<p><strong>ಗುಬ್ಬಿ</strong>: ಬಸ್ಗಳ ಕೊರತೆಯಿಂದಾಗಿ ತಾಲ್ಲೂಕಿನ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಶಾಲೆ- ಕಾಲೇಜುಗಳಿಗೆ ತೆರಳಲು ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಎಬಿವಿಪಿಯಿಂದ ಮಂಗಳವಾರ ಪಟ್ಟಣದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು.</p>.<p>ಎಬಿವಿಪಿ ವಿಭಾಗೀಯ ಸಂಚಾಲಕ ಅಪ್ಪುಪಾಟೀಲ್ ಮಾತನಾಡಿ, ಕೋವಿಡ್ ಲಾಕ್ಡೌನ್ ತೆರವಿನ ನಂತರ ಶಾಲೆ-ಕಾಲೇಜು ಪ್ರಾರಂಭವಾಗಿ ಹಲವು ತಿಂಗಳು ಕಳೆದರೂ, ಸಾರಿಗೆ ಇಲಾಖೆಯವರು ತಾಲ್ಲೂಕಿನ ಗ್ರಾಮಾಂತರ ಭಾಗಗಳಿಗೆ ಸಂಚಾರ ವ್ಯವಸ್ಥೆಯನ್ನು ಸರಿಯಾಗಿ ಕಲ್ಪಿಸಿಲ್ಲ ಎಂದರು.</p>.<p>ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿದೆ.ಅದಕ್ಕೆ ಅಗತ್ಯವಾದಷ್ಟು ಬಸ್ಗಳ ವ್ಯವಸ್ಥೆ ಮಾಡಬೇಕು. ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಎಬಿವಿಪಿ ತಾಲ್ಲೂಕು ಘಟಕದ ಕಾರ್ಯದರ್ಶಿ ಗುಹೇಶ್ ಮಾತನಾಡಿ, ಕೋವಿಡ್ ಲಾಕ್ಡೌನ್ಗಿಂತ ಮೊದಲು ವ್ಯವಸ್ಥಿತವಾಗಿದ್ದ ಬಸ್ ಸಂಚಾರ ಈಗ ಅಸ್ತವ್ಯಸ್ಥವಾಗಿದೆ. ಸಾರಿಗೆ ಅಧಿಕಾರಿಗಳು ಅಗತ್ಯವಿರುವ ಕಡೆ ಹೆಚ್ಚುವರಿ ಬಸ್ಗಳನ್ನು ವ್ಯವಸ್ಥೆಗೊಳಿಸಲು ಕ್ರಮಕೈಗೊಳ್ಳಬೇಕು ಎಂದರು.</p>.<p>ವಿದ್ಯಾರ್ಥಿನಿ ಯುಕ್ತಿ ಮಾತನಾಡಿ, ಬಸ್ ಕೊರತೆಯಿಂದಾಗಿ ತರಗತಿಗಳಿಗೆ ಸರಿಯಾಗಿ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದರು.</p>.<p>ಮನವಿ ಸ್ವೀಕರಿಸಿ ಮಾತನಾಡಿದ ಸಾರಿಗೆ ನಿಯಂತ್ರಣಾಧಿಕಾರಿ ಕೆಂಪರಾಜಪ್ಪ, ಯಾವ ಮಾರ್ಗದಲ್ಲಿ ಹೆಚ್ಚುವರಿ ಬಸ್ ಅಗತ್ಯವಿದೆ ಎನ್ನುವುದನ್ನು ವಿದ್ಯಾರ್ಥಿಗಳು ತಿಳಿಸಿದರೆ, ಮೇಲಧಿಕಾರಿಗಳ ಗಮನಕ್ಕೆ ತಂದು ಶೀಘ್ರ ಕ್ರಮಕೈಗೊಳ್ಳಲಾಗುವುದು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಲಾಗುವುದು ಎಂದರು.</p>.<p>ಎಬಿವಿಪಿ ಸದಸ್ಯ ಜೀವನ್, ಮಲ್ಲಿಕಾರ್ಜುನ ಸ್ವಾಮಿ, ಬೈರೇಶ್, ಮಹದೇವಪ್ರಸಾದ್, ಕಂಚಿಯಸ್ವಾಮಿ, ಪವಿತ್ರ, ಸಂಗೀತ, ಬೃಂದ, ಲಿಖಿತ, ಹಾಗೂ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ</strong>: ಬಸ್ಗಳ ಕೊರತೆಯಿಂದಾಗಿ ತಾಲ್ಲೂಕಿನ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಶಾಲೆ- ಕಾಲೇಜುಗಳಿಗೆ ತೆರಳಲು ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಎಬಿವಿಪಿಯಿಂದ ಮಂಗಳವಾರ ಪಟ್ಟಣದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು.</p>.<p>ಎಬಿವಿಪಿ ವಿಭಾಗೀಯ ಸಂಚಾಲಕ ಅಪ್ಪುಪಾಟೀಲ್ ಮಾತನಾಡಿ, ಕೋವಿಡ್ ಲಾಕ್ಡೌನ್ ತೆರವಿನ ನಂತರ ಶಾಲೆ-ಕಾಲೇಜು ಪ್ರಾರಂಭವಾಗಿ ಹಲವು ತಿಂಗಳು ಕಳೆದರೂ, ಸಾರಿಗೆ ಇಲಾಖೆಯವರು ತಾಲ್ಲೂಕಿನ ಗ್ರಾಮಾಂತರ ಭಾಗಗಳಿಗೆ ಸಂಚಾರ ವ್ಯವಸ್ಥೆಯನ್ನು ಸರಿಯಾಗಿ ಕಲ್ಪಿಸಿಲ್ಲ ಎಂದರು.</p>.<p>ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿದೆ.ಅದಕ್ಕೆ ಅಗತ್ಯವಾದಷ್ಟು ಬಸ್ಗಳ ವ್ಯವಸ್ಥೆ ಮಾಡಬೇಕು. ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಎಬಿವಿಪಿ ತಾಲ್ಲೂಕು ಘಟಕದ ಕಾರ್ಯದರ್ಶಿ ಗುಹೇಶ್ ಮಾತನಾಡಿ, ಕೋವಿಡ್ ಲಾಕ್ಡೌನ್ಗಿಂತ ಮೊದಲು ವ್ಯವಸ್ಥಿತವಾಗಿದ್ದ ಬಸ್ ಸಂಚಾರ ಈಗ ಅಸ್ತವ್ಯಸ್ಥವಾಗಿದೆ. ಸಾರಿಗೆ ಅಧಿಕಾರಿಗಳು ಅಗತ್ಯವಿರುವ ಕಡೆ ಹೆಚ್ಚುವರಿ ಬಸ್ಗಳನ್ನು ವ್ಯವಸ್ಥೆಗೊಳಿಸಲು ಕ್ರಮಕೈಗೊಳ್ಳಬೇಕು ಎಂದರು.</p>.<p>ವಿದ್ಯಾರ್ಥಿನಿ ಯುಕ್ತಿ ಮಾತನಾಡಿ, ಬಸ್ ಕೊರತೆಯಿಂದಾಗಿ ತರಗತಿಗಳಿಗೆ ಸರಿಯಾಗಿ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದರು.</p>.<p>ಮನವಿ ಸ್ವೀಕರಿಸಿ ಮಾತನಾಡಿದ ಸಾರಿಗೆ ನಿಯಂತ್ರಣಾಧಿಕಾರಿ ಕೆಂಪರಾಜಪ್ಪ, ಯಾವ ಮಾರ್ಗದಲ್ಲಿ ಹೆಚ್ಚುವರಿ ಬಸ್ ಅಗತ್ಯವಿದೆ ಎನ್ನುವುದನ್ನು ವಿದ್ಯಾರ್ಥಿಗಳು ತಿಳಿಸಿದರೆ, ಮೇಲಧಿಕಾರಿಗಳ ಗಮನಕ್ಕೆ ತಂದು ಶೀಘ್ರ ಕ್ರಮಕೈಗೊಳ್ಳಲಾಗುವುದು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಲಾಗುವುದು ಎಂದರು.</p>.<p>ಎಬಿವಿಪಿ ಸದಸ್ಯ ಜೀವನ್, ಮಲ್ಲಿಕಾರ್ಜುನ ಸ್ವಾಮಿ, ಬೈರೇಶ್, ಮಹದೇವಪ್ರಸಾದ್, ಕಂಚಿಯಸ್ವಾಮಿ, ಪವಿತ್ರ, ಸಂಗೀತ, ಬೃಂದ, ಲಿಖಿತ, ಹಾಗೂ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>