<p><strong>ತುಮಕೂರು:</strong> ನಿವೃತ್ತ ನೌಕರರ ಇಪಿಎಸ್ ಪಿಂಚಣಿ ಕನಿಷ್ಠ ಮೊತ್ತವನ್ನು ಹೆಚ್ಚಿಸಬೇಕು, ಹೆಚ್ಚುವರಿ ಪಿಂಚಿಣಿ ನೀಡಬೇಕು ಎಂದು ಎನ್ಎಸಿ ರಾಷ್ಟ್ರೀಯ ಮುಖ್ಯ ಸಂಯೋಜಕ ರಮಾಕಾಂತ್ ನರಗುಂದ ಆಗ್ರಹಿಸಿದರು.</p>.<p>ನಗರದಲ್ಲಿ ಕೆಎಸ್ಆರ್ಟಿಸಿ ತುಮಕೂರು ವಿಭಾಗದ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಟ್ರಸ್ಟ್ ಹಮ್ಮಿಕೊಂಡಿದ್ದ ಮೊದಲ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.</p>.<p>ಪಿಂಚಣಿ ಹೆಚ್ಚಳಕ್ಕೆ ಆಗ್ರಹಿಸಿ ಸಾಕಷ್ಟು ಬಾರಿ ಮನವಿ ಸಲ್ಲಿಸಿ, ಹೋರಾಟ ನಡೆಸಲಾಗಿದೆ. ಉನ್ನತ ಅಧಿಕಾರಿಗಳೊಂದಿಗೂ ಚರ್ಚೆ ನಡೆಸಿ, ಸಮಸ್ಯೆ ಮನವರಿಕೆ ಮಾಡಿಕೊಡಲಾಗಿದೆ. ನಮ್ಮ ಹೋರಾಟ ನಿರ್ಣಾಯಕ ಹಂತದಲ್ಲಿದ್ದು, ಮುಂದಿನ ದಿನಗಳಲ್ಲಿ ಪಿಂಚಣಿ ಕನಿಷ್ಠ ಮೊತ್ತವನ್ನು ಮಾಸಿಕ ₹7,500ಕ್ಕೆ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಹೇಳಿದರು.</p>.<p>ವಿವಿಧ ನಿಗಮ, ಮಂಡಳಿಗಳಲ್ಲಿ ಕೆಲಸ ಮಾಡಿ ನಿವೃತ್ತಿಯ ನಂತರ, ಸಂಧ್ಯಾಕಾಲದಲ್ಲಿ ಗೌರವಯುತ ಜೀವನ ನಡೆಸಲು ಪಿಂಚಣಿ ಮೊತ್ತ ಹೆಚ್ಚಿಸಬೇಕು. ಸುಪ್ರೀಂ ಕೋರ್ಟ್ ಸಹ ಕನಿಷ್ಠ ಪಿಂಚಣಿ ಹೆಚ್ಚಳಕ್ಕೆ ನಿರ್ದೇಶಿಸಿದೆ ಎಂದರು.</p>.<p>ಸಾರಿಗೆ ಸಂಸ್ಥೆ ನಿವೃತ್ತ ನೌಕರರ ಸಂಘದ ಉಪಾಧ್ಯಕ್ಷ ಆರ್.ಸುಬ್ಬಣ್ಣ, ‘ಕೆಎಸ್ಆರ್ಟಿಸಿ ಸಿಬ್ಬಂದಿ, ನೌಕರರ ಪಿಂಚಿಣಿಗೆ ಸಂಬಂಧಿಸಿದಂತೆ ಸರ್ಕಾರದ ನೀತಿಗಳು ಬದಲಾಗಬೇಕಿದೆ. ನಮ್ಮ ಬೇಡಿಕೆ ಈಡೇರಿಸುವ ಬಗ್ಗೆ ಸರ್ಕಾರ ಲಿಖಿತ ಭರವಸೆ ನೀಡಿದೆ’ ಎಂದು ತಿಳಿಸಿದರು.</p>.<p>ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್, ನಿವೃತ್ತ ಅಧಿಕಾರಿ ಗಜೇಂದ್ರಕುಮಾರ್, ಟ್ರಸ್ಟ್ ಅಧ್ಯಕ್ಷ ಭೀಮಾನಾಯ್ಕ್, ಕನ್ನಡ ಸೇನೆ ಅಧ್ಯಕ್ಷ ಧನಿಯಕುಮಾರ್, ಟ್ರಸ್ಟ್ ಪದಾಧಿಕಾರಿಗಳಾದ ಕುಲಕರ್ಣಿ, ದೊಡ್ಡೇಗೌಡ, ಡಿಟಿಒ ಮಂಜುನಾಥ್, ಡಿಎಂಇ ಅಶೀಫ್ವುಲ್ಲಾ ಷರೀಫ್, ಮುಖಂಡರಾದ ಕುಂಭಯ್ಯ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ನಿವೃತ್ತ ನೌಕರರ ಇಪಿಎಸ್ ಪಿಂಚಣಿ ಕನಿಷ್ಠ ಮೊತ್ತವನ್ನು ಹೆಚ್ಚಿಸಬೇಕು, ಹೆಚ್ಚುವರಿ ಪಿಂಚಿಣಿ ನೀಡಬೇಕು ಎಂದು ಎನ್ಎಸಿ ರಾಷ್ಟ್ರೀಯ ಮುಖ್ಯ ಸಂಯೋಜಕ ರಮಾಕಾಂತ್ ನರಗುಂದ ಆಗ್ರಹಿಸಿದರು.</p>.<p>ನಗರದಲ್ಲಿ ಕೆಎಸ್ಆರ್ಟಿಸಿ ತುಮಕೂರು ವಿಭಾಗದ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಟ್ರಸ್ಟ್ ಹಮ್ಮಿಕೊಂಡಿದ್ದ ಮೊದಲ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.</p>.<p>ಪಿಂಚಣಿ ಹೆಚ್ಚಳಕ್ಕೆ ಆಗ್ರಹಿಸಿ ಸಾಕಷ್ಟು ಬಾರಿ ಮನವಿ ಸಲ್ಲಿಸಿ, ಹೋರಾಟ ನಡೆಸಲಾಗಿದೆ. ಉನ್ನತ ಅಧಿಕಾರಿಗಳೊಂದಿಗೂ ಚರ್ಚೆ ನಡೆಸಿ, ಸಮಸ್ಯೆ ಮನವರಿಕೆ ಮಾಡಿಕೊಡಲಾಗಿದೆ. ನಮ್ಮ ಹೋರಾಟ ನಿರ್ಣಾಯಕ ಹಂತದಲ್ಲಿದ್ದು, ಮುಂದಿನ ದಿನಗಳಲ್ಲಿ ಪಿಂಚಣಿ ಕನಿಷ್ಠ ಮೊತ್ತವನ್ನು ಮಾಸಿಕ ₹7,500ಕ್ಕೆ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಹೇಳಿದರು.</p>.<p>ವಿವಿಧ ನಿಗಮ, ಮಂಡಳಿಗಳಲ್ಲಿ ಕೆಲಸ ಮಾಡಿ ನಿವೃತ್ತಿಯ ನಂತರ, ಸಂಧ್ಯಾಕಾಲದಲ್ಲಿ ಗೌರವಯುತ ಜೀವನ ನಡೆಸಲು ಪಿಂಚಣಿ ಮೊತ್ತ ಹೆಚ್ಚಿಸಬೇಕು. ಸುಪ್ರೀಂ ಕೋರ್ಟ್ ಸಹ ಕನಿಷ್ಠ ಪಿಂಚಣಿ ಹೆಚ್ಚಳಕ್ಕೆ ನಿರ್ದೇಶಿಸಿದೆ ಎಂದರು.</p>.<p>ಸಾರಿಗೆ ಸಂಸ್ಥೆ ನಿವೃತ್ತ ನೌಕರರ ಸಂಘದ ಉಪಾಧ್ಯಕ್ಷ ಆರ್.ಸುಬ್ಬಣ್ಣ, ‘ಕೆಎಸ್ಆರ್ಟಿಸಿ ಸಿಬ್ಬಂದಿ, ನೌಕರರ ಪಿಂಚಿಣಿಗೆ ಸಂಬಂಧಿಸಿದಂತೆ ಸರ್ಕಾರದ ನೀತಿಗಳು ಬದಲಾಗಬೇಕಿದೆ. ನಮ್ಮ ಬೇಡಿಕೆ ಈಡೇರಿಸುವ ಬಗ್ಗೆ ಸರ್ಕಾರ ಲಿಖಿತ ಭರವಸೆ ನೀಡಿದೆ’ ಎಂದು ತಿಳಿಸಿದರು.</p>.<p>ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್, ನಿವೃತ್ತ ಅಧಿಕಾರಿ ಗಜೇಂದ್ರಕುಮಾರ್, ಟ್ರಸ್ಟ್ ಅಧ್ಯಕ್ಷ ಭೀಮಾನಾಯ್ಕ್, ಕನ್ನಡ ಸೇನೆ ಅಧ್ಯಕ್ಷ ಧನಿಯಕುಮಾರ್, ಟ್ರಸ್ಟ್ ಪದಾಧಿಕಾರಿಗಳಾದ ಕುಲಕರ್ಣಿ, ದೊಡ್ಡೇಗೌಡ, ಡಿಟಿಒ ಮಂಜುನಾಥ್, ಡಿಎಂಇ ಅಶೀಫ್ವುಲ್ಲಾ ಷರೀಫ್, ಮುಖಂಡರಾದ ಕುಂಭಯ್ಯ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>