>