<p><strong>ತುಮಕೂರು</strong>: ಸರ್ಕಾರ ಒಂದು ಕಡೆ ಮಹಿಳೆಯರ ಸಬಲೀಕರಣ ಮಾಡುತ್ತಲೇ ಮತ್ತೊಂದು ಕಡೆ 1 ಸಾವಿರ ಮದ್ಯದಂಗಡಿ ತೆರೆಯಲು ಮುಂದಾಗಿರುವುದು ಸರಿಯಲ್ಲ ಎಂದು ಲೇಖಕಿ ಬಾ.ಹ.ರಮಾಕುಮಾರಿ ಹೇಳಿದರು.</p>.<p>ಸರ್ಕಾರ 1 ಸಾವಿರ ಮದ್ಯದಂಗಡಿ ತೆರೆಯಲು ಮುಂದಾಗಿರುವುದನ್ನು ಖಂಡಿಸಿ ನಗರದಲ್ಲಿ ಶನಿವಾರ ಸರ್ವೋದಯ ಮಹಾ ಮಂಡಲ, ಸಿಐಟಿಯು, ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಮತ್ತು ಪ್ರಗತಿಪರ ಸಂಘಟನೆಗಳಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.</p>.<p>ಲೇಖಕಿಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಮಲ್ಲಿಕಾ ಬಸವರಾಜು, ‘ಯುವ ಜನತೆ ಕುಡಿತದಿಂದ ತಮ್ಮ ಬದುಕು ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಸಮಾಜದಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿವೆ. ಸರ್ಕಾರ ಈ ತೀರ್ಮಾನ ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.</p>.<p>ಜನಸಂಖ್ಯೆಗೆ ಅನುಗುಣವಾಗಿ ಶಾಲಾ-ಕಾಲೇಜು, ಆಸ್ಪತ್ರೆ, ಉದ್ಯೋಗ ಸೃಷ್ಟಿಸಬೇಕು. ಆದರೆ ಸರ್ಕಾರ ಈ ರೀತಿ ಮದ್ಯದಂಗಡಿ ತೆರೆಯಲು ಹೊರಟಿರುವುದು ಉತ್ತಮ ಬೆಳವಣಿಗೆಯಲ್ಲ ಎಂದರು.</p>.<p>ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ವೈ.ಎಚ್,ಹುಚ್ಚಯ್ಯ, ವಿವಿಧ ಸಂಘಗಳ ಪದಾಧಿಕಾರಿಗಳಾದ ಕಲ್ಪನಾ, ಚಂದ್ರಕಲಾ, ಕಲ್ಯಾಣಿ, ಸಿ.ಯತಿರಾಜು, ಎಂ.ಬಸವಯ್ಯ, ಪುಟ್ಟಕಾಮಣ್ಣ, ಬಿ.ಉಮೇಶ್, ಎನ್.ಕೆ.ಸುಬ್ರಮಣ್ಯ, ಚಂದ್ರಶೇಖರ್, ಸೈಯದ್ ಮುಜೀಬ್, ಎ.ಲೊಕೇಶ್, ಪಾರ್ವತಮ್ಮ, ರಾಣಿ ಚಂದ್ರಶೇಖರ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಸರ್ಕಾರ ಒಂದು ಕಡೆ ಮಹಿಳೆಯರ ಸಬಲೀಕರಣ ಮಾಡುತ್ತಲೇ ಮತ್ತೊಂದು ಕಡೆ 1 ಸಾವಿರ ಮದ್ಯದಂಗಡಿ ತೆರೆಯಲು ಮುಂದಾಗಿರುವುದು ಸರಿಯಲ್ಲ ಎಂದು ಲೇಖಕಿ ಬಾ.ಹ.ರಮಾಕುಮಾರಿ ಹೇಳಿದರು.</p>.<p>ಸರ್ಕಾರ 1 ಸಾವಿರ ಮದ್ಯದಂಗಡಿ ತೆರೆಯಲು ಮುಂದಾಗಿರುವುದನ್ನು ಖಂಡಿಸಿ ನಗರದಲ್ಲಿ ಶನಿವಾರ ಸರ್ವೋದಯ ಮಹಾ ಮಂಡಲ, ಸಿಐಟಿಯು, ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಮತ್ತು ಪ್ರಗತಿಪರ ಸಂಘಟನೆಗಳಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.</p>.<p>ಲೇಖಕಿಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಮಲ್ಲಿಕಾ ಬಸವರಾಜು, ‘ಯುವ ಜನತೆ ಕುಡಿತದಿಂದ ತಮ್ಮ ಬದುಕು ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಸಮಾಜದಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿವೆ. ಸರ್ಕಾರ ಈ ತೀರ್ಮಾನ ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.</p>.<p>ಜನಸಂಖ್ಯೆಗೆ ಅನುಗುಣವಾಗಿ ಶಾಲಾ-ಕಾಲೇಜು, ಆಸ್ಪತ್ರೆ, ಉದ್ಯೋಗ ಸೃಷ್ಟಿಸಬೇಕು. ಆದರೆ ಸರ್ಕಾರ ಈ ರೀತಿ ಮದ್ಯದಂಗಡಿ ತೆರೆಯಲು ಹೊರಟಿರುವುದು ಉತ್ತಮ ಬೆಳವಣಿಗೆಯಲ್ಲ ಎಂದರು.</p>.<p>ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ವೈ.ಎಚ್,ಹುಚ್ಚಯ್ಯ, ವಿವಿಧ ಸಂಘಗಳ ಪದಾಧಿಕಾರಿಗಳಾದ ಕಲ್ಪನಾ, ಚಂದ್ರಕಲಾ, ಕಲ್ಯಾಣಿ, ಸಿ.ಯತಿರಾಜು, ಎಂ.ಬಸವಯ್ಯ, ಪುಟ್ಟಕಾಮಣ್ಣ, ಬಿ.ಉಮೇಶ್, ಎನ್.ಕೆ.ಸುಬ್ರಮಣ್ಯ, ಚಂದ್ರಶೇಖರ್, ಸೈಯದ್ ಮುಜೀಬ್, ಎ.ಲೊಕೇಶ್, ಪಾರ್ವತಮ್ಮ, ರಾಣಿ ಚಂದ್ರಶೇಖರ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>