<p><strong>ಕುಣಿಗಲ್:</strong> ತಾಲ್ಲೂಕಿನ ಗೊಟ್ಟಗೆರೆ ಕೆರೆ ಸಂರಕ್ಷಣೆಗೆ ಆಗ್ರಹಿಸಿದ ಗ್ರಾಮಸ್ಥರು ಶನಿವಾರ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ರಸ್ತೆ ತಡೆದು ಪ್ರತಿಭಟನೆಗೆ ಮುಂದಾಗಿದ್ದು, ಪೊಲೀಸ್ ಅಧಿಕಾರಿಗಳ ಮನವಿಗೆ ಸ್ಪಂದಿಸಿ ಪ್ರತಿಭಟನೆ ಹಿಂಪಡೆದಿದ್ದಾರೆ.</p>.<p>ಪ್ರತಿಭಟನೆಯ ನೇತೃತ್ವವಹಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಸದಸ್ಯ ಮುರಳಿ, ತಾಲ್ಲೂಕಿನ ಅಂಚೇಪಾಳ್ಯ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳ ರಾಸಾಯನಿಕ ತ್ಯಾಜ್ಯವನ್ನು ಗೊಟ್ಟಿಗೆರೆ ಕೆರೆಗೆ ಬಿಡುತ್ತಿರುವ ಕಾರಣ ಕೆರೆ ಕುಲುಷಿತಗೊಂಡು ಸುತ್ತುಮುತ್ತಲ ಗ್ರಾಮಗಳಲ್ಲಿ ಅನಾರೋಗ್ಯಕರ ವಾತಾವರಣ ನಿರ್ಮಾಣವಾಗಿದೆ. ಈ ವ್ಯಾಪ್ತಿಯಲ್ಲಿ ಏಳು ಕೊಳವೆಬಾವಿಗಳನ್ನು ಕೊರೆದಿದ್ದರೂ ನೀರು ಕುಡಿಯಲು ಮತ್ತು ಬಳಕೆಗೂ ಯೋಗ್ಯವಾಗಿಲ್ಲ ಎಂದು ಸಂಬಂದಪಟ್ಟ ಇಲಾಖೆಯ ವರದಿಗಳು ಬಂದಿವೆ.</p>.<p>ಜನರು ಚರ್ಮರೋಗ ಸೇರಿದಂತೆ ಇತರೆ ರೋಗಗಳಿಂದ ಬಳಲುತ್ತಿದ್ದಾರೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದರೂ, ಪ್ರಯೋಜನವಾಗದ ಕಾರಣ ಕೆರೆ ಸಂರಕ್ಷಣೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ ಎಂದರು.</p>.<p>ಸ್ಥಳಕ್ಕೆ ಸಿಪಿಐ ನವೀಣ್ ಗೌಡ, ತಾಲ್ಲೂಕು ಆರೋಗ್ಯಾಧಿಕಾರಿ ಮರಿಯಪ್ಪ ಭೇಟಿ ನೀಡಿ ಕಂದಾಯ, ಕೈಗಾರಿಕೆ ಮತ್ತು ಪರಿಸರ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಹಾರಕ್ಕೆ ಕ್ರಮಕೂಗೊಳ್ಳುವ ಭರವಸೆ ನೀಡಿದ ಮೇರೆಗೆ ಪ್ರತಿಭಟನೆ ಹಿಂಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್:</strong> ತಾಲ್ಲೂಕಿನ ಗೊಟ್ಟಗೆರೆ ಕೆರೆ ಸಂರಕ್ಷಣೆಗೆ ಆಗ್ರಹಿಸಿದ ಗ್ರಾಮಸ್ಥರು ಶನಿವಾರ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ರಸ್ತೆ ತಡೆದು ಪ್ರತಿಭಟನೆಗೆ ಮುಂದಾಗಿದ್ದು, ಪೊಲೀಸ್ ಅಧಿಕಾರಿಗಳ ಮನವಿಗೆ ಸ್ಪಂದಿಸಿ ಪ್ರತಿಭಟನೆ ಹಿಂಪಡೆದಿದ್ದಾರೆ.</p>.<p>ಪ್ರತಿಭಟನೆಯ ನೇತೃತ್ವವಹಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಸದಸ್ಯ ಮುರಳಿ, ತಾಲ್ಲೂಕಿನ ಅಂಚೇಪಾಳ್ಯ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳ ರಾಸಾಯನಿಕ ತ್ಯಾಜ್ಯವನ್ನು ಗೊಟ್ಟಿಗೆರೆ ಕೆರೆಗೆ ಬಿಡುತ್ತಿರುವ ಕಾರಣ ಕೆರೆ ಕುಲುಷಿತಗೊಂಡು ಸುತ್ತುಮುತ್ತಲ ಗ್ರಾಮಗಳಲ್ಲಿ ಅನಾರೋಗ್ಯಕರ ವಾತಾವರಣ ನಿರ್ಮಾಣವಾಗಿದೆ. ಈ ವ್ಯಾಪ್ತಿಯಲ್ಲಿ ಏಳು ಕೊಳವೆಬಾವಿಗಳನ್ನು ಕೊರೆದಿದ್ದರೂ ನೀರು ಕುಡಿಯಲು ಮತ್ತು ಬಳಕೆಗೂ ಯೋಗ್ಯವಾಗಿಲ್ಲ ಎಂದು ಸಂಬಂದಪಟ್ಟ ಇಲಾಖೆಯ ವರದಿಗಳು ಬಂದಿವೆ.</p>.<p>ಜನರು ಚರ್ಮರೋಗ ಸೇರಿದಂತೆ ಇತರೆ ರೋಗಗಳಿಂದ ಬಳಲುತ್ತಿದ್ದಾರೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದರೂ, ಪ್ರಯೋಜನವಾಗದ ಕಾರಣ ಕೆರೆ ಸಂರಕ್ಷಣೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ ಎಂದರು.</p>.<p>ಸ್ಥಳಕ್ಕೆ ಸಿಪಿಐ ನವೀಣ್ ಗೌಡ, ತಾಲ್ಲೂಕು ಆರೋಗ್ಯಾಧಿಕಾರಿ ಮರಿಯಪ್ಪ ಭೇಟಿ ನೀಡಿ ಕಂದಾಯ, ಕೈಗಾರಿಕೆ ಮತ್ತು ಪರಿಸರ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಹಾರಕ್ಕೆ ಕ್ರಮಕೂಗೊಳ್ಳುವ ಭರವಸೆ ನೀಡಿದ ಮೇರೆಗೆ ಪ್ರತಿಭಟನೆ ಹಿಂಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>